• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೈತ್ರಿ ಅಭ್ಯರ್ಥಿ ಪರ ಪ್ರಚಾರಕ್ಕಿಳಿದ ಸುಮಲತಾ ಆಪ್ತ!

Tulunadu News Posted On April 1, 2024
0


0
Shares
  • Share On Facebook
  • Tweet It

ಎಪ್ರಿಲ್ 3 ರಂದು ಮಂಡ್ಯದಲ್ಲಿ ಅಭಿಮಾನಿಗಳ, ಬೆಂಬಲಿಗರ ಸಭೆ ನಡೆಸಿ ಮುಂದಿನ ನಿರ್ಧಾರವನ್ನು ತಿಳಿಸುತ್ತೇನೆ ಎಂದು ಹೇಳಿದ್ದ ಸಂಸದೆ ಸುಮಲತಾ ಅವರು ಕಳೆದ ಬಾರಿ ಗೆಲ್ಲಲು ಪ್ರಮುಖ ಪಾತ್ರ ವಹಿಸಿದ್ದ ಇಂಡವಾಳು ಸಚ್ಚಿದಾನಂದ ಮೈತ್ರಿ ಅಭ್ಯರ್ಥಿ ಪರ ಈಗಾಗಲೇ ಪ್ರಚಾರಕ್ಕೆ ಇಳಿದಿದ್ದಾರೆ. ಈ ಬಾರಿಯೂ ಸುಮಲತಾ ಪಕ್ಷೇತರವಾಗಿ ಚುನಾವಣೆಗೆ ನಿಂತರೆ ಸಚ್ಚಿದಾನಂದ ಅವರು ಸುಮಲತಾ ಬೆನ್ನಿಗೆ ನಿಲ್ಲುವ ಸಾಧ್ಯತೆ ಬಹುತೇಕ ಇಲ್ಲವಾಗಿದೆ.

ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಜೆಡಿಎಸ್ ಯುವ ಮೋರ್ಚಾ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಸಚ್ಚಿದಾನಂದ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ವಿರುದ್ಧ ಸಚ್ಚಿದಾನಂದ ಅವರು ಮಾತನಾಡುವುದರಿಂದ ಸುಮಲತಾ ಅವರಿಗೆ ಏನೂ ಬೇಸರ ಇಲ್ಲ. ಆದರೆ ಮಾತನಾಡಿದ ವೇದಿಕೆ ಮಾತ್ರ ಜೆಡಿಎಸ್ ಹಾಗೂ ಭಾರತೀಯ ಜನತಾ ಪಾರ್ಟಿ ಮೈತ್ರಿ ಕೂಟದಿಂದ ಮಾಡಿದ ಸಭೆ ಅದಾಗಿತ್ತು. ಒಂದು ವೇಳೆ ಸುಮಲತಾ ಅವರು ಸ್ಪರ್ಧಿಸದೇ ಕುಮಾರಸ್ವಾಮಿಯವರಿಗೆ ಬೆಂಬಲ ನೀಡಿದರೆ ಆಗ ಸಚ್ಚಿದಾನಂದ ಅವರು ಮೈತ್ರಿಕೂಟದ ಅಭ್ಯರ್ಥಿಯ ಪರವಾಗಿ ಪ್ರಚಾರ ಮುಂದುವರೆಸಿದರೆ ಯಾವುದೇ ಗೊಂದಲ ಆಗುವುದಿಲ್ಲ.

ಅದೇ ಸುಮಲತಾ ಸ್ವಾಭಿಮಾನದ ಪ್ರಶ್ನೆಯನ್ನು ಇಟ್ಟುಕೊಂಡು ಚುನಾವಣೆಯಲ್ಲಿ ಸ್ಪರ್ಧಿಸಿದರೆ ಆಗ ಸಚ್ಚಿದಾನಂದ ಇವರ ವಿರುದ್ಧ ಪ್ರಚಾರ ಮಾಡಿದರೆ ಸುಮಲತಾ ಅವರ ಗೆಲುವು ಕಷ್ಟವಾಗಬಹುದು. ಇನ್ನು ಸುಮಲತಾ ತಾವು ಗೆದ್ದರೂ , ಸೋತರೂ ಮಂಡ್ಯದಲ್ಲಿಯೇ ಎಂದು ಹೇಳಿರುವುದರಿಂದ ಪಕ್ಷೇತರರಾಗಿ ಸ್ಪರ್ಧಿಸುವ ಸಾಧ್ಯತೆಯೂ ಇದೆ. ಒಂದು ವೇಳೆ ಗೆದ್ರೆ ಸಂಸತ್ತಿಗೆ, ಸೋತರೆ ಜನ ಆರ್ಶೀವದಿಸಲಿಲ್ಲ, ಅದಕ್ಕೆ ಸೋತೆ ಎಂದು ರಾಜಕೀಯದಿಂದ ದೂರಸರಿಯಲೂಬಹುದು. ಒಟ್ಟಿನಲ್ಲಿ ಎರಡು ದಿನದಲ್ಲಿ ಮಂಡ್ಯ ರಾಜಕೀಯದ ಸ್ಪಷ್ಟ ಚಿತ್ರಣ ಸಿಗಲಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

  • Privacy Policy
  • Contact
© Tulunadu Infomedia.

Press enter/return to begin your search