• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಹಿಂದೂ ಯುವತಿಯರ ಮತಾಂತರ, ಕೇರಳ ಇದರ ಆಗರ

TNN Correspondent Posted On August 31, 2017
0


0
Shares
  • Share On Facebook
  • Tweet It

ತಿರುವನಂತಪುರ: ಕೇರಳದಲ್ಲಿ ಇದುವರೆಗೂ ಹಿಂದೂ ಯುವತಿಯರನ್ನು ಮುಸ್ಲಿಂ ಯುವಕರು ಪ್ರೀತಿಯ ಹೆಸರಲ್ಲಿ (ಲವ್ ಜಿಹಾದ್) ಮತಾಂತರಗೊಳಿಸಲಾಗುತ್ತದೆ ಎಂಬ ಮಾತು ಆಗಾಗ ಕೇಳಿಬರುತ್ತಿದ್ದವು. ಆದರೆ ಈ ಮಾತಿಗೆ ಈಗ ಇನ್ನಷ್ಟು ಪುಷ್ಟಿ ಬಂದಿದ್ದು, ಇತ್ತೀಚೆಗೆ ಲವ್ ಜಿಹಾದ್ ಪ್ರಕರಣ ಜಾಸ್ತಿಯಾಗಿವೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯೇ ಮಾಹಿತಿ ನೀಡಿದೆ.
ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ದಾವಾ ಸ್ಕ್ವಾಡ್ (ಮತಾಂತರಗೊಳಿಸಲು ರಚಿಸಿರುವ ತಂಡ)ಗಳು ಕೇರಳದಲ್ಲಿ ಹೇರಳವಾಗಿ ಹಿಂದೂ ಯುವತಿಯರಿಗೆ ನಕಲಿ ಪ್ರೀತಿಯ ಬಲೆ ಹಾಕಿ ಮತಾಂತರಗೊಳಿಸಲಾಗುತ್ತಿದೆ ಎಂದು ಎನ್‌ಐಎ ಹಾಗೂ ಪೊಲೀಸ್ ದಾಖಲೆಗಳಿಂದ ತಿಳಿದುಬಂದಿದೆ.
ಎನ್‌ಐಎ ದಾಖಲೆಯ ಪ್ರಕಾರ ಒಂದು ವರ್ಷದಲ್ಲಿ 105 ಹಿಂದೂ ಯುವತಿಯರನ್ನು ಲವ್‌ಜಿಹಾದ್ ಹೆಸರಲ್ಲಿ ಬಲವಂತವಾಗಿ ಮತಾಂತರಗೊಳಿಸಲಾಗಿದೆ ಎಂದು ಎನ್‌ಐಎ ಸಂಸ್ಥೆ ತಿಳಿಸಿದೆ.
ಹಿಂದೂ ಬಡ ಯುವತಿಯರನ್ನು ಗುರಿಯಾಗಿಸಿಕೊಳ್ಳುವ ಈ ಮೂಲಭೂತವಾದಿಗಳು, ಆ ಯುವತಿಯರ ಜತೆ ಪ್ರೀತಿಯ ನಾಟಕವಾಡುತ್ತಾಾರೆ. ಅವರನ್ನು ವಿದೇಶಕ್ಕೆ ಕರೆದೊಯ್ದು ಲೈಂಗಿಕವಾಗಿ ಬಳಸಿಕೊಳ್ಳುತ್ತಾರೆ. ಬಳಿಕ ಅವರನ್ನು ತಾಯಿನಾಡಿಗೆ ಕರೆತಂದು ಬಲವಂತವಾಗಿ ಮತಾಂತರಗೊಳಿಸಲಾಗುತ್ತಿದೆ ಎಂದು ವರದಿಯಿಂದ ತಿಳಿದುಬಂದಿದೆ.

ಏನಿದು ದಾವಾ ಸ್ಕ್ವಾಡ್?
ದಾವಾ ಸ್ಕ್ವಾಡ್ ಒಂದು ಮುಸ್ಲಿಮರ ತಂಡವಾಗಿದ್ದು, ಹಿಂದೂ ಯುವತಿಯರಿಗೆ ಹಲವು ಆಮಿಷ ನೀಡಿ ಅವರನ್ನು ಮತಾಂತರಗೊಳಿಸುವುದೇ ಈ ತಂಡದ ಮೂಲ ಉದ್ದೇಶವಾಗಿದೆ. ಇದರಲ್ಲಿ ನೋಡಲು ಸುಂದರವಾಗಿರುವ, ನೌಕರಿ ಅಥವಾ ಪದವಿ ಹೊಂದಿರುವ ಯುವಕರು ಈ ಗುಂಪಿನಲ್ಲಿದ್ದು, ಯುವತಿಯರನ್ನು ಪ್ರೀತಿಯ ಬಲೆಯಲ್ಲಿ ಕೆಡವುವುದೇ ಇವರ ಕರ್ತವ್ಯ. ಮುಸ್ಲಿಂ ಮೂಲಭೂತವಾದಿಗಳೇ ಇವರಿಗೆ ಹಣ ಸಂದಾಯ ಮಾಡುತ್ತಾರೆ ಎಂದು ಎನ್‌ಐಎ ತಿಳಿಸಿದೆ.

ಯಾರು ಇವರ ಟಾರ್ಗೆಟ್?
18-25 ವಯಸ್ಸಿಿನ ಬಡ, ಪೋಷಕರಿಲ್ಲದ ಯುವತಿಯರೇ ಇವರ ಗುರಿ.

ಯಾವ ಸಂಘಟನೆ ಹಾಗೂ ಪಕ್ಷಗಳ ಬೆಂಬಲ?
ಪಾಪುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ)
ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)

139 ಯುವತಿಯರ ಮತಾಂತರ
ಒಂದು ವರದಿಯ ಪ್ರಕಾರ ಕೇರಳದ ಪಲಕ್ಕಾಡ್ ಒಂದರಲ್ಲೇ ಎರಡು ವರ್ಷಗಳಲ್ಲಿ ಇಷ್ಟು ಯುವತಿಯರನ್ನು ಮತಾಂತರಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search