• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಿರುತೆರೆ ರಾಮನ ವಿರುದ್ಧ ಅಭ್ಯರ್ಥಿ ಬದಲಾಯಿಸಿದ ಸಮಾಜವಾದಿ ಪಾರ್ಟಿ!

Tulunadu News Posted On April 3, 2024


  • Share On Facebook
  • Tweet It

ಅಭ್ಯರ್ಥಿ ಘೋಷಣೆ ಆಗಿ ನಾಮಪತ್ರ ಸಲ್ಲಿಕೆ ಆಗುವ ನಡುವಿನ ಅವಧಿಯಲ್ಲಿ ಅನೇಕ ಕಡೆ ಅಭ್ಯರ್ಥಿಯನ್ನು ಪಕ್ಷ ಬದಲಾಯಿಸಿದ ಇತಿಹಾಸ ಇದೆ. ಹೆಸರು ಘೋಷಣೆ ಆದ ಕೂಡಲೇ ಅಭ್ಯರ್ಥಿ ಫಿಕ್ಸ್ ಎಂದಲ್ಲ. ಬಿ – ಫಾರಂ ಕೈಗೆ ಸಿಗದೇ ತನಗೆ ಟಿಕೆಟ್ ಸಿಕ್ಕಿಬಿಟ್ಟಿದೆ, ತಾನು ಅಭ್ಯರ್ಥಿ ಆಗಿಬಿಟ್ಟೆ ಎಂದು ಅಭ್ಯರ್ಥಿ ಗ್ಯಾರಂಟಿಯಾಗಿ ಪ್ರತಿ ಬಾರಿ ಅಂದುಕೊಳ್ಳಬೇಕಾಗಿಲ್ಲ. ಕೆಲವೊಮ್ಮೆ ರಾಜಕೀಯ ಪಕ್ಷಗಳು ತಮ್ಮ ಪಕ್ಷದ ಅಭ್ಯರ್ಥಿಯನ್ನು ಘೋಷಿಸಿ ನಂತರ ಎದುರಾಳಿ ಪಕ್ಷದ ಅಭ್ಯರ್ಥಿಯ ವರ್ಚಸ್ಸು ನೋಡಿ ತಮ್ಮ ಅಭ್ಯರ್ಥಿಯನ್ನು ಬದಲಾಯಿಸಿದ್ದೂ ಇದೆ. ಅಂತಹುದೇ ಘಟನೆ ಈಗ ಉತ್ತರ ಪ್ರದೇಶದ ಮೀರತ್ ಲೋಕಸಭಾ ಕ್ಷೇತ್ರದಲ್ಲಿ ನಡೆದಿದೆ.

ಮೀರತ್ ಲೋಕಸಭಾ ಕ್ಷೇತ್ರದಿಂದ ಸಮಾಜವಾದಿ ಪಾರ್ಟಿಯಿಂದ ಅದೇ ಜಿಲ್ಲೆಯ ಸರ್ದಾನ ವಿಧಾನಸಭಾ ಕ್ಷೇತ್ರದ ಶಾಸಕ ಅತುಲ್ ಪ್ರಧಾನ್ ಅವರನ್ನು ಲೋಕಸಭಾ ಕಣಕ್ಕೆ ಇಳಿಸಲು ಸಮಾಜವಾದಿ ಪಾರ್ಟಿ ಚಿಂತಿಸಿದೆ. ಇದಕ್ಕಿಂತ ಮೊದಲು ಮಾಜಿ ಎಡಿಜಿ ಭಾನು ಪ್ರತಾಪ್ ಸಿಂಗ್ ಅವರನ್ನು ಮೀರತ್ ಅಭ್ಯರ್ಥಿ ಎಂದು ಎಸ್ ಪಿಯಿಂದ ಘೋಷಿಸಲಾಗಿತ್ತು. ಆದರೆ ಮೀರತ್ ನಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಅರುಣ್ ಗೋವಿಲ್ ಅವರಿಗೆ ಸಿಗುತ್ತಿರುವ ಸ್ಪಂದನೆ ಮತ್ತು ಕಿರುತೆರೆ ರಾಮನ ಜನಪ್ರಿಯತೆಯನ್ನು ನೋಡಿ ಕಂಗಾಲಾಗಿರುವ ಅಖಿಲೇಶ್ ಸಿಂಗ್ ಯಾದವ್ ಮೀರತ್ ಅಭ್ಯರ್ಥಿಯನ್ನು ಬದಲಾಯಿಸಿದ್ದಾರೆ.

ಹೊಸ ಅಭ್ಯರ್ಥಿ ಅತುಲ್ ಪ್ರಧಾನ ಬಹಳ ವರ್ಷಗಳಿಂದ ಸಮಾಜವಾದಿ ಪಾರ್ಟಿಯಲ್ಲಿದ್ದು, ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಶಾಸಕರೂ ಆಗಿರುವುದರಿಂದ ಜನ ಸಂಪರ್ಕವೂ ಚೆನ್ನಾಗಿದೆ. ಇನ್ನು ಭಾನು ಪ್ರತಾಪ್ ಸಿಂಗ್ ಅವರಿಗೆ ಜನಸಂಪರ್ಕ ಇಲ್ಲದಿರುವುದರಿಂದ ಅವರನ್ನು ನಿಲ್ಲಿಸಿದರೆ ಡೆಪಾಸಿಟ್ ಕೂಡ ಕಷ್ಟ ಎನ್ನುವುದು ಸಮಾಜವಾದಿ ಪಾರ್ಟಿಗೆ ಗೊತ್ತಾಗಿದೆ. ಆದ್ದರಿಂದ ಕಿರುತೆರೆ ರಾಮನ ಪ್ರಭಾವದ ಎದುರು ನಮ್ಮ ಅಭ್ಯರ್ಥಿ ಮಂಕಾಗಬಾರದು ಎನ್ನುವ ಕಾರಣಕ್ಕೆ ಅಭ್ಯರ್ಥಿ ಬದಲಾವಣೆ ಆಗಿದೆ.

  • Share On Facebook
  • Tweet It


- Advertisement -


Trending Now
ಬೆಂಗಳೂರಿನ ಹಲವೆಡೆ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು.. ಇದು ಹೊಸದಲ್ಲ - ಡಿಕೆಶಿ
Tulunadu News May 19, 2025
ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?
Tulunadu News May 19, 2025
Leave A Reply

  • Recent Posts

    • ಬೆಂಗಳೂರಿನ ಹಲವೆಡೆ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು.. ಇದು ಹೊಸದಲ್ಲ - ಡಿಕೆಶಿ
    • ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?
    • ಧರ್ಮಸ್ಥಳದ ಆಕಾಂಕ್ಷ ಆತ್ಮಹತ್ಯೆಯ ಬಗ್ಗೆ ಅನುಮಾನ ಎಂದ ಹೆತ್ತವರು!
    • RSS ಕಚೇರಿ ದಾಳಿಯ ಮಾಸ್ಟರ್ ಮೈಂಡ್ ಫಿನಿಶ್.. ಅಬು ಸೈಫುಲ್ಲಾ ಹತ್ಯೆ!
    • ನಂದಿನಿ ನದಿ ಮಾಲಿನ್ಯ ಮಾಡುವವರಿಗೆ ಕಾದಿದೆ ಶಿಕ್ಷೆ: ಉಳ್ಳಾಯ ದೈವ ಅಭಯ
    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
  • Popular Posts

    • 1
      ಬೆಂಗಳೂರಿನ ಹಲವೆಡೆ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು.. ಇದು ಹೊಸದಲ್ಲ - ಡಿಕೆಶಿ
    • 2
      ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?
    • 3
      ಧರ್ಮಸ್ಥಳದ ಆಕಾಂಕ್ಷ ಆತ್ಮಹತ್ಯೆಯ ಬಗ್ಗೆ ಅನುಮಾನ ಎಂದ ಹೆತ್ತವರು!
    • 4
      RSS ಕಚೇರಿ ದಾಳಿಯ ಮಾಸ್ಟರ್ ಮೈಂಡ್ ಫಿನಿಶ್.. ಅಬು ಸೈಫುಲ್ಲಾ ಹತ್ಯೆ!
    • 5
      ನಂದಿನಿ ನದಿ ಮಾಲಿನ್ಯ ಮಾಡುವವರಿಗೆ ಕಾದಿದೆ ಶಿಕ್ಷೆ: ಉಳ್ಳಾಯ ದೈವ ಅಭಯ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search