• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಿರುತೆರೆ ರಾಮನ ವಿರುದ್ಧ ಅಭ್ಯರ್ಥಿ ಬದಲಾಯಿಸಿದ ಸಮಾಜವಾದಿ ಪಾರ್ಟಿ!

Tulunadu News Posted On April 3, 2024
0


0
Shares
  • Share On Facebook
  • Tweet It

ಅಭ್ಯರ್ಥಿ ಘೋಷಣೆ ಆಗಿ ನಾಮಪತ್ರ ಸಲ್ಲಿಕೆ ಆಗುವ ನಡುವಿನ ಅವಧಿಯಲ್ಲಿ ಅನೇಕ ಕಡೆ ಅಭ್ಯರ್ಥಿಯನ್ನು ಪಕ್ಷ ಬದಲಾಯಿಸಿದ ಇತಿಹಾಸ ಇದೆ. ಹೆಸರು ಘೋಷಣೆ ಆದ ಕೂಡಲೇ ಅಭ್ಯರ್ಥಿ ಫಿಕ್ಸ್ ಎಂದಲ್ಲ. ಬಿ – ಫಾರಂ ಕೈಗೆ ಸಿಗದೇ ತನಗೆ ಟಿಕೆಟ್ ಸಿಕ್ಕಿಬಿಟ್ಟಿದೆ, ತಾನು ಅಭ್ಯರ್ಥಿ ಆಗಿಬಿಟ್ಟೆ ಎಂದು ಅಭ್ಯರ್ಥಿ ಗ್ಯಾರಂಟಿಯಾಗಿ ಪ್ರತಿ ಬಾರಿ ಅಂದುಕೊಳ್ಳಬೇಕಾಗಿಲ್ಲ. ಕೆಲವೊಮ್ಮೆ ರಾಜಕೀಯ ಪಕ್ಷಗಳು ತಮ್ಮ ಪಕ್ಷದ ಅಭ್ಯರ್ಥಿಯನ್ನು ಘೋಷಿಸಿ ನಂತರ ಎದುರಾಳಿ ಪಕ್ಷದ ಅಭ್ಯರ್ಥಿಯ ವರ್ಚಸ್ಸು ನೋಡಿ ತಮ್ಮ ಅಭ್ಯರ್ಥಿಯನ್ನು ಬದಲಾಯಿಸಿದ್ದೂ ಇದೆ. ಅಂತಹುದೇ ಘಟನೆ ಈಗ ಉತ್ತರ ಪ್ರದೇಶದ ಮೀರತ್ ಲೋಕಸಭಾ ಕ್ಷೇತ್ರದಲ್ಲಿ ನಡೆದಿದೆ.

ಮೀರತ್ ಲೋಕಸಭಾ ಕ್ಷೇತ್ರದಿಂದ ಸಮಾಜವಾದಿ ಪಾರ್ಟಿಯಿಂದ ಅದೇ ಜಿಲ್ಲೆಯ ಸರ್ದಾನ ವಿಧಾನಸಭಾ ಕ್ಷೇತ್ರದ ಶಾಸಕ ಅತುಲ್ ಪ್ರಧಾನ್ ಅವರನ್ನು ಲೋಕಸಭಾ ಕಣಕ್ಕೆ ಇಳಿಸಲು ಸಮಾಜವಾದಿ ಪಾರ್ಟಿ ಚಿಂತಿಸಿದೆ. ಇದಕ್ಕಿಂತ ಮೊದಲು ಮಾಜಿ ಎಡಿಜಿ ಭಾನು ಪ್ರತಾಪ್ ಸಿಂಗ್ ಅವರನ್ನು ಮೀರತ್ ಅಭ್ಯರ್ಥಿ ಎಂದು ಎಸ್ ಪಿಯಿಂದ ಘೋಷಿಸಲಾಗಿತ್ತು. ಆದರೆ ಮೀರತ್ ನಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಅರುಣ್ ಗೋವಿಲ್ ಅವರಿಗೆ ಸಿಗುತ್ತಿರುವ ಸ್ಪಂದನೆ ಮತ್ತು ಕಿರುತೆರೆ ರಾಮನ ಜನಪ್ರಿಯತೆಯನ್ನು ನೋಡಿ ಕಂಗಾಲಾಗಿರುವ ಅಖಿಲೇಶ್ ಸಿಂಗ್ ಯಾದವ್ ಮೀರತ್ ಅಭ್ಯರ್ಥಿಯನ್ನು ಬದಲಾಯಿಸಿದ್ದಾರೆ.

ಹೊಸ ಅಭ್ಯರ್ಥಿ ಅತುಲ್ ಪ್ರಧಾನ ಬಹಳ ವರ್ಷಗಳಿಂದ ಸಮಾಜವಾದಿ ಪಾರ್ಟಿಯಲ್ಲಿದ್ದು, ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಶಾಸಕರೂ ಆಗಿರುವುದರಿಂದ ಜನ ಸಂಪರ್ಕವೂ ಚೆನ್ನಾಗಿದೆ. ಇನ್ನು ಭಾನು ಪ್ರತಾಪ್ ಸಿಂಗ್ ಅವರಿಗೆ ಜನಸಂಪರ್ಕ ಇಲ್ಲದಿರುವುದರಿಂದ ಅವರನ್ನು ನಿಲ್ಲಿಸಿದರೆ ಡೆಪಾಸಿಟ್ ಕೂಡ ಕಷ್ಟ ಎನ್ನುವುದು ಸಮಾಜವಾದಿ ಪಾರ್ಟಿಗೆ ಗೊತ್ತಾಗಿದೆ. ಆದ್ದರಿಂದ ಕಿರುತೆರೆ ರಾಮನ ಪ್ರಭಾವದ ಎದುರು ನಮ್ಮ ಅಭ್ಯರ್ಥಿ ಮಂಕಾಗಬಾರದು ಎನ್ನುವ ಕಾರಣಕ್ಕೆ ಅಭ್ಯರ್ಥಿ ಬದಲಾವಣೆ ಆಗಿದೆ.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search