• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಯೋಧ್ಯೆಯ ರಾಮ ದರ್ಶನಕ್ಕೆ ಪಾಕಿಸ್ತಾನಿಯರು!

Tulunadu News Posted On May 3, 2024
0


0
Shares
  • Share On Facebook
  • Tweet It

ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯಾದಾಗಿನಿಂದ ಲಕ್ಷಾಂತರ ಮಂದಿ ಭಕ್ತರು ದೇಶ, ವಿದೇಶದಿಂದ ಬಂದು ಇಲ್ಲಿ ಪ್ರಾರ್ಥನೆ
ಸಲ್ಲಿಸುತ್ತಿದ್ದಾರೆ. ಇದೀಗ ಇದಕ್ಕೆ ಇನ್ನೊಂದು ವಿಷಯ ಸೇರ್ಪಡೆಯಾಗಿದೆ. ಪಾಕಿಸ್ತಾನದಿಂದಲೂ ಬಾಲರಾಮನ ದರ್ಶನ ಪಡೆಯಲು ಜನರು ಬರುತ್ತಿದ್ದಾರೆ.
ಪಾಕಿಸ್ತಾನದಲ್ಲಿರುವ ಸಿಂಧಿ ಸಮುದಾಯದ 200 ಸದಸ್ಯರ ನಿಯೋಗ ಅಯೋಧ್ಯೆಗೆ ತೆರಳಿ ಬಾಲರಾಮನಿಗೆ ಪೂಜೆ ಸಲ್ಲಿಸಿದೆ ಎಂದು ದೇವಸ್ಥಾನದ ಟ್ರಸ್ಟ್ ಅಧಿಕಾರಿಗಳು ತಿಳಿಸಿದ್ದಾರೆ.
ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಈ ನಿಯೋಗವು ಭಾರತಕ್ಕೆ ಒಂದು ತಿಂಗಳ ಧಾರ್ಮಿಕ ಪ್ರವಾಸದಲ್ಲಿದೆ. ರಸ್ತೆ ಮಾರ್ಗವಾಗಿ ಪ್ರಯಾಗ್ ರಾಜ್ ನಿಂದ ಅಯೋಧ್ಯೆಗೆ ತಲುಪಿದ ಸಿಂಧಿ ಸಮುದಾಯವನ್ನು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ರಾಮ್ ಕಿ ಪೈಡಿಯಲ್ಲಿ ಸ್ವಾಗತಿಸಿದರು. ಭಾರತದಿಂದ ಸಿಂಧಿ ಸಮುದಾಯದ 150 ಸದಸ್ಯರ ನಿಯೋಗವೂ ಇದರೊಂದಿಗೆ ಪ್ರಯಾಣಿಸಿದೆ.
ಅಯೋಧ್ಯೆಯ ಉದಾಸಿನ್ ಋಷಿ ಆಶ್ರಮ ಮತ್ತು ಶಬರಿ ರಸೋಯಿಯಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ನಿಯೋಗವು ಸಂಜೆ ರಾಮ್ ಕಿ ಪೈಡಿಯಲ್ಲಿ ಸರಯು ಆರತಿಯಲ್ಲಿ ಪಾಲ್ಗೊಂಡಿತ್ತು.
ಅಯೋಧ್ಯೆಯ ಸಿಂಧಿಧಾಮ್ ಆಶ್ರಮದಲ್ಲಿ ಪಾಕಿಸ್ತಾನಿ ನಿಯೋಗಕ್ಕಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ದೇಶದ ವಿವಿಧ ಭಾಗಗಳಿಂದ ಬಂದಿರುವ ಸಿಂಧಿ ಸಂಘಗಳು ಅವರನ್ನು ಸ್ವಾಗತಿಸಿದವು. ರಾಯಪುರದ ಸಂತ ಸದಾ ರಾಮ್ ದರ್ಬಾರ್ ನ ಪೀಠದೇಶ್ವರರು, ಯುಧಿಷ್ಠರ್ ಲಾಲ್ ಸಹ ಅವರೊಂದಿಗೆ ಇದ್ದಾರೆ. ನಿಯೋಗವು ಅಯೋಧ್ಯೆಯಲ್ಲಿ ದೇವರ ದರ್ಶನ ಪಡೆದು ಅಲ್ಲಿಂದ ಲಕ್ನೋಗೆ ತೆರಳಲಿದೆ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search