• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮುಂಬೈಗೆ ಮಂಗಳೂರಿನಿಂದ ವಂದೇ ಭಾರತ್ ರೈಲು ವಿಸ್ತರಣೆಗೆ ನಳಿನ್ ಪತ್ರ

Tulunadu News Posted On February 21, 2024


  • Share On Facebook
  • Tweet It

ಪ್ರಯಾಣಿಕರ ಅನುಕೂಲತೆಗೆ ಇದು ಅಗತ್ಯ ಎಂದು ರೈಲ್ವೆ ಸಚಿವರಿಗೆ ಮನವಿ

ಮಂಗಳೂರು ಸೆಂಟ್ರಲ್ – ಮಡಗಾಂ ಮಧ್ಯೆ ಸಂಚರಿಸುತ್ತಿರುವ ವಂದೇ ಭಾರತ್ (ವಿ.ಬಿ) ರೈಲನ್ನು ಮುಂಬಯಿಯವರೆಗೆ ವಿಸ್ತರಿಸುವ ಮೂಲಕ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಪ್ರಯಾಣಿಕರಿಗೆ ನ್ಯಾಯ ಒದಗಿಸಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಪ್ರಸ್ತುತ ಕೆಲವರು ಮಂಗಳೂರು ವಂದೇ ಭಾರತ್ ರೈಲನ್ನೇ ಕೋಯಿಕ್ಕೋಡ್ ಗೆ ವಿಸ್ತರಿಸಬೇಕೆಂಬ ಬೇಡಿಕೆ ಮಂಡಿಸಿರುವುದು ಕಂಡುಬಂದಿದೆ. ಆದರೆ ಈ ವಿಸ್ತರಣೆಯಿಂದ ಯಾವುದೇ ಉಪಯೋಗವಿಲ್ಲ. ಅದರ ಬದಲಿಗೆ ಮುಂಬೈಗೆ ವಿಸ್ತರಿಸುವುದರಿಂದ ಹೆಚ್ಚು ಉಪಯೋಗವಿದೆ. ಮಂಗಳೂರು ಭಾಗದಿಂದ ಮುಂಬೈಗೆ ತೆರಳುವ ಎಲ್ಲಾ ರೈಲುಗಳಲ್ಲಿ ಯಾವಾಗಲೂ ಆಸನಗಳು ಭರ್ತಿಯಾಗುವುದರಿಂದ ಈ ರೂಟಿನಲ್ಲಿ ವಂದೇ ಭಾರತ್ ರೈಲು ಓಡಿಸಿದರೆ ಜನರಿಗೂ ಹೆಚ್ಚು ಉಪಯೋಗವಾಗಲಿದೆ. ಮಂಗಳೂರಿನಿಂದ ಮುಂಬೈಗೆ ಉದ್ಯೋಗ, ವ್ಯವಹಾರಕ್ಕೆ ತೆರಳುವವರಿಗೆ ಇದರಿಂದ ತುಂಬಾ ಅನುಕೂಲವಾಗಲಿದೆ ಎಂದು ಸಂಸದರು ತಿಳಿಸಿದ್ದಾರೆ.

ಎರಡು ಪ್ರಮುಖ ಕಡೆ ನಿಲುಗಡೆಗೆ ಮನವಿ

ಈಗ ಈ ರೈಲು ಮೂಕಾಂಬಿಕಾ ರೋಡ್ ಬೈಂದೂರು ಮತ್ತು ಕುಮಟಾ ನಿಲ್ದಾಣಗಳಲ್ಲಿ ನಿಲುಗಡೆಯಿಲ್ಲ. ಈ ಪ್ರದೇಶಗಳಿಗೆ ದೊಡ್ಡ ಸಂಖ್ಯೆಯಲ್ಲಿ ಯಾತ್ರಿಕರು ಬರುತ್ತಾರೆ. ಆದರೆ ವಂದೇ ಭಾರತ್ ಗೆ ನಿಲುಗಡೆ ಇರದ ಕಾರಣ ಪ್ರಯಾಣಿಕರು ಸೌಲಭ್ಯವನ್ನು ಬಳಸಿಕೊಳ್ಳದಂತಾಗಿದೆ. ಮುಂಬೈಗೆ ವಿಸ್ತರಣೆಯಾಗುವಾಗಲೂ ಈ ಎರಡು ನಿಲ್ದಾಣಗಳಲ್ಲಿ ನಿಲುಗಡೆ ಒದಗಿಸಬೇಕು ಎಂದು ನಳಿನ್ ಒತ್ತಾಯಿಸಿದ್ದಾರೆ.
ಇತರ ರೈಲುಗಳಿಗಿಂತ ವಂದೇ ಭಾರತ್ ರೈಲಿನಲ್ಲಿ ಹೆಚ್ಚಿನ ಸೌಲಭ್ಯ, ಉತ್ತಮ ಆಸನ ವ್ಯವಸ್ಥೆ, ಅಧಿಕ ವೇಗ ಹಾಗೂ ಆರಾಮದಾಯಕವಾಗಿದೆ. ಹಾಗಾಗಿ 12 ಗಂಟೆಗಿಂತ ಅಧಿಕ ಪ್ರಯಾಣ ಅವಧಿ ಇದ್ದರೂ ಕುಳಿತು ಪ್ರಯಾಣಿಸುವುದು ತ್ರಾಸದಾಯಕವಲ್ಲ. ಹಾಗಾಗಿ ವಂದೇ ಭಾರತ್ ಮುಂಬಯಿಗೆ ವಿಸ್ತರಣೆಯಾಗಲಿ ಎಂದು ಒತ್ತಾಯಿಸಿದ್ದಾರೆ.
ಮಂಗಳೂರು – ಮಡಗಾಂ ವಿಸ್ತರಣೆ ಅಸಾಧ್ಯವಾದರೆ ಮಂಗಳೂರು – ಮಡಗಾಂ ರೈಲನ್ನೇ ಮುಂಬೈಗೆ ಈಗಿರುವ ಕೋಚ್ ಗಳೊಂದಿಗೆ ವಾರಕ್ಕೆ ಮೂರು ದಿನಗಳಂತೆ ಮುಂಬೈ ಮತ್ತು ಮಂಗಳೂರು ಸೆಂಟ್ರಲ್ ಮಧ್ಯೆ ಓಡಿಸಿದರೆ ಜನರಿಗೆ ಅನುಕೂಲವಾಗಲಿದೆ. ಹಾಗೆಯೇ ಪ್ರವಾಸೋದ್ಯಮಕ್ಕೂ ಪುಷ್ಟಿ ಸಿಗಲಿದೆ ಎಂದು ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search