• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಯದುವೀರ ಒಡೆಯರ್ ಬಳಿ ಕಾರು, ಸೈಟ್, ಭೂಮಿ ಏನಿಲ್ಲ!

Tulunadu News Posted On April 1, 2024


  • Share On Facebook
  • Tweet It

ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಮೈಸೂರಿನ ರಾಜಮನೆತನದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಬಳಿ ಎಷ್ಟು ಆಸ್ತಿ ಇರಬಹುದು ಎನ್ನುವ ಕುತೂಹಲ ಎಲ್ಲರಲ್ಲಿಯೂ ಇತ್ತು. ಮೈಸೂರಿನ ರಾಜರೆಂದರೆ ಸುಮ್ಮನೇನಾ? ಅವರ ವೈಭೋಗ ಕಡಿಮೆನಾ ಎಂದು ಜನರಿಗೆ ಅನಿಸದೇ ಇರದು. ಈಗ ಮೊದಲ ಬಾರಿ ಜನರಿಗೆ ರಾಜರ ಬಳಿ ಅಧಿಕೃತವಾಗಿರುವ ಸಂಪತ್ತಿನ ಪರಿಚಯ ಸಾರ್ವಜನಿಕವಾಗಿ ಆಗಿದೆ. ಲೋಕಸಭಾ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವಾಗ ನಿಯಮಗಳ ಪ್ರಕಾರ ಅವರು ತಮ್ಮ ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ. ಅದರಲ್ಲಿ ಅವರು ತಮ್ಮ ಬಳಿ ಸ್ವಂತ ಕಾರು, ಕೃಷಿ ಭೂಮಿ, ಸೈಟ್, ಮನೆ ಆಗಲಿ ಇಲ್ಲ ಎಂದು ಅಫಿಡಾವಿಟ್ ನಲ್ಲಿ ಬರೆದಿದ್ದಾರೆ.

ಯದುವೀರ್ ಒಡೆಯರ್ ಅವರ ಕೈಯಲ್ಲಿ ಸದ್ಯ ಒಂದು ಲಕ್ಷ ರೂ ನಗದು ಹಣ ಇದ್ದು, ವಿವಿಧ ಬ್ಯಾಂಕ್ ಅಕೌಂಟ್ ಗಳಲ್ಲಿ 1.36 ಕೋಟಿ ರೂ ಹಣ ಇದೆ. 3.25 ಕೋಟಿ ರೂ ಮೌಲ್ಯದ 4 ಕೆ.ಜಿ ಚಿನ್ನ, 14 ಲಕ್ಷ ರೂ ಮೌಲ್ಯದ 20 ಕೆಜಿ ಬೆಳ್ಳಿಯನ್ನು ಹೊಂದಿದ್ದಾರೆ. ಒಟ್ಟು 4.99 ಕೋಟಿ ರೂ ಚರಾಸ್ತಿಯನ್ನು ಯದುವೀರ್ ಈ ವೇಳೆ ಘೋಷಿಸಿಕೊಂಡಿದ್ದಾರೆ.

ಅವರ ಪತ್ನಿ ರಾಜವಂಶ ಕುಲದಿಂದ ಬಂದಿರುವ ತ್ರಿಷಿಕಾ ಅವರ ಬಳಿ 75 ಸಾವಿರ ರೂ ನಗದು ಇದ್ದು, ಎಚ್ ಡಿಎಫ್ ಸಿ ಬ್ಯಾಂಕ್ ನಲ್ಲಿ 1 ಲಕ್ಷ ರೂ ಹೊಂದಿದ್ದಾರೆ. 90 ಲಕ್ಷ ರೂ ಮೌಲ್ಯದ 2 ಕೆಜಿ ಚಿನ್ನ, 5.5 ಲಕ್ಷ ರೂ ಮೌಲ್ಯದ 100 ಗ್ರಾಂ ಚಿನ್ನದ ಗಟ್ಟಿಗಳಿದ್ದು, 7 ಲಕ್ಷ ರೂ ಮೌಲ್ಯದ 10 ಕೆಜಿ ಬೆಳ್ಳಿಯನ್ನು ಹೊಂದಿದ್ದಾರೆ. ಒಟ್ಟು 1.04 ಕೋಟಿ ರೂ ಮೌಲ್ಯದ ಚರಾಸ್ತಿಯನ್ನು ಘೋಷಿಸಿದ್ದಾರೆ.
ಯದುವೀರ್ ಅವರ ಅವಲಂಬಿತರ ಬಳಿ ಇರುವ ಆಸ್ತಿಪಾಸ್ತಿಯ ಮಾಹಿತಿ ಕೂಡ ಅಫಿದಾವಿತ್ ನಲ್ಲಿ ದಾಖಲಿಸಲಾಗಿದ್ದು, ಅವರ ಹೆಸರಲ್ಲಿ ಒಟ್ಟು 3.63 ಕೋಟಿ ರೂ ಚರಾಸ್ತಿ ಇದೆ ಎಂದು ಹೇಳಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search