• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾರ್ಕಳದಲ್ಲಿ ಮಾನವ ಕಳ್ಳಸಾಗಣೆ, ನಾಲ್ಕುವರೆ ಲಕ್ಷಕ್ಕೆ ಮಹಿಳೆ ಖರೀದಿ!

TNN Correspondent Posted On August 31, 2017
0


0
Shares
  • Share On Facebook
  • Tweet It

ನಿಮಗೆ ವಿದೇಶಕ್ಕೆ ಹೋಗುವ ಆಸೆ ಇದೆಯಾ? ನಿಮಗೆ ತುಂಬಾ ಹಣ ಗಳಿಸುವ ಗುರಿ ಇದೆಯಾ? ದುಡ್ಡು ಮಾಡಲು ಫಾರಿನ್ ಗೆ ಹೋಗುವುದು ಒಂದೇ ದಾರಿ ಎಂದು ನಿಮಗೆ ಅನಿಸುತ್ತಿದೆಯಾ? ಹಾಗಾದರೆ ನಿಮ್ಮಂತವರನ್ನೇ ಟಾರ್ಗೆಟ್ ಮಾಡಿ ಹಣ ಮಾಡುವ ತಂತ್ರವನ್ನು ಕೆಲವು ಏಜೆನ್ಸಿಗಳು ಮಾಡುತ್ತವೆ.
ಆಕೆ ಜೆಸಿಂತಾ. ಕಾರ್ಕಳದ ನಿವಾಸಿ. ಗಂಡ ತೀರಿಕೊಂಡಿದ್ದಾರೆ. ಮೂವರು ಮಕ್ಕಳೊಂದಿಗೆ ತನ್ನ ಜೀವನ ಸಾಗಬೇಕಾದರೆ ಉದ್ಯೋಗ ಅನಿವಾರ್ಯವಾಗಿತ್ತು. ಸ್ವಲ್ಪ ಹೆಚ್ಚಿನ ಸಂಬಳ ಸಿಕ್ಕಿದರೆ ಒಳ್ಳೆಯದಾಗುತ್ತದೆ ಎನ್ನುವ ಆಸೆ ಎಲ್ಲರಂತೆ ಆಕೆಗೂ ಇತ್ತು. ಅದನ್ನು ಬೇರೆಯವರಲ್ಲಿ ಹೇಳಿದ್ದಳು. ಅದರ ಬಳಿಕ ಒಮ್ಮೆ ಆಕೆಗೆ ಮಂಗಳೂರಿನ ಜೆಮ್ಸ್ ಎನ್ನುವರಿಂದ ಆಫರ್ ಬರುತ್ತದೆ. ನೀವು ಕತಾರ್ ನಲ್ಲಿರುವ ಭಾರತೀಯ ಕುಟುಂಬವೊಂದಕ್ಕೆ ಮಕ್ಕಳ ಪಾಲನೆ ಮಾಡುವ ಕೆಲಸಕ್ಕೆ ಹೋಗಲು ತಯಾರಿದ್ದಿರಾ? ತಿಂಗಳಿಗೆ 25 ಸಾವಿರ ರೂಪಾಯಿ ಸಂಬಳ ಕೇಳಿ ಅವಳು ಕೂಡ ಖುಷಿಗೊಂಡು ವಿಮಾನ ಹತ್ತುತ್ತಾಳೆ. ಮುಂಬೈನಲ್ಲಿ ವಿಮಾನ ಹತ್ತಿ ಎಲ್ಲೋ ಇಳಿದಾಗಲೇ ಅವಳಿಗೆ ಗೊತ್ತಾಗಿತ್ತು. ಅದು ಕತಾರ್ ಅಲ್ಲ, ಸೌದಿ ಎಂದು. ಅಲ್ಲಿಂದ ಅವಳ ಜೀವನ ನರಕವಾಯಿತು.
ಮೂವರು ಮಡದಿಯರು, ಹತ್ತಾರು ಮಕ್ಕಳು, 16 ಗಂಟೆ ದುಡಿತ, ಜೀತ ಮಾಡಿ ಹೈರಾಣವಾಗಿರುವ ಜೆಸಿಂತಾ ಅವರಿಗೆ ಟಿಬಿ ಕಾಯಿಲೆ ಕೂಡ ಬಾಧಿಸಿ ಅವಳಿಗ ಜೀವಂತ ಶವವಾಗಿದ್ದಾಳೆ. ಅವಳಿಗೆ ನಾಲ್ಕುವರೆ ಲಕ್ಷ ಪಾವತಿಸಿ ಖರೀದಿಸಿದಂತೆ ಆಡುತ್ತಿರುವ ಆ ಕುಟುಂಬ ಹಣ ಕೊಟ್ಟಿದ್ದು ಜೇಮ್ಸ್ ಗೆ. ಮುಂಬೈನ ಶಾಬಾಸ್ ಖಾನ್ ಇದರ ರೂವಾರಿ. ಇವರು ಹಣ ನುಂಗಿ ಇಂತಂಹ ನೂರಾರು ಹೆಣ್ಣುಗಳನ್ನು ಅರಬರಿಗೆ ಮಾರಾಟ ಮಾಡಿದ್ದಾರೆ.
ಇಂತಹಾ 20ಕ್ಕೂ ಅಧಿಕ ಸಬ್ ಏಜೆಂಟ್ ಗಳು ಉಡುಪಿ-ಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿದ್ದಾರೆ. ಶಾಬಾಸ್ ಖಾನ್ ಅಂತವರಿಗೆ 25 ಸಾವಿರ ಕೊಟ್ಟು ಮಹಿಳೆಯರನ್ನು ಖರೀದಿ ಮಾಡುತ್ತಾನೆ. ನಂತರ ಅರಬರೊಂದಿಗೆ ಡೀಲ್ ಮಾಡಿ ಲಕ್ಷಾಂತರ ರೂಪಾಯಿ ಗಳಿಸುತ್ತಾನೆ.
ಉಡುಪಿಯ ಮಾನವ ಹಕ್ಕುಗಳ ಪ್ರತಿಷ್ಟಾನ ಜೆಸಿಂತಾರನ್ನು ಮರಳಿ ಭಾರತಕ್ಕೆ ತರುವ ಬಗ್ಗೆ ತಿಂಗಳುಗಳಿಂದ ಹೋರಾಟ ಮಾಡುತ್ತಿದೆ. ಇವರ ಮನವಿಗೆ ಸ್ಪಂದಿಸಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಕೂಡ ಸೂಕ್ರ ಕ್ರಮ ಕೈಗೊಳ್ಳಲು ಸೌದಿಯ ಆಡಳಿತಕ್ಕೆ ಮನವಿ ಮಾಡಿದ್ದಾರೆ. ಸದ್ಯ ಸತತ ಒತ್ತಾಯದ ಬಳಿಕ ಶನಿವಾರ ಜೇಮ್ಸ್ ನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಶಾಬಾಸ್ ಖಾನ್ ಬಗ್ಗೆ ಯಾವುದೇ ಕಾರ್ಯಾಚರಣೆ ನಡೆದಿಲ್ಲ. ತಾಯಿಯ ಸಂಕಟ ಗೊತ್ತಾಗಿ ಮಕ್ಕಳು ಆತಂಕಿತರಾಗಿದ್ದಾರೆ. ಆದರೆ ಮಾನವ ಕಳ್ಳ ಸಾಗಣೆ ಮಾತ್ರ ಭಾರತದಿಂದ ಬೇರೆ ರಾಷ್ಟ್ರಕ್ಕೆ ನಿರಾಂತಕವಾಗಿ ನಡೆಯುತ್ತಿದೆ.

 

0
Shares
  • Share On Facebook
  • Tweet It


human traffiking


Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!

  • Privacy Policy
  • Contact
© Tulunadu Infomedia.

Press enter/return to begin your search