• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅಯೋಧ್ಯೆಗೆ ತಲುಪಿ ದೇವರ ದರ್ಶನದ ತನಕ ಹೇಗಿದೆ ವ್ಯವಸ್ಥೆ..

Tulunadu News Posted On January 2, 2024


  • Share On Facebook
  • Tweet It

ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಭವ್ಯ ಶ್ರೀ ರಾಮ ಮಂದಿರದಲ್ಲಿ ಶ್ರೀರಾಮ ದೇವರನ್ನು ನೋಡುವ ಕೌತುಕ ನಿಮ್ಮಲ್ಲಿ ಈಗ ಮೂಡಿರಬಹುದು. ಜನವರಿ 22 ರಂದು ದೇವಸ್ಥಾನದಲ್ಲಿ ಪ್ರಾಣ ಪ್ರತಿಷ್ಠಾಪನಾ ಕಾರ್ಯ ನಡೆಯುವುದರಿಂದ ದೇಶದ 6000 ಗಣ್ಯಾತೀಗಣ್ಯರಿಗೆ ಮಾತ್ರ ಆಹ್ವಾನ ನೀಡಿರುವುದರಿಂದ ಆವತ್ತು ಭಕ್ತಾದಿಗಳು ದೇವಸ್ಥಾನಕ್ಕೆ ಬರದೇ ಮುಂದಿನ ದಿನಗಳಲ್ಲಿ ಆಗಮಿಸಬಹುದು ಎಂದು ಪ್ರಧಾನಿ ನರೇಂದ್ರ ಮೋದಿಯೇ ಹೇಳಿದ್ದಾರೆ. ಆದರೆ ಮುಂದಿನ ದಿನಗಳಲ್ಲಿ ದೇವಸ್ಥಾನಕ್ಕೆ ಹೋಗಲು ಬಯಸುವವರು ಹೇಗೆ ಅಯೋಧ್ಯೆಗೆ ತೆರಳಬಹುದು ಎನ್ನುವ ಮಾಹಿತಿ ಇಲ್ಲಿದೆ.

ನೀವು ರೈಲಿನಲ್ಲಿ ಹೋಗುವವರಾದರೆ ರೈಲ್ವೆ ನಿಲ್ದಾಣದಿಂದ ಕೇವಲ ಐದು ಕಿಲೋ ಮೀಟರ್ ದೂರದಲ್ಲಿ ರೈಲು ನಿಲ್ದಾಣವಿದೆ. ಇನ್ನು ಲಕ್ನೋ ಹಾಗೂ ದೆಹಲಿ ಸಹಿತ ಆಸುಪಾಸಿನ ಪ್ರದೇಶಗಳಿಂದ ನೇರ ಬಸ್ ಸೇವೆಯ ಮೂಲಕ ಅಯೋಧ್ಯೆಯನ್ನು ತಲುಪಬಹುದು. ಇನ್ನು ನೀವು ವಿಮಾನದಲ್ಲಿ ಪ್ರಯಾಣ ಬೆಳೆಸುವವರಾದರೆ ಅಯೋಧ್ಯೆಯಲ್ಲಿ ನೂತನ ವಿಮಾನ ನಿಲ್ದಾಣವೂ ನಿರ್ಮಾಣವಾಗಿದೆ. ಅದನ್ನು ಇತ್ತೀಚೆಗೆ ಪ್ರಧಾನಿ ಮೋದಿಯವರೇ ಉದ್ಘಾಟಿಸಿರುವುದು ನಮಗೆಲ್ಲಾ ಗೊತ್ತೆ ಇದೆ.

ಅಯೋಧ್ಯೆಯ ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಮ ಮಂದಿರಕ್ಕೆ ಹತ್ತು ಕಿಲೋ ಮೀಟರ್ ಅಂತರವಿದೆ. ಪ್ರಸ್ತುತ ದೆಹಲಿ ಮತ್ತು ಅಹಮದಾಬಾದಿನಿಂದ ಅಯೋಧ್ಯೆಗೆ ವಿಮಾನ ಸಂಪರ್ಕಗಳಿವೆ. ಇನ್ನು ದೇಶದ ವಿವಿಧ ಭಾಗಗಳಿಂದ ತೆರಳುವವರು ಲಕ್ನೋ, ಗೋರಖಪುರ ಹಾಗೂ ವಾರಣಾಸಿ ವಿಮಾನ ನಿಲ್ದಾಣಗಳಲ್ಲಿ ಇಳಿದು ಅಲ್ಲಿಂದ ರೈಲು ಮತ್ತು ಬಸ್ ಮೂಲಕ ಅಯೋಧ್ಯೆಯನ್ನು ತಲುಪಬಹುದು.


ಶ್ರೀರಾಮನ ಪ್ರತಿಮೆಯನ್ನು ದೇವಾಲಯದಲ್ಲಿ 30 ಅಡಿ ದೂರದಿಂದ ನೋಡಬಹುದು. ದೇವಾಲಯದ ಪೂರ್ವ ದಿಕ್ಕಿನಿಂದ ಭಕ್ತರು ದರ್ಶನಕ್ಕೆ ಬರುತ್ತಾರೆ. ಅವರು ಸಿಂಹದ್ವಾರದ ಮೂಲಕ ಚಲಿಸಿದ ತಕ್ಷಣ, ರಾಮ ಲಲ್ಲಾನ ದರ್ಶನ ಪಡೆದು ಎಡಕ್ಕೆ ತಿರುಗಿ ಹೊರಗೆ ಹೋಗಬೇಕು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search