• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬಿಜೆಪಿ ಹಾದಿಯಲ್ಲಿ ಕಾಂಗ್ರೆಸ್, ಕಚೇರಿ ಸ್ಥಳಾಂತರಕ್ಕೆ ನಿರ್ಧಾರ!

Tulunadu News Posted On December 21, 2023


  • Share On Facebook
  • Tweet It

ವಾಸ್ತು ಬದಲಾವಣೆಯಿಂದ ಕೆಲವೊಮ್ಮೆ ಪವಾಡಗಳು ಕೂಡ ನಡೆಯುವುದುಂಟು. ಲೋಕಸಭೆ ಮತ್ತು ಉತ್ತರ ಭಾರತದ ರಾಜ್ಯಗಳಲ್ಲಿ ಸತತ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ಪಕ್ಷ ತನ್ನ ಅಖಿಲ ಭಾರತ ಕಾಂಗ್ರೆಸ್ ಕಚೇರಿಯನ್ನು ಬದಲಾಯಿಸಲು ಚಿಂತನೆ ನಡೆಸಿದೆ. ಪ್ರಸ್ತುತ ನವದೆಹಲಿಯ ಅಕ್ಬರ್ ರಸ್ತೆ – 24, ಸೌತ್ ಬ್ಲಾಕ್, ಮಾನಸಿಂಗ್ ರಸ್ತೆಯಲ್ಲಿರುವ ಎಐಸಿಸಿ ಕಚೇರಿಯು 2024 ರ ಜನವರಿ ಎರಡನೇ ವಾರದಲ್ಲಿ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿದೆ. ಹೊಸ ಪ್ರಧಾನ ಕಚೇರಿಯನ್ನು ಇಂದಿರಾ ಭವನ ಎಂದು ಕರೆಯಲಾಗುತ್ತದೆ.


ಈಗಾಗಲೇ ಭಾರತೀಯ ಜನತಾ ಪಾರ್ಟಿಯ ಕೇಂದ್ರ ಕಚೇರಿ ದೀನ ದಯಾಳ್ ಉಪಾಧ್ಯಾಯ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಅತ್ಯಾಧುನಿಕ ಸ್ಪರ್ಶ ಮತ್ತು ವಿಶಾಲವಾದ ಕಟ್ಟಡವಾಗಿದ್ದು 2018 ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಇದನ್ನು ಉದ್ಘಾಟಿಸಿದ್ದರು. ಚುನಾವಣೆಗಳ ಫಲಿತಾಂಶದ ದಿನದಂದು ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಅಮಿತ್ ಶಾ, ರಾಜನಾಥ್ ಸಿಂಗ್ ಸಹಿತ ಪ್ರಮುಖರು ಈ ಕಚೇರಿಯ ಮೇಲೆ ವೇದಿಕೆಯಾಕಾರದ ಜಾಗದಲ್ಲಿ ನಿಂತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವುದನ್ನು ಟಿವಿಯಲ್ಲಿ ನೋಡಿರಬಹುದು. ಅದು 1.70 ಲಕ್ಷ ಚದರ ಅಡಿಯಲ್ಲಿ ವಿಸ್ತ್ರೀರ್ಣ ಹೊಂದಿದೆ.

ಈಗ ಅದೇ ರಸ್ತೆಯಲ್ಲಿ ಕಾಂಗ್ರೆಸ್ ಕಚೇರಿ ಕೂಡ ನಿರ್ಮಾಣ ಹಂತದಲ್ಲಿದ್ದು ಬಹುತೇಕ ಪೂರ್ಣಗೊಂಡಿದೆ. ನೂತನ ಕಾಂಗ್ರೆಸ್ ಕಚೇರಿ 6 ಮಹಡಿಗಳನ್ನು ಹೊಂದಿದ್ದು, ಎಲ್ಲಾ ಆಧುನಿಕ ಸೌಕರ್ಯಗಳನ್ನು ಗಮನದಲ್ಲಿಟ್ಟುಕೊಂಡು ನಿರ್ಮಿಸಲಾಗಿದೆ. ಪ್ರಸ್ತುತ ಇರುವ ಕಾಂಗ್ರೆಸ್ ಕಚೇರಿಯನ್ನು 1978 ರಲ್ಲಿ ಇಂದಿರಾ ಗಾಂಧಿ ನಿರ್ಮಿಸಿದ್ದರು. 44 ವರ್ಷಗಳ ಬಳಿಕ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಕಚೇರಿ ಸ್ಥಳಾಂತರಗೊಳ್ಳಲಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search