• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಎಸ್ ಪಿಜಿ ಕಮಾಂಡೊಗಳು ಕೂಡ ಧೋತಿಯಲ್ಲಿ!

Tulunadu News Posted On January 19, 2024
0


0
Shares
  • Share On Facebook
  • Tweet It

ಭಾರತದ ಪ್ರಧಾನ ಮಂತ್ರಿಯವರು ಮೊನ್ನೆಯಷ್ಟೇ ಕೇರಳ ಪ್ರವಾಸಕ್ಕೆ ಹೋಗಿ ಬಂದಿದ್ದಾರೆ. ಅವರು ಅಲ್ಲಿ ತ್ರಿಶೂರ್ ನಲ್ಲಿರುವ ಶ್ರೀ ಗುರುವಾಯೂರ್ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಕೇರಳದ ದೇವಸ್ಥಾನಗಳಲ್ಲಿ ಗಂಡಸರು ಪ್ರವೇಶಿಸುವಾಗ ಅಲ್ಲಿ ಸಾಂಪ್ರದಾಯಿಕ ಉಡುಗೆಗಳಿಗೆ ಮಾತ್ರ ಅವಕಾಶವಿದೆ. ಸಾಂಪ್ರದಾಯಿಕ ಉಡುಗೆಗಳು ಅಲ್ಲಿ ಕಡ್ಡಾಯ. ಅದು ಧೋತಿ ಮತ್ತು ಶಾಲ್ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಷಯ. ಅದನ್ನು ಧರಿಸಿದರೆ ಮಾತ್ರ ಪ್ರವೇಶ ಸಾಧ್ಯ. ಮೋದಿಯವರು ಆಯಾ ಊರುಗಳಿಗೆ ಹೋಗುವಾಗ ಅಲ್ಲಿನ ಸಂಸ್ಕೃತಿಗೆ ತಕ್ಕಂತಹ ಉಡುಗೆ – ತೊಡುಗೆಗಳನ್ನು ಧರಿಸುವುದು ಸಾಮಾನ್ಯ. ಅದನ್ನು ನಾವು ವಿವಿಧ ಫೋಟೋಗಳಲ್ಲಿ, ದೃಶ್ಯಗಳಲ್ಲಿ ಕಾಣಬಹುದು.

ಆದರೆ ಮೋದಿಯವರು ದೇಶ, ವಿದೇಶಗಳ ಯಾವುದೇ ಸ್ಥಳದಲ್ಲಿ ಪ್ರವಾಸದಲ್ಲಿದ್ದಾಗಲೂ ಅವರ ಉಡುಗೆ ತೊಡುಗೆಗಳಲ್ಲಿ ಎಂತಹ ವೈವಿದ್ಯತೆಗಳಿದ್ದರೂ ಅವರ ಸುರಕ್ಷತೆಗಾಗಿ ಇರುವ ವಿಶೇಷ ಸುರಕ್ಷತಾ ದಳದ (ಎಸ್ ಪಿಜಿ) ಕಮಾಂಡೊಗಳ ಡ್ರೆಸ್ ಕೋಡ್ ಮಾತ್ರ ಒಂದೇ ತೆರನಾಗಿರುತ್ತದೆ. ಆದರೆ ಶ್ರೀ ಗುರುವಾಯೂರ್ ನಲ್ಲಿ ಹಾಗೆ ಆಗುವ ಚಾನ್ಸ್ ಇರಲಿಲ್ಲ. ಯಾಕೆಂದರೆ ಅಲ್ಲಿ ಶಿಸ್ತೆಂದರೆ ಶಿಸ್ತು. ಎಷ್ಟೇ ದೊಡ್ಡ ವ್ಯಕ್ತಿಯಿರಲಿ, ಯಾವುದೇ ಕ್ಷೇತ್ರದಲ್ಲಿರಲಿ, ಅವರು ದೇವಸ್ಥಾನ ಪ್ರವೇಶಿಸುವಾಗ ಧೋತಿ, ಬಿಳಿ ಶಾಲ್ ಧರಿಸಿಯೇ ಬರಬೇಕಾಗುತ್ತದೆ.

ಇದನ್ನೆಲ್ಲಾ ಅರಿತಿರುವ ಮೋದಿಯವರು ದೇವಸ್ಥಾನದ ಒಳಗೆ ತಮ್ಮ ಸುರಕ್ಷತೆಗೆ ಬರುವ ಕಮಾಂಡೊಗಳಿಗೆ ಧೋತಿ, ಶಾಲು ಧರಿಸಲು ಸೂಚಿಸಿದ್ದಾರೆ. ಯಾಕೆಂದರೆ ದೇವಸ್ಥಾನದ ಒಳಗೆ ಮೋದಿಯವರನ್ನು ಮಾತ್ರ ಬಿಟ್ಟು ಕಮಾಂಡೊಗಳು ಹೊರಗೆ ನಿಲ್ಲುವಂತಿಲ್ಲ. ಮೋದಿ ಎಲ್ಲಿರುತ್ತಾರೋ ಅಲ್ಲಿ ಆಸುಪಾಸಿನಲ್ಲಿ ಕಮಾಂಡೊಗಳು ಇರಬೇಕು. ಒಳಗೆ ಬರಲು ಧೋತಿ, ಶಾಲು ಧರಿಸಲ್ಲ ಎಂದು ಎಸ್ ಪಿಜಿ ಕಮಾಂಡುಗಳು ಹೇಳುವಂತಿಲ್ಲ. ಯಾಕೆಂದರೆ ಮೋದಿಯವರ ಸುರಕ್ಷೆ ಮುಖ್ಯ. ಆದ್ದರಿಂದ ಕಮಾಂಡೊಗಳು ತಮ್ಮ ಡ್ರೆಸ್ ಕೋಡ್ ಧರಿಸದೇ ಧೋತಿ, ಶಾಲು ಧರಿಸಿ ಮೋದಿಯವರೊಡನೆ ಹೆಜ್ಜೆ ಹಾಕಿದ್ದಾರೆ. ಈ ಮೂಲಕ ಮೋದಿಯವರ ಸುರಕ್ಷೆ ಕೂಡ ಪಾಲಿಸಿದಂತೆ ಆಯಿತು, ಡ್ರೆಸ್ ಕೋಡ್ ಕೂಡ ದೇವಸ್ಥಾನದ ನಿಯಮವನ್ನು ಪಾಲಿಸಿದಂತೆ ಆಯಿತು.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search