• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮನೆ ಗೇಟ್ ಬಳಿ ಅರ್ಧ ಗಂಟೆ ಕಾದರೂ ಹೆಗ್ಡೆ ಡೋಂಟ್ ಕೇರ್!

Tulunadu News Posted On March 28, 2024
0


0
Shares
  • Share On Facebook
  • Tweet It

ಪಕ್ಷದ ಸಭೆಯಲ್ಲಿ ಕುರ್ಚಿಯೊಂದನ್ನು ಟೇಬಲ್ ಮೇಲಿಟ್ಟು ಧಮ್ ಇದ್ದವರು ಬಂದು ಕುಳಿತುಕೊಳ್ಳಿ ಎಂದು ಸವಾಲೆಸೆದು ಸುದ್ದಿಯಾಗಿದ್ದ ಉತ್ತರ ಕನ್ನಡ ಲೋಕಸಭಾ ಸದಸ್ಯ ಅನಂತ ಕುಮಾರ್ ಹೆಗ್ಡೆ ಪಕ್ಷದಿಂದ ಟಿಕೆಟ್ ನಿರಾಕರಿಸಲ್ಪಟ್ಟ ನಂತರ ಈಗ ಮೌನಕ್ಕೆ ಶರಣಾಗಿದ್ದಾರೆ. ಅವರ ಮೌನ ಅಲ್ಲಿನ ಹಾಲಿ ಅಭ್ಯರ್ಥಿ ವಿಶ್ವೇಶ್ವರ ಹೆಗ್ಡೆ ಕಾಗೇರಿಯವರ ನಿದ್ರೆಯನ್ನೇ ಕಸಿದುಬಿಟ್ಟಿದೆ. ಅವರು ಸಂಸದ ಅನಂತ ಕುಮಾರ್ ಹೆಗ್ಡೆಯವರ ಮನೆಗೆ ಹೋಗಿ ಅವರನ್ನು ಮಾತನಾಡಿಸಿ ಬರೋಣ ಎಂದು ಅಂದುಕೊಂಡಿದ್ದರು. ಆದರೆ ಹೆಗ್ಡೆ ಮನೆಯ ಹೊರಗಿನಿಂದಲೇ ಅರ್ಧ ಗಂಟೆ ಕಾದು ಬಂದ ದಾರಿಗೆ ಸುಂಕವಿಲ್ಲದೇ ಹಿಂತಿರುಗಿ ಬರಬೇಕಾಯಿತು. ಹಾಲಿ ಸಂಸದರ ಬೆಂಬಲವಿಲ್ಲದೇ ತಾವು ದಡ ಸೇರುವುದು ಹೇಗೆ ಎನ್ನುವುದು ಕಾಗೇರಿಯವರಿಗೆ ಈಗ ಚಿಂತೆಯಾಗಿದೆ.

ಅನಂತ ಕುಮಾರ್ ಹೆಗ್ಡೆಯವರು ಕಾಗೇರಿಯವರನ್ನು ಬೆಂಬಲಿಸದೇ ಹೋದರೆ ಅಲ್ಲಿ ಭಾರತೀಯ ಜನತಾ ಪಾರ್ಟಿಯ ಗೆಲುವು ಅಷ್ಟು ಸುಲಭವಲ್ಲ. ಅದು ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿಯೇ ಸಾಬೀತಾಗಿದೆ. ಉತ್ತರ ಕನ್ನಡ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರ ಹಾಗೂ ಬೆಳಗಾವಿಯ ಎರಡು ವಿಧಾನಸಭಾ ಕ್ಷೇತ್ರಗಳು ಸೇರಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ರಚನೆಯಾಗಿದೆ. ಒಟ್ಟು ಈ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಯಲ್ಲಾಪುರದ ಶಿವರಾಮ್ ಹೆಬ್ಬಾರ್ ಅವರು ಈಗಾಗಲೇ ಬಿಜೆಪಿಯಿಂದ ಎರಡೂ ಕಾಲುಗಳನ್ನು ಹೊರಗೆ ಇಟ್ಟಾಗಿದೆ. ಇನ್ನು ಕುಮಟಾದಿಂದ ದಿನಕರ ಶೆಟ್ಟಿ ಬಿಜೆಪಿಯಿಂದ ಗೆದ್ದಿದ್ದರೂ ಗೆದ್ದ ಅಂತರ ಕೇವಲ 676 ಮತಗಳು. ಇನ್ನು ಖಾನಾಪುರದಿಂದ ವಿಠಲ ಹಲಗೇಕರ್ ಬಿಜೆಪಿಯಿಂದ ಗೆದ್ದು ಶಾಸಕರಾಗಿದ್ದರೂ ಅವರ ವಿರುದ್ಧ ಸೋತಿದ್ದ ಅಂಜಲಿ ನಿಂಬಾಳ್ಕರ್ ಈ ಬಾರಿ ಕಾಂಗ್ರೆಸ್ಸಿನಿಂದ ಲೋಕಸಭೆಗೆ ಟಿಕೆಟ್ ಪಡೆದುಕೊಂಡಿದ್ದಾರೆ. ಅವರು ಅಲ್ಲಿ 2018 ರಲ್ಲಿ ಶಾಸಕಿಯಾಗಿದ್ದರು.

ಒಟ್ಟಿನಲ್ಲಿ ಎಲ್ಲಾ ಕಡೆ ರಾಜಕೀಯ ಲೆಕ್ಕಾಚಾರಗಳನ್ನು ನೋಡುವಾಗ ಕಾಗೇರಿಯವರಿಗೆ ಗೆಲುವು ಅಷ್ಟು ಸುಲಭವಿಲ್ಲ ಎಂದು ಮೇಲ್ನೋಟಕ್ಕೆ ಅನಿಸುತ್ತದೆ. ಜನರು ಕಣ್ಣುಮುಚ್ಚಿ ನರೇಂದ್ರ ಮೋದಿಯವರಿಗೆ ಮತ ಹಾಕುತ್ತಾರೆ ಎಂದಾದರೆ ಕಾಗೇರಿಯವರು ಹೆದರಬೇಕಾಗಿಲ್ಲ. ಆದರೆ ಕಳೆದ ಏಳು ಬಾರಿ ಸ್ಪರ್ಧಿಸಿ ಆರು ಬಾರಿ ಗೆದ್ದಿದ್ದ ಅನಂತಕುಮಾರ್ ಹೆಗ್ಡೆಯವರನ್ನು ನೋಡಿ ಜನ ಮತ ಚಲಾಯಿಸುತ್ತಾರೆ ಎಂದಾದರೆ ಕಾಗೇರಿ ಇನ್ನಷ್ಟು ಬೆವರು ಸುರಿಸಬೇಕಾದಿತೇನೋ

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search