• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹೈಕಮಾಂಡ್ ಹೇಳಿದರೆ ಸಿಎಂ ಕುರ್ಚಿ ಬಿಡುವೆ ಎಂದ ಸಿದ್ದರಾಮಯ್ಯ ಕೊಟ್ಟ ಸುಳಿವೇನು?

Tulunadu News Posted On April 13, 2024
0


0
Shares
  • Share On Facebook
  • Tweet It

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ರಾಜ್ಯದ ಕಾಂಗ್ರೆಸ್ ಸರಕಾರದ ಹಲವು ಸಚಿವರ ಕುಟುಂಬದವರು ಕಣಕ್ಕೆ ಇಳಿದಿರುವುದು ಇಡೀ ರಾಜ್ಯಕ್ಕೆ ಗೊತ್ತಿದೆ. ಈ ಸಲ ಸಚಿವರು ಹೇಳಿದ ವ್ಯಕ್ತಿಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡಿದೆ. ಈಗ ಆ ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆಯೂ ಆಯಾ ಸಚಿವರ ಮೇಲಿದೆ. ಅದರೊಂದಿಗೆ ಕರ್ನಾಟಕದಿಂದ ಕನಿಷ್ಟ 20 ಸೀಟುಗಳನ್ನು ಗೆಲ್ಲಲೇಬೇಕೆಂಬ ಟಾಸ್ಕನ್ನು ಹೈಕಮಾಂಡ್ ಸಿದ್ದು ಹಾಗೂ ಡಿಕೆಶಿ ಹೆಗಲಿಗೆ ಹಾಕಿದೆ. ಒಂದು ವೇಳೆ ಅಷ್ಟು ಸೀಟುಗಳು ಬರದಿದ್ದರೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಮ್ಮ ಸ್ಥಾನದಿಂದ ಕೆಳಗಿಳಿಯಬೇಕಾಗುತ್ತದೆಯಾ? ಹೊಸ ಮಂತ್ರಿಮಂಡಲದ ರಚನೆ ಆಗುತ್ತದೆಯಾ? ಈ ಪ್ರಶ್ನೆಗಳಿಗೆ ಜೂನ್ 4 ರ ಸಂಜೆಯ ಬಳಿಕ ಉತ್ತರ ಸಿಗಬಹುದು.
ಆದರೆ ಒಂದು ವೇಳೆ ತಮ್ಮ ಕುಟುಂಬದವರು ನಿಂತ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸೋತರೆ ಆ ಸಚಿವರ ತಲೆದಂಡವಾಗುವುದಿದ್ದರೆ ಒಟ್ಟಾರೆ ರಾಜ್ಯದಲ್ಲಿ ಕಾಂಗ್ರೆಸ್ ಎರಡಂಕಿಗೆ ತಲುಪದಿದ್ದರೆ ಸಿದ್ಧರಾಮಯ್ಯ ಕೆಳಗಿಳಿಯಬೇಕಾದ ಒತ್ತಡ ಸೃಷ್ಟಿಯಾಗಲಿದೆಯಾ? ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ರಾಜ್ಯದ 28 ಲೋಕಸಭಾ ಕ್ಷೇತ್ರಗಳನ್ನು ಸಿದ್ದು – ಡಿಕೆಶಿ ತಂಡಗಳಿಗೆ ಹಂಚಿಕೊಟ್ಟಾಗಿದೆ. ಯಾರ ಮೇಲ್ವಿಚಾರಣೆಯ ಕ್ಷೇತ್ರಗಳು ಎಷ್ಟು ಗೆಲ್ಲುತ್ತದೆ ಎನ್ನುವುದರ ಮೇಲೆ ಸಿದ್ದು ಸಿಎಂ ಭವಿಷ್ಯ ಅಡಗಿದೆಯಾ ಎನ್ನುವುದು ರಾಜಕೀಯ ಪಂಡಿತರ ಲೆಕ್ಕಾಚಾರ.
ಇನ್ನು ಮತದಾನಕ್ಕೆ ದಿನಗಳು ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ ಲೆಕ್ಕಾಚಾರಗಳು 20 ಸೀಟಿನ ತನಕ ತಾವು ಹೋಗುವುದಿಲ್ಲ ಎನ್ನುವ ಸುಳಿವು ನೀಡಿವೆ. ಸಿಎಂ ಒಂದು ಹೆಜ್ಜೆ ಮುಂದೆ ಹೋಗಿ ” ಮೈತ್ರಿಕೂಟಕ್ಕೆ ಸಂಪೂರ್ಣ ಬಹುಮತ ಸಿಗದೇ ಇರಬಹುದು. ಆದರೆ ಕೇಂದ್ರದಲ್ಲಿ ಸರಕಾರ ರಚಿಸಲು ಎನ್ ಡಿಗೂ ಸಾಕಷ್ಟು ಸ್ಥಾನಗಳು ಸಿಗುವುದಿಲ್ಲ ” ಎಂದು ಅತಂತ್ರ ಲೋಕಸಭೆಯ ಸುಳಿವು ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
  • Popular Posts

    • 1
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 2
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 3
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search