• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಾವೂದ್ ಆಸ್ತಿ ಹರಾಜಿಗೆ ದಿನ ಫಿಕ್ಸ್!

Tulunadu News Posted On December 25, 2023
0


0
Shares
  • Share On Facebook
  • Tweet It

ಕುಖ್ಯಾತ ಭೂಗತ ಪಾತಕಿ, ಕ್ರಿಮಿನಲ್ ದಾವೂದ್ ಇಬ್ರಾಹಿಂನ ಮುಂಬೈ ಮತ್ತು ರತ್ನಗಿರಿಯಲ್ಲಿರುವ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಆಸ್ತಿಯನ್ನು ಹರಾಜಿಗೆ ಇಡಲಾಗಿದೆ. 2024 ರ ಜನವರಿ 5 ರಂದು ಕೇಂದ್ರ ಸರಕಾರ ಈ ಆಸ್ತಿಗಳನ್ನು ಹರಾಜಿನ ಮೂಲಕ ಮಾರಾಟ ಮಾಡಲಿದೆ.

ಒಂದು ವೇಳೆ ದಾವೂದ್ ಇನ್ನೂ ಬದುಕಿದ್ದರೆ ಅವನಿಗೆ ಇದೊಂದು ಶಾಕ್ ಆಗಬಹುದು ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ ವಿಷಪ್ರಾಶನದ ಮೂಲಕ ದಾವೂದ್ ಮೃತನಾಗಿದ್ದಾನೆ ಎನ್ನುವ ವಿಚಾರವನ್ನು ಅಲ್ಲಿಯ ಪತ್ರಕರ್ತರೊಬ್ಬರು ನೀಡಿದ ಸುಳಿವಿನ ಮೇರೆಗೆ ಭಾರತೀಯ ಮಾಧ್ಯಮಗಳು ಅದನ್ನು ಬಹಿರಂಗಗೊಳಿಸಿದ್ದರು. ಆದರೆ ಆ ಸುದ್ದಿ ಇನ್ನು ಕೂಡ ಅಧಿಕೃತವಾಗಿ ಘೋಷಣೆಯಾಗಿಲ್ಲ. ಆ ಸುದ್ದಿ ನಿಜವೋ, ಅಲ್ಲವೋ ಎನ್ನುವುದು ಜನವರಿ 5 ಕ್ಕೆ ತಿಳಿಯಲಿದೆ. ಒಂದು ವೇಳೆ ಆತ ಸತ್ತಿದ್ದರೆ ಈ ಏಲಂ ವಿಷಯದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಯಾವುದೇ ಸಂಚಲನ ಮೂಡದೇ ವಿಷಯ ಅಲ್ಲಿಗೆ ಮುಕ್ತಾಯವಾಗಬಹುದು. ಒಂದು ವೇಳೆ ಆತ ಬದುಕಿದ್ದರೆ ಆತ ಏನಾದರೂ ಒಂದು ಕ್ರಮ ತೆಗೆದುಕೊಂಡೇ ಕೊಳ್ಳುತ್ತಾನೆ. ಅದನ್ನು ರಾ ಬಹಳ ಸೂಕ್ಷ್ಮವಾಗಿ ಗಮನಿಸುತ್ತಿದೆ. ದಾವೂದ್ ಏನಾದರೂ ಒಂದು ತಪ್ಪು ಮಾಡಲಿ ಎಂದು ಅಂತರಾಷ್ಟ್ರೀಯ ತನಿಖಾ ಸಂಸ್ಥೆಗಳು ಕೂಡ ಕಾಯುತ್ತಿವೆ.

ಈಗ ಜನವರಿ 5 ರಂದು ಹರಾಜಿಗೆ ಇಟ್ಟಿರುವ ಆಸ್ತಿಗಳಲ್ಲಿ ದಾವೂದ್ ಹುಟ್ಟಿದ ರತ್ನಗಿರಿ ಜಿಲ್ಲೆಯ ಖೇಡಾ ತಾಲೂಕಿನಲ್ಲಿ ಆತನ ಬಂಗ್ಲೆ ಮತ್ತು ವಿಶಾಲ ಮಾವಿನ ತೋಪು ಕೂಡ ಇದೆ. 2017 ರಲ್ಲಿ ದಾವೂದ್ ಮಾಲೀಕತ್ವದ ದಕ್ಷಿಣ ಮುಂಬೈನಲ್ಲಿದ್ದ ಹೋಟೇಲ್, ರೂಂಗಳನ್ನು, ಅತಿಥಿ ಗೃಹವನ್ನು ಎನ್ ಡಿಎ ನೇತೃತ್ವದ ಕೇಂದ್ರ ಸರಕಾರ ಹರಾಜಿನ ಮೂಲಕ ಮಾರಿತ್ತು ಎನ್ನುವುದನ್ನು ಇಲ್ಲಿ ಸ್ಮರಿಸಬಹುದು.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search