• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸ್ಮೃತಿ ಇರಾನಿ ವಿರುದ್ಧ ರಾಬರ್ಟ್ ವಾದ್ರಾ ಸಜ್ಜು?

Tulunadu News Posted On April 4, 2024
0


0
Shares
  • Share On Facebook
  • Tweet It

ಗಾಂಧಿ ಕುಟುಂಬದ ಸದಸ್ಯನಾಗಿದ್ದು, ತುಂಬಾ ಸಮಯ ರಾಜಕೀಯದಿಂದ ದೂರ ಇರುವುದು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಅಳಿಯ, ಪ್ರಿಯಾಂಕಾ ವಾದ್ರಾ ಅವರ ಗಂಡ ರಾಬರ್ಟ್ ವಾದ್ರಾ ಸುದ್ದಿವಾಹಿನಿಗಳಿಗೆ ಹೇಳಿದ್ದಾರೆ.

ಅಮೇಠಿಯ ಜನರು ಭಾರತೀಯ ಜನತಾ ಪಾರ್ಟಿಯ ಸಂಸದೆ ಸ್ಮೃತಿ ಇರಾನಿಯನ್ನು ಗೆಲ್ಲಿಸಿದ್ದಕ್ಕೆ ಪಶ್ಚಾತ್ತಾಪಪಡುತ್ತಿದ್ದಾರೆ. ಅಮೇಠಿ, ರಾಯಬರೇಲಿ, ಸುಲ್ತಾನಪುರ ಲೋಕಸಭಾ ಕ್ಷೇತ್ರಗಳ ಅಭಿವೃದ್ಧಿಯಲ್ಲಿ ಗಾಂಧಿ ಕುಟುಂಬದ ಪಾಲಿದೆ. ಅಮೇಠಿಯ ಮತದಾರರು ಸ್ಮೃತಿ ಇರಾನಿ ವಿರುದ್ಧ ಕಾಂಗ್ರೆಸ್ಸಿನಿಂದ ಸ್ಪರ್ಧಿಸುವಂತೆ ನನ್ನನ್ನು ನಿರೀಕ್ಷಿಸುತ್ತಿದ್ದಾರೆ ಎಂದು ವಾದ್ರಾ ಹೇಳಿದ್ದಾರೆ.
ಅನೇಕರು ನನ್ನ ವಿರುದ್ಧ ಅನೇಕ ಆರೋಪಗಳನ್ನು ಮಾಡುತ್ತಾ ಬಂದಿದ್ದಾರೆ. ಅವರಿಗೆಲ್ಲರಿಗೂ ಪಾರ್ಲಿಮೆಂಟಿನಲ್ಲಿ ಉತ್ತರ ಕೊಡುವ ಸಮಯ ಬಂದಿದೆ ಎಂದು ವಾದ್ರಾ ಹೇಳಿದ್ದಾರೆ.

ವಾದ್ರಾ ಸ್ಪರ್ಧೆಯಿಂದ ನೀರಸವಾಗಲಿದ್ದ ಅಮೇಠಿ ಚುನಾವಣೆಗೆ ಹೊಸ ರಂಗು ಬರಲಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿತ್ತು. ಅದು ಎಷ್ಟರಮಟ್ಟಿಗೆ ಸಾಧ್ಯವಾಗಿದೆ ಎನ್ನುವುದರ ಮಾಹಿತಿ ಇಲ್ಲ. ಈಗ ರಾಬರ್ಟ್ ವಾದ್ರಾ ನೇರ ರಾಜಕಾರಣಕ್ಕೆ ಬರುವುದರಿಂದ ಮುಂದಿನ ದಿನಗಳಲ್ಲಿ ಚುನಾವಣಾ ರಾಜಕೀಯ ವಿಶೇಷವಾಗಲಿದೆ. ಆದರೆ ವಾದ್ರಾ ಅಮೇಠಿಯಿಂದ ಗೆಲ್ಲುತ್ತಾರಾ ಎನ್ನುವುದು ಪ್ರಶ್ನೆ. ಇನ್ನು ಇಡೀ ಗಾಂಧಿ ಕುಟುಂಬ ಉತ್ತರ ಪ್ರದೇಶ ರಾಜಕೀಯದಿಂದ ಗುಳೆ ಎದ್ದು ಹೋಗಿರುವ ಈ ಕಾಲಘಟ್ಟದಲ್ಲಿ ಅಮೇಠಿ ಮೂಲಕ ರಾಜಕೀಯ ಇನ್ಸಿಂಗ್ಸ್ ಆರಂಭಿಸುವ ರಿಸ್ಕಿಗೆ ವಾದ್ರಾ ಮುಂದಾಗುತ್ತಿರುವುದು ನಿಜಕ್ಕೂ ಸೋಜಿಗ!

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search