• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಯೋಧ್ಯೆಗೆ 1 ಲಕ್ಷ ಲಡ್ಡು ಬರುತ್ತಿರುವುದು ಎಲ್ಲಿಂದ ಗೊತ್ತಾ?

Tulunadu News Posted On January 6, 2024
0


0
Shares
  • Share On Facebook
  • Tweet It

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರದ ಉದ್ಘಾಟನೆಗೆ ಬೆರಳೆಣಿಕೆಯ ದಿನಗಳು ಬಾಕಿ ಇವೆ. ಜನವರಿ 22 ರಂದು ನಡೆಯುವ ಉದ್ಘಾಟನಾ ಕಾರ್ಯಕ್ರಮಕ್ಕೆ ಕೊನೆಯ ಹಂತದ ತಯಾರಿಗಳು ನಡೆಯುತ್ತಿವೆ. ದೇಶದ ವಿವಿಧ ಭಾಗಗಳಿಂದ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಹಂತದಲ್ಲಿ ಒಂದು ಲಕ್ಷ ಲಡ್ಡುಗಳನ್ನು ತಿರುಪತಿ ತಿರುಮಲ ದೇವಸ್ವಂ ಕಡೆಯಿಂದ ಅಯೋಧ್ಯೆಯ ರಾಮ ಮಂದಿರಕ್ಕೆ ಕಳುಹಿಸಿಕೊಡಲು ಟಿಟಿಡಿ ನಿರ್ಧರಿಸಿದೆ. ಈ ಬಗ್ಗೆ ಮಾತನಾಡಿದ ಟಿಟಿಡಿ ಇದರ ಕಾರ್ಯನಿರ್ವಹಣಾ ಅಧಿಕಾರಿ ಎ ವಿ ಧರ್ಮಾ ರೆಡ್ಡಿಯವರು ಶ್ರೀ ವೆಂಕಟೇಶ್ವರ ದೇವರು ಮತ್ತು ಶ್ರೀ ರಾಮ ದೇವರು ಮಹಾವಿಷ್ಣುವಿನ ಅವತಾರವಾಗಿದ್ದಾರೆ.

ಇಡೀ ದೇಶವೇ ಭವ್ಯ ಶ್ರೀರಾಮ ಮಂದಿರದ ಉದ್ಘಾಟನೆಗಾಗಿ ಎದುರು ನೋಡುತ್ತಾ ಇದೆ. ಅಯೋಧ್ಯೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮ ಐತಿಹಾಸಿಕವಾದುದು. ನಾವು ಅಲ್ಲಿ ಭಕ್ತಾದಿಗಳಿಗೆ ತಿರುಪತಿ ಲಡ್ಡುಗಳನ್ನು ಪ್ರಸಾದ ರೂಪವಾಗಿ ಹಂಚಲಿದ್ದೇವೆ ಎಂದು ತಿಳಿಸಿದ್ದಾರೆ. ತಿರುಪತಿ ಲಡ್ಡು ಪ್ರಸಾದಕ್ಕೆ ವಿಶೇಷ ಮಹತ್ವವಿದೆ. ತಿರುಪತಿಗೆ ಬರುವ ಭಕ್ತರು ಈ ಪ್ರಸಾದವನ್ನು ತೆಗೆದುಕೊಂಡು ಊರಿಗೆ ಮರಳಿದ ನಂತರ ತಮ್ಮ ಸಂಬಂಧಿಕರಿಗೆ, ಗೆಳೆಯರಿಗೆ ಹಂಚುವ ವಾಡಿಕೆ ಇದೆ. ತಿರುಪತಿ ಪ್ರಸಾದವನ್ನು ಸೇವಿಸಿದವರು ಅಲ್ಲಿಗೆ ಹೋಗಿಬಂದಷ್ಟೇ ಭಕ್ತಿಭಾವದಿಂದ ಖುಷಿಪಡುತ್ತಾರೆ. ಈಗ ಅಯೋಧ್ಯೆಯಲ್ಲಿ ಜನವರಿ 22 ರಂದು ಕನಿಷ್ಟ 10 ಸಾವಿರ ಜನರು ಉದ್ಘಾಟನೆಯ ದಿನ ಸೇರುವ ನಿರೀಕ್ಷೆ ಇದೆ. ಉಳಿದ ಲಡ್ಡು ಪ್ರಸಾದವನ್ನು ನಂತರದ ದಿನಗಳಲ್ಲಿ ಬರುವ ಭಕ್ತರಿಗಾಗಿ ನೀಡುವ ವ್ಯವಸ್ಥೆ ಆಗಬಹುದು. ಒಟ್ಟಿನಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಯೂ ಪ್ರಭು ಶ್ರೀ ರಾಮನಿಗಾಗಿ ಏನಾದರೂ ಸೇವೆ ಸಲ್ಲಿಸಿ ಪಾವನರಾಗುವ ಸಂಕಲ್ಪದಲ್ಲಿದ್ದಾರೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search