• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿ ಮತ ಯಾಚನೆ : ಸ್ಥಿಮಿತ ಕಳೆದುಕೊಂಡು ಹಲ್ಲೆಗೆ ಯತ್ನಿಸಿದ ಕಾಂಗ್ರೆಸ್ ನಾಯಕರು!

Tulunadu News Posted On April 19, 2024
0


0
Shares
  • Share On Facebook
  • Tweet It

ಹೇಳಿ ಕೇಳಿ ದಕ್ಷಿಣಕನ್ನಡ ಜಿಲ್ಲೆ ಮೊದಲೇ ಬಿಜೆಪಿಯ ಭದ್ರಕೋಟೆ. ಅದರ ಮೇಲೆ ಮಂಗಳೂರಿಗೆ ಮೋದಿ ಬಂದು ಹೋದ ಮೇಲಂತೂ ಇಡೀ ಜಿಲ್ಲೆಯಲ್ಲಿ ಬಿಜೆಪಿ ಪರ ದೊಡ್ಡ ಅಲೆಯೇ ಎದ್ದಿದೆ. ಸಹಜವಾಗಿ ಕಾಂಗ್ರೆಸ್ ಪಡೆ ತತ್ತರಿಸಿ ಹೋಗಿದ್ದು ಆ ಪಕ್ಷದ ಎಲ್ಲಾ ನಾಯಕರು ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ವರ್ತಿಸುತ್ತಿರುವುದು ಕಂಡು ಬರುತ್ತಿದೆ.

ನಗರದ ಚಿಲಿಂಬಿ ಪರಿಸರದ ಸಾರ್ವಜನಿಕ ರಸ್ತೆಯಲ್ಲಿ ಮಂಗಳೂರು ದಕ್ಷಿಣದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಅಶ್ವಿತ್ ಕೊಟ್ಟಾರಿಯವರ ನೇತೃತ್ವದಲ್ಲಿ ಕ್ಯಾ.ಬ್ರಿಜೇಶ್ ಚೌಟರ ಪರ ಪ್ರಚಾರ ನಡೆಸುತ್ತಿದ್ದ ವೇಳೆ ತಗಾದೆ ತೆಗೆದ ಕಾಂಗ್ರೆಸ್ಸಿಗರು ಗುಂಪುಗೂಡಿ ಬಂದು “ನೀವು ಬಿಜೆಪಿಯವರು ಇಲ್ಲಿ ಪ್ರಚಾರ ಮಾಡಬಾರದು, ಇದು ನಮ್ಮ ಜಾಗ” ಎಂದು ನೇರವಾಗಿ ಹಲ್ಲೆಗೆ ಮುಂದಾಗಿ ಸಾರ್ವಜನಿಕ ಪ್ರದೇಶದಲ್ಲಿ ಬಿಜೆಪಿಯವರ ಮತಯಾಚನೆಗೆ ಅಡ್ಡಿಪಡಿಸಲು ಯತ್ನಿಸಿದರು.

ಕೆಲವು ಕಾಂಗ್ರೆಸ್ ಕಾರ್ಯಕರ್ತರು ಇದೇ ವೇಳೆ ಉದ್ದೇಶಪೂರ್ವಕವಾಗಿ ರಸ್ತೆ ಬ್ಲಾಕ್ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಟ್ಟರೂ ಸಂಯಮ ಕಳೆದುಕೊಳ್ಳದ ಬಿಜೆಪಿ ಕಾರ್ಯಕರ್ತರು, ಯಾವುದೇ ಗಲಭೆಗೆ ಆಸ್ಪದ ನೀಡದೇ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದ್ದರು.

ನಂತರ ಘಟನೆಯ ಬಗ್ಗೆ ಮಾಹಿತಿ ಪಡೆದ ಶಾಸಕ ವೇದವ್ಯಾಸ ಕಾಮತರು ಕೂಡಲೇ ಅಲ್ಲಿಗೆ ಆಗಮಿಸಿ ಸಾರ್ವಜನಿಕ ಸ್ಥಳದಲ್ಲಿ ಮತಯಾಚನೆಗೆ ಅಡ್ಡಿಪಡಿಸಿದ ಕಾಂಗ್ರೆಸ್ ನಾಯಕರ ವರ್ತನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಆದರೂ ಅಂತಹ ಘಟನೆಗಳು ದೇವಸ್ಥಾನದ ಒಳಗೆ ನಡೆದಿದ್ದರೆ ಸಿಸಿಟಿವಿ ದೃಶ್ಯವನ್ನು ಬಹಿರಂಗಪಡಿಲಿ. ಸೇರಿದ್ದ ಸಾರ್ವಜನಿಕರೂ ಸಹ ಕಾಂಗ್ರೆಸ್ಸಿನ ಈ ಪ್ರಜಾಪ್ರಭುತ್ವ ವಿರೋಧಿ ವರ್ತನೆಗೆ ಹಿಡಿ ಶಾಪ ಹಾಕುತ್ತಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಅಲ್ಲಿನ ವಾಸ್ತವತೆಯನ್ನು ಅರಿತು ವಿನಾಕಾರಣ ಗೊಂದಲ ಸೃಷ್ಟಿಸಿದ ಕಾಂಗ್ರೆಸ್ ನಾಯಕರನ್ನು ಚದುರಿಸಲು ಯತ್ನಿಸಿದರು.

ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಅಲಿಯಾಸ್ ಕೊತ್ವಾಲ್ ಶಿಷ್ಯನ ಚಾಳಿಯನ್ನೇ ನಮ್ಮ ಜಿಲ್ಲೆಗೂ ಮುಂದುವರಿಸಿ ಗೂಂಡಾವರ್ತನೆ ತೋರಿದ ಕಾಂಗ್ರೆಸ್ ನಾಯಕರ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.

ಕಾಂಗ್ರೆಸ್ಸಿಗರ ದಬ್ಬಾಳಿಕೆಯ ಹೊರತಾಗಿಯೂ ಬಿಜೆಪಿ ಯುವಮೋರ್ಚಾದ ಕಾರ್ಯಕರ್ತರು ತಮ್ಮ ಪಕ್ಷದ ಅಭ್ಯರ್ಥಿಯ ಪರ ಮತಯಾಚನೆ ನಡೆಸಿ ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search