• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೊನೆಗೂ ಸಂಜೆ ಬಂದು ಮತ ಚಲಾಯಿಸಿ ತೆರಳಿದ ಅನಂತಕುಮಾರ್ ಹೆಗ್ಡೆ!

Tulunadu News Posted On May 7, 2024
0


0
Shares
  • Share On Facebook
  • Tweet It

ಉತ್ತರ ಕನ್ನಡ ಲೋಕಸಭಾ ಚುನಾವಣೆಗೆ ಟಿಕೆಟ್ ತಪ್ಪಿದ ಬಳಿಕ ರಾಜಕೀಯದಿಂದ ದೂರವೇ ಉಳಿದಿದ್ದ ಸಂಸದ ಅನಂತಕುಮಾರ್ ಹೆಗ್ಡೆ ಕೊನೆಗೂ ಮನೆಯಿಂದ ಹೊರಬಂದು ಮತ ಚಲಾಯಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಕೆಎಚ್ ಬಿ ಕಾಲೋನಿಯ ಸರಕಾರಿ ಪ್ರಾಥಮಿಕ ಶಾಲೆಯ ಮತಗಟ್ಟೆಗೆ ಪತ್ನಿ ಜೊತೆಗೆ ಆಗಮಿಸಿ ಮತದಾನ ಮಾಡಿದ್ದಾರೆ. ಸಾಮಾನ್ಯವಾಗಿ ಈ ಹಿಂದಿನ ಚುನಾವಣೆಗಳಲ್ಲಿ ಬೆಳಿಗ್ಗೆ 8 ಗಂಟೆಗೆಲ್ಲಾ ಮತಕೇಂದ್ರಕ್ಕೆ ಬಂದು ಮತದಾನ ಮಾಡುತ್ತಿದ್ದ ಅನಂತಕುಮಾರ್ ಹೆಗ್ಡೆ ಮೊದಲ ಬಾರಿ ಸಾವಕಾಶವಾಗಿ ಸಂಜೆ 4.30 ರ ಸುಮಾರಿಗೆ ಬಂದು ಮತ ಚಲಾಯಿಸಿದ್ದಾರೆ.

ಮತದಾನ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಲು ಅಷ್ಟೇನೂ ಆಸಕ್ತಿ ತೋರಿಸಿದ ಹೆಗ್ಡೆ, ಮತದಾನ ಮಾಡುವುದು ದೇಶದ ಜನರ ಕರ್ತವ್ಯ. ಹಾಗಾಗಿ ನಾನು ದೇಶದ ಒಬ್ಬ ಪ್ರಜೆಯಾಗಿ ಮತ ಚಲಾವಣೆ ಮಾಡಲು ಬಂದಿದ್ದೇನೆ ಎಂದು ಹೇಳಿ ತೆರಳಿದರು. ಟಿಕೆಟ್ ಕೈ ತಪ್ಪಿದ ಬಗ್ಗೆ , ಪ್ರಧಾನಿ ನರೇಂದ್ರ ಮೋದಿಯವರು ಉತ್ತರ ಕನ್ನಡದ ಶಿರಸಿಗೆ ಬಂದಾಗ ಏಕೆ ಕಾಣಿಸಿಕೊಳ್ಳಲಿಲ್ಲ ಎಂದು ಕೇಳಿದಾಗಲೂ ಏನೂ ಉತ್ತರಿಸದೇ ಮುಗುಳುನಗೆ ಬೀರಿ ಮುಂದೆ ಸಾಗಿದರು.

ಒಟ್ಟು ಆರು ಬಾರಿ ಸಂಸದರಾಗಿರುವ ಅವರು ಈ ಬಾರಿಯೂ ಟಿಕೆಟ್ ಸಿಕ್ಕೆ ಸಿಗುತ್ತದೆ ಎನ್ನುವ ಆಶಾಭಾವನೆಯಿಂದ ಚುನಾವಣೆ ಘೋಷಣೆಯಾಗುವ ಆರು ತಿಂಗಳ ಮೊದಲಿನಿಂದ ಪ್ರಚಾರದಲ್ಲಿ ವ್ಯಸ್ತರಾಗಿದ್ದರು. ಆದರೆ ಟಿಕೆಟ್ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಪಾಲಾದ ನಂತರ ಮನೆಯಿಂದ ಹೊರಗೆ ಪ್ರಚಾರಕ್ಕೆ ಬರಲೇ ಇಲ್ಲ. ಕಾಗೇರಿಯವರು ಅನಂತ ಕುಮಾರ್ ಮನೆಯ ಹೊರಗೆ ಕಾದು ಬಂದ ದಾರಿಗೆ ಸುಂಕವಿಲ್ಲದೇ ತೆರಳಿದಂತಹ ಘಟನೆ ಕೂಡ ನಡೆಯಿತು. ಅನಂತ್ ಮೌನ ಭಾರತೀಯ ಜನತಾ ಪಾರ್ಟಿಯ ಗೆಲುವು ಮತ್ತು ಸೋಲಿನ ನಡುವೆ ಬಂಡೆಯಂತೆ ನಿಂತಿದೆ ಎನ್ನುವುದು ರಾಜಕೀಯ ಪಂಡಿತರ ಅಭಿಪ್ರಾಯ.

0
Shares
  • Share On Facebook
  • Tweet It




Trending Now
ಯೋಗಿ ದೇಶದ ನಂ 1 ಸಿಎಂ - ಇಂಡಿಯಾ ಟುಡೇ ಸಮೀಕ್ಷೆ
Tulunadu News August 30, 2025
ಬೀದಿನಾಯಿಗಳಿಗೆ ಇನ್ನು ವಿಧಾನಸೌಧದಲ್ಲೇ ವಸತಿ ಕಲ್ಪಿಸಲು ಯೋಜನೆ!
Tulunadu News August 30, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಯೋಗಿ ದೇಶದ ನಂ 1 ಸಿಎಂ - ಇಂಡಿಯಾ ಟುಡೇ ಸಮೀಕ್ಷೆ
    • ಬೀದಿನಾಯಿಗಳಿಗೆ ಇನ್ನು ವಿಧಾನಸೌಧದಲ್ಲೇ ವಸತಿ ಕಲ್ಪಿಸಲು ಯೋಜನೆ!
    • ಹುಬ್ಬಳ್ಳಿಯ ಈದ್ಗಾ ಮೈದಾನವನ್ನು ರಾಣಿ ಚೆನ್ನಮ್ಮ ಮೈದಾನ ಎಂದು ಪಾಲಿಕೆ ಅಧಿಕೃತ ಘೋಷಣೆ!
    • ಅನುಶ್ರೀ - ರೋಷನ್ ದಾಂಪತ್ಯ ಜೀವನಕ್ಕೆ ನಿಮ್ಮದೂ ಶುಭ ಹಾರೈಕೆ ಇರಲಿ!
    • ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
    • ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
    • ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
    • ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
    • ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!
    • ತಿಮರೋಡಿ ಮನೆ ಮೇಲೆ ಬೆಳ್ಳಂಬೆಳಗ್ಗೆ SIT ದಾಳಿ.. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಆಶ್ರಯ ನೀಡಿದ ಆರೋಪ!
  • Popular Posts

    • 1
      ಯೋಗಿ ದೇಶದ ನಂ 1 ಸಿಎಂ - ಇಂಡಿಯಾ ಟುಡೇ ಸಮೀಕ್ಷೆ
    • 2
      ಬೀದಿನಾಯಿಗಳಿಗೆ ಇನ್ನು ವಿಧಾನಸೌಧದಲ್ಲೇ ವಸತಿ ಕಲ್ಪಿಸಲು ಯೋಜನೆ!
    • 3
      ಹುಬ್ಬಳ್ಳಿಯ ಈದ್ಗಾ ಮೈದಾನವನ್ನು ರಾಣಿ ಚೆನ್ನಮ್ಮ ಮೈದಾನ ಎಂದು ಪಾಲಿಕೆ ಅಧಿಕೃತ ಘೋಷಣೆ!
    • 4
      ಅನುಶ್ರೀ - ರೋಷನ್ ದಾಂಪತ್ಯ ಜೀವನಕ್ಕೆ ನಿಮ್ಮದೂ ಶುಭ ಹಾರೈಕೆ ಇರಲಿ!
    • 5
      ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..

  • Privacy Policy
  • Contact
© Tulunadu Infomedia.

Press enter/return to begin your search