• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಠಾಕ್ರೆ ನಿವಾಸದ ಮುಂದೆ ಹನುಮಾನ್ ಚಾಲೀಸಾ ಪಠಿಸಿದ ನವನೀತ್ ಕೌರ್ ಬಿಜೆಪಿಗೆ!

Tulunadu News Posted On March 28, 2024
0


0
Shares
  • Share On Facebook
  • Tweet It

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ “ದರ್ಶನ” ಸಿನೆಮಾದಿಂದ 2004 ರಲ್ಲಿ ನಾಯಕಿನಟಿಯಾಗಿ ಸಿನೆಮಾ ವೃತ್ತಿ ಆರಂಭಿಸಿ ನಂತರ ತೆಲುಗು ಸಿನೆಮಾ ರಂಗದಲ್ಲಿ ಕೆಲವು ಹಿಟ್ ಸಿನೆಮಾಗಳನ್ನು ನೀಡಿದ ನವನೀತ್ ಕೌರ್ ಅವರು ಭಾರತೀಯ ಜನತಾ ಪಾರ್ಟಿಯಿಂದ ಅಮರಾವತಿ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಯಲಿದ್ದಾರೆ. ಅವರು ಮಾರ್ಚ್ 28 ರಂದು ಅಧಿಕೃತವಾಗಿ ಬಿಜೆಪಿಯನ್ನು ಸೇರಿದರು. ಇವರು ಅಮರಾವತಿ ಕ್ಷೇತ್ರದ ಹಾಲಿ ಸಂಸದೆಯಾಗಿದ್ದು, 2019 ರಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿ ಗೆದ್ದಿದ್ದರು. ಆಗ ಅವರಿಗೆ ಎನ್ ಸಿಪಿ ಹಾಗೂ ಕಾಂಗ್ರೆಸ್ ಪಕ್ಷ ಬೆಂಬಲಿಸಿದ್ದವು. ಅವರು ಕಳೆದ ಬಾರಿ ಶಿವಸೇನೆಯ ಆನಂದರಾವ್ ಅವರನ್ನು ಸೋಲಿಸಿ ಸಂಸತ್ ಪ್ರವೇಶಿಸಿದ್ದರು.

ಮಹಾರಾಷ್ಟ್ರ ನಿಕಟಪೂರ್ವ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಮನೆ ಮಾತ್ರೋಶ್ರೀ ಹೊರಗೆ ಹನುಮಾನ್ ಚಾಲೀಸಾ ಪಠಣ ಮಾಡುವ ವಿಷಯದಲ್ಲಿ ಉಂಟಾದ ವಿವಾದದಿಂದ ನವನೀತ್ ಕೌರ್ ರಾಜಕೀಯವಾಗಿ ಹೆಚ್ಚು ಸುದ್ದಿಯಲ್ಲಿದ್ದರು. ಅವರ ಪತಿ ಕೂಡ ಶಾಸಕರಾಗಿದ್ದು, ಪಕ್ಷೇತರರಾಗಿ ಅಮರಾವತಿ ನಗರದಿಂದ ಗೆದ್ದಿದ್ದಾರೆ. ಇಬ್ಬರ ವಿರುದ್ಧವೂ ಮಹಾರಾಷ್ಟ್ರ ಪೊಲೀಸ್ ಇಲಾಖೆ ಹನುಮಾನ ಚಾಲೀಸಾ ವಿವಾದದಲ್ಲಿ ಕೇಸು ದಾಖಲಿಸಿದ ಪರಿಣಾಮ ಕೌರ್ 14 ದಿನಗಳ ಕಾಲ ಮುಂಬೈಯ ಬೈಕುಲಾ ಜೈಲಿನಲ್ಲಿದ್ದರು. ಅವರು ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿದ್ದರು ಎನ್ನುವ ಆರೋಪ ಮುಂಬೈ ಹೈಕೋರ್ಟ್ ನಲ್ಲಿ ವಿಚಾರಣೆ ನಡೆದು ಮಾನ್ಯ ನ್ಯಾಯಾಲಯ ನವನೀತ್ ಕೌರ್ ಗೆ ಎರಡು ಲಕ್ಷ ರೂಪಾಯಿ ದಂಡ ಕೂಡ ವಿಧಿಸಿತ್ತು. ನವನೀತ್ ಕೌರ್ ಗೆಲ್ಲುವ ಸಾಧ್ಯತೆ ಹೆಚ್ಚಿದ್ದು, ಬಿಜೆಪಿಯ ಸಂಖ್ಯಾದೃಷ್ಟಿಯಿಂದ ಇದು ಮಹತ್ವದ ಬೆಳವಣಿಗೆಯಾಗಿದೆ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search