• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೂರದರ್ಶನದ ರಾಮ ಆಗ್ತಾರಾ ಮೀರತ್ ಸಂಸದ?

Tulunadu News Posted On March 19, 2024
0


0
Shares
  • Share On Facebook
  • Tweet It

35 ವರ್ಷಗಳ ಹಿಂದೆ ದೂರದರ್ಶನದಲ್ಲಿ ಪ್ರಸಾರಗೊಂಡು ಇಡೀ ದೇಶದಲ್ಲಿ ಪ್ರಖ್ಯಾತಗೊಂಡಿದ್ದ ರಾಮಾಯಣ ಧಾರಾವಾಹಿಯ ಶ್ರೀರಾಮ ಪಾತ್ರಧಾರಿ ಅರುಣ್ ಗೋವಿಲ್ ಅವರು ಉತ್ತರ ಪ್ರದೇಶದ ಮೀರತ್ ಲೋಕಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ದಟ್ಟವಾಗಿದೆ.

ಧಾರಾವಾಹಿ ಮೊದಲ ಬಾರಿಗೆ ಪ್ರಸಾರಗೊಂಡು ಮೂರವರೆ ದಶಕಗಳ ಬಳಿಕವೂ ಅರುಣ್ ಗೋವಿಲ್ ಜನಪ್ರಿಯತೆ ಮಾಸಿಲ್ಲ. ಅವರು ಹೋದಲೆಲ್ಲಾ ಗ್ರಾಮಸ್ಥರು ಅವರ ಕಾಲಿಗೆ ಬಿದ್ದು ಆರ್ಶೀವಾದ ಪಡೆಯುವುದು ಇವತ್ತಿಗೂ ಮುಂದುವರೆದಿದೆ. ಅವರು ತಾನು ದೇವರಲ್ಲ ಎಂದು ಎಷ್ಟೇ ಹೇಳಿದರೂ ಅವರನ್ನೇ ಶ್ರೀರಾಮ ಎಂದು ಅಂದುಕೊಂಡಿರುವ ಅಮಾಯಕರ ಸಂಖ್ಯೆ ಏನೂ ಕಡಿಮೆ ಇಲ್ಲ. ಅವರ ಜನಪ್ರಿಯತೆಯನ್ನು ಚುನಾವಣೆಗೆ ಬಳಸಿಕೊಳ್ಳುವ ಯೋಚನೆಯಲ್ಲಿರುವ ಭಾರತೀಯ ಜನತಾ ಪಾರ್ಟಿ ಅವರಿಗೆ ಮೀರತ್ ಲೋಕಸಭೆಯ ಟಿಕೆಟ್ ಘೋಷಣೆ ಮಾಡುವ ಸಾಧ್ಯತೆ ಇದೆ. ಮೀರತ್ ಲೋಕಸಭಾ ಕ್ಷೇತ್ರದಿಂದ ಕಳೆದ ಬಾರಿ ಮೂರು ಬಾರಿ ಬಿಜೆಪಿಯ ರಾಜೇಂದ್ರ ಅಗರವಾಲ್ ಗೆಲ್ಲುತ್ತಾ ಬಂದಿದ್ದಾರೆ. ಈ ಬಾರಿ ಅವರನ್ನು ಬದಲಾಯಿಸಿ ಅರುಣ್ ಗೋವಿಲ್ ಅವರನ್ನು ಕಣಕ್ಕೆ ಇಳಿಸುವ ಸಾಧ್ಯತೆ ಇದೆ.

ಇನ್ನು ಏಪ್ರಿಲ್ 17 ರಂದು ರಾಮ ನವಮಿ ಬರುವುದರಿಂದ ಅಂದು ಪ್ರಧಾನಿ ನರೇಂದ್ರ ಮೋದಿಯವರು ಅಯೋಧ್ಯೆಗೆ ಭೇಟಿ ನೀಡಿ ಅಲ್ಲಿ ದೇವರಿಗೆ ಪೂಜೆ ಸಲ್ಲಿಸಲಿದ್ದಾರೆ. ಅದರ ಎರಡು ದಿನಗಳ ಬಳಿಕ ದೇಶ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ತಯಾರಾಗುವುದರಿಂದ ರಾಮನವಮಿಯಂದು ಅಯೋಧ್ಯೆಯ ರಾಮಪೂಜೆ ಬಹಳ ಪ್ರಮುಖ ಸಂದೇಶವನ್ನು ದೇಶಕ್ಕೆ ನೀಡಲಿದೆ. ಇನ್ನು ಈ ಬಾರಿಯ ರಾಮ ನವಮಿಯನ್ನು ರಾಷ್ಟ್ರಾದ್ಯಂತ ಅದ್ದೂರಿಯಾಗಿ ಆಚರಿಸಲು ಬಿಜೆಪಿ ತೀರ್ಮಾನಿಸಿದಂತಿದೆ. ಈ ಮೂಲಕ ಅಯೋಧ್ಯೆಯ ಭವ್ಯ ರಾಮ ಮಂದಿರದ ಹಿಂದಿನ ಶ್ರಮ ಜನ ಮತ್ತೆ ಸ್ಮರಿಸುವಂತಾಗಲಿ ಎನ್ನುವುದು ಮತ್ತು ಎಪ್ರಿಲ್ 19 ರಂದು ದೇಶ ಮೊದಲ ಹಂತದ ಮತದಾನಕ್ಕೆ ಸಜ್ಜಾಗುವುದರಿಂದ ಇಂತಹ ರಣತಂತ್ರ ಹೆಣೆಯುವ ಸಾಧ್ಯತೆ ಇದೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search