• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹೈಕಮಾಂಡ್ ಹೇಳಿದರೆ ಸಿಎಂ ಕುರ್ಚಿ ಬಿಡುವೆ ಎಂದ ಸಿದ್ದರಾಮಯ್ಯ ಕೊಟ್ಟ ಸುಳಿವೇನು?

Tulunadu News Posted On April 13, 2024
0


0
Shares
  • Share On Facebook
  • Tweet It

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ರಾಜ್ಯದ ಕಾಂಗ್ರೆಸ್ ಸರಕಾರದ ಹಲವು ಸಚಿವರ ಕುಟುಂಬದವರು ಕಣಕ್ಕೆ ಇಳಿದಿರುವುದು ಇಡೀ ರಾಜ್ಯಕ್ಕೆ ಗೊತ್ತಿದೆ. ಈ ಸಲ ಸಚಿವರು ಹೇಳಿದ ವ್ಯಕ್ತಿಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡಿದೆ. ಈಗ ಆ ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆಯೂ ಆಯಾ ಸಚಿವರ ಮೇಲಿದೆ. ಅದರೊಂದಿಗೆ ಕರ್ನಾಟಕದಿಂದ ಕನಿಷ್ಟ 20 ಸೀಟುಗಳನ್ನು ಗೆಲ್ಲಲೇಬೇಕೆಂಬ ಟಾಸ್ಕನ್ನು ಹೈಕಮಾಂಡ್ ಸಿದ್ದು ಹಾಗೂ ಡಿಕೆಶಿ ಹೆಗಲಿಗೆ ಹಾಕಿದೆ. ಒಂದು ವೇಳೆ ಅಷ್ಟು ಸೀಟುಗಳು ಬರದಿದ್ದರೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಮ್ಮ ಸ್ಥಾನದಿಂದ ಕೆಳಗಿಳಿಯಬೇಕಾಗುತ್ತದೆಯಾ? ಹೊಸ ಮಂತ್ರಿಮಂಡಲದ ರಚನೆ ಆಗುತ್ತದೆಯಾ? ಈ ಪ್ರಶ್ನೆಗಳಿಗೆ ಜೂನ್ 4 ರ ಸಂಜೆಯ ಬಳಿಕ ಉತ್ತರ ಸಿಗಬಹುದು.
ಆದರೆ ಒಂದು ವೇಳೆ ತಮ್ಮ ಕುಟುಂಬದವರು ನಿಂತ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸೋತರೆ ಆ ಸಚಿವರ ತಲೆದಂಡವಾಗುವುದಿದ್ದರೆ ಒಟ್ಟಾರೆ ರಾಜ್ಯದಲ್ಲಿ ಕಾಂಗ್ರೆಸ್ ಎರಡಂಕಿಗೆ ತಲುಪದಿದ್ದರೆ ಸಿದ್ಧರಾಮಯ್ಯ ಕೆಳಗಿಳಿಯಬೇಕಾದ ಒತ್ತಡ ಸೃಷ್ಟಿಯಾಗಲಿದೆಯಾ? ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ರಾಜ್ಯದ 28 ಲೋಕಸಭಾ ಕ್ಷೇತ್ರಗಳನ್ನು ಸಿದ್ದು – ಡಿಕೆಶಿ ತಂಡಗಳಿಗೆ ಹಂಚಿಕೊಟ್ಟಾಗಿದೆ. ಯಾರ ಮೇಲ್ವಿಚಾರಣೆಯ ಕ್ಷೇತ್ರಗಳು ಎಷ್ಟು ಗೆಲ್ಲುತ್ತದೆ ಎನ್ನುವುದರ ಮೇಲೆ ಸಿದ್ದು ಸಿಎಂ ಭವಿಷ್ಯ ಅಡಗಿದೆಯಾ ಎನ್ನುವುದು ರಾಜಕೀಯ ಪಂಡಿತರ ಲೆಕ್ಕಾಚಾರ.
ಇನ್ನು ಮತದಾನಕ್ಕೆ ದಿನಗಳು ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ ಲೆಕ್ಕಾಚಾರಗಳು 20 ಸೀಟಿನ ತನಕ ತಾವು ಹೋಗುವುದಿಲ್ಲ ಎನ್ನುವ ಸುಳಿವು ನೀಡಿವೆ. ಸಿಎಂ ಒಂದು ಹೆಜ್ಜೆ ಮುಂದೆ ಹೋಗಿ ” ಮೈತ್ರಿಕೂಟಕ್ಕೆ ಸಂಪೂರ್ಣ ಬಹುಮತ ಸಿಗದೇ ಇರಬಹುದು. ಆದರೆ ಕೇಂದ್ರದಲ್ಲಿ ಸರಕಾರ ರಚಿಸಲು ಎನ್ ಡಿಗೂ ಸಾಕಷ್ಟು ಸ್ಥಾನಗಳು ಸಿಗುವುದಿಲ್ಲ ” ಎಂದು ಅತಂತ್ರ ಲೋಕಸಭೆಯ ಸುಳಿವು ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search