• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇವಿಎಂ ಬೇಡಾ ಎಂದವರಿಗೆ ಸುಪ್ರೀಂಕೋರ್ಟ್ ಇವತ್ತು ಹೇಳಿದ್ದು ಏನು?

Tulunadu News Posted On April 16, 2024
0


0
Shares
  • Share On Facebook
  • Tweet It

ಅಸೋಸಿಯೇಶನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ ಪರ ವಾದ ಮಂಡಿಸಿದ ವಕೀಲ ಪ್ರಶಾಂತ್ ಭೂಷಣ್ ಅವರು ನಮ್ಮ ದೇಶ ಪೇಪರ್ ಬ್ಯಾಲೆಟ್ ಮತದಾನ ಪದ್ಧತಿಗೆ ಹಿಂದಿರುಗಬೇಕು ಎಂದು ವಾದ ಮಂಡಿಸಿದರು. ಇವಿಎಂಗಳಲ್ಲಿ ಚಲಾವಣೆಯ ಮತಗಳನ್ನು ವಿವಿಪ್ಯಾಟ್ ಸ್ಲಿಪ್ ಗಳೊಂದಿಗೆ ಕ್ರಾಸ್ ಚೆಕ್ ಮಾಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಬ್ಯಾಲೆಟ್ ಪೇಪರ್ ಮತದಾನ ಪದ್ಧತಿಯಲ್ಲಿರುವ ಸಮಸ್ಯೆಗಳನ್ನು ಎತ್ತಿ ತೋರಿಸಿತು.

ವಿವಿ ಪ್ಯಾಟ್ ವಿನ್ಯಾಸವನ್ನು ಬದಲಿಸಬೇಕಾಗಿದ್ದು, ಪಾರದರ್ಶಕ ಗಾಜನ್ನು ಹೊಂದಿರಬೇಕು. ಆದರೆ ಅದು ಈಗ ಅಪಾರದರ್ಶಕ ಗಾಜನ್ನು ಹೊಂದಿದ್ದು, ಒಳಗಡೆ ಬೆಳಕು ಆನ್ ಆದರೆ ಮಾತ್ರ ನಮಗೆ ವಿವಿಪ್ಯಾಟ್ ಸ್ಲಿಪ್ ಕಾಣುತ್ತದೆ ಎಂದ ಪ್ರಶಾಂತ್ ಭೂಷಣ ಅವರು ಇದೇ ವೇಳೆ ಜರ್ಮನಿಯ ಉದಾಹರಣೆಯನ್ನು ನೀಡಿದರು. ಈ ವೇಳೆ ನ್ಯಾಯಮೂರ್ತಿ ದೀಪಶಂಕರ್ ದತ್ತಾ ಜರ್ಮನಿಯ ಜನಸಂಖ್ಯೆ ಎಷ್ಟು ಎಂದು ಕೇಳಿದರು. ಆಗ ಪ್ರಶಾಂತ್ ಭೂಷಣ್ ಜರ್ಮನಿಯಲ್ಲಿ ಸುಮಾರು 6 ಕೋಟಿ ಮತದಾರರು ಮಾತ್ರ ಇದ್ದು, ಭಾರತದಲ್ಲಿ 50 ರಿಂದ 60 ಕೋಟಿ ಮತದಾರರಿದ್ದಾರೆ ಎಂದು ಹೇಳಿದರು.

ಆಗ ಮಧ್ಯಪ್ರವೇಶಿಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ” ಭಾರತದಲ್ಲಿ 97 ಕೋಟಿ ಮತದಾರರು ನೋಂದಣಿಯಾಗಿದ್ದಾರೆ. ಬ್ಯಾಲೆಟ್ ಪೇಪರ್ ಗಳು ಇದ್ದಾಗ ಏನಾಯಿತು ಎಂದು ನಮಗೆಲ್ಲರಿಗೂ ತಿಳಿದಿದೆ” ಎಂದರು. ಅದರೊಂದಿಗೆ ಭಾರತದ ಚುನಾವಣೆಯನ್ನು ವಿದೇಶಗಳಲ್ಲಿನ ಮತದಾನದೊಂದಿಗೆ ಹೋಲಿಸಬೇಡಿ ಎಂದು ನ್ಯಾಯಮೂರ್ತಿ ದೀಪಂಕರ್ ದತ್ತಾ ಅರ್ಜಿದಾರ ವಕೀಲರಿಗೆ ಹೇಳಿದರು. ನನ್ನ ತವರು ರಾಜ್ಯ ಪಶ್ಚಿಮ ಬಂಗಾಳದ ಜನಸಂಖ್ಯೆಯು ಜರ್ಮನಿಗಿಂತ ಹೆಚ್ಚಾಗಿದೆ. ನಾವು ಯಾರನ್ನಾದರೂ ಒಬ್ಬರನ್ನು ನಂಬಬೇಕು. ಈ ರೀತಿಯ ವ್ಯವಸ್ಥೆಯನ್ನು ಕೆಡವಲು ಪ್ರಯತ್ನಿಸಬೇಡಿ” ಎಂದು ತಿಳಿಸಿದರು.

0
Shares
  • Share On Facebook
  • Tweet It




Trending Now
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
  • Popular Posts

    • 1
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 2
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 3
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 4
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 5
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!

  • Privacy Policy
  • Contact
© Tulunadu Infomedia.

Press enter/return to begin your search