• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇವೇಗೌಡರಿಂದ ಕಾರ್ಯಕರ್ತರಿಗೆ ಭಾವುಕ ಪತ್ರ: ಏನಿದೆ ಪತ್ರದಲ್ಲಿ… ?

Tulunadu News Posted On May 16, 2024
0


0
Shares
  • Share On Facebook
  • Tweet It

ದೇವೇಗೌಡರಿಗೆ ಈ ವಯಸ್ಸಿನಲ್ಲಿ ಹೀಗೆ ಆಗಬಾರದಿತ್ತು ಕಣ್ರೀ ಎಂದು ಹೇಳಿದವರೇ ಹೆಚ್ಚು. ಒಂದು ಕಡೆ ಪ್ರೀತಿಯ ಮೊಮ್ಮೊಗ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸಿಲುಕಿ ಸುದ್ದಿಯಾಗಬಾರದ ವಿಷಯಕ್ಕೆ ರಾಜ್ಯ, ದೇಶ, ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಸುದ್ದಿಯಾಗಿದ್ದಾರೆ. ಏಪ್ರಿಲ್ 26 ರಂದು ಮತದಾನದ ದಿನ ಹಾಸನದಿಂದ ತೆರಳಿದ ಪ್ರಜ್ವಲ್ ಇಲ್ಲಿಯವರೆಗೂ ಎಲ್ಲಿದ್ದಾರೆ ಎಂದು ಕುಟುಂಬಸ್ಥರ ಬಳಿಯೂ ಸರಿಯಾದ ಮಾಹಿತಿ ಇದೆಯೋ, ಇಲ್ವೋ.

ತಮ್ಮ ರಾಜಕೀಯ ಕರ್ಮಭೂಮಿ ಹಾಸನವನ್ನು ಮೊಮ್ಮೊಗನಿಗೆ ಬಿಟ್ಟುಕೊಟ್ಟು ತಾವು ತುಮಕೂರಿನಲ್ಲಿ ಸ್ಪರ್ಧಿಸಿ ಸೋತಿದ್ದರೂ ದೇವೇಗೌಡರಿಗೆ ಆವತ್ತು ಅಷ್ಟು ಬೇಸರ ಆಗಿರಲಿಕ್ಕಿಲ್ಲ. ಆದರೆ ಈಗ ಮೊಮ್ಮೊಗನ ಬಗ್ಗೆ ಚಿಂತೆ ಶುರುವಾಗಿದೆ. ಅದರೊಂದಿಗೆ ಪುತ್ರ ರೇವಣ್ಣ ಕೋರ್ಟ್, ಬೇಲ್, ಜೈಲು ಎಂದು ಸುತ್ತಾಡುತ್ತಿರುವುದು ನೋಡಿ ಮನಸ್ಸಿಗೆ ಆಘಾತವಾಗಿದೆ. ಈ ಹೊತ್ತಿನಲ್ಲಿಯೇ ಎಚ್ ಡಿ ದೇವೇಗೌಡರ ಜನ್ಮದಿನವೂ ಬಂದಿರುವುದು ಕಾಕತಾಳೀಯ.

ಇದೇ ಮೇ 18 ರಂದು ದೊಡ್ಡ ಗೌಡರು 91 ವರ್ಷ ಪೂರೈಸಿ 92 ಕ್ಕೆ ಕಾಲಿಡುತ್ತಿದ್ದಾರೆ. ಆದರೆ ಈ ಬಾರಿ ಅವರಿಗೆ ಜನ್ಮದಿನವನ್ನು ಆಚರಿಸಿಕೊಳ್ಳಲು ಮನಸ್ಸಿಲ್ಲ. ಹೀಗಾಗಿ ಕಾರ್ಯಕರ್ತರಿಗೆ ಪತ್ರವೊಂದನ್ನು ಬರೆದು ಅದನ್ನು ಮಾಧ್ಯಮ ಪ್ರಕಟನೆಯ ಮೂಲಕ ಬಿಡುಗಡೆಗೊಳಿಸಿದ್ದಾರೆ. ಈ ವರ್ಷ ಕಾರಣಾಂತರಗಳಿಂದ ನಾನು ಜನ್ಮದಿನವನ್ನು ಆಚರಿಸಿಕೊಳ್ಳುತ್ತಿಲ್ಲ. ಹೀಗಾಗಿ ತಾವೆಲ್ಲರೂ ಇದ್ದಲ್ಲಿಯೇ ಹಾರೈಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ಪ್ರಸ್ತಕ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ – ಬಿಜೆಪಿ (ಎನ್ ಡಿಎ) ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಬೇಕು ಹಾಗೂ ಪಕ್ಷದ ಸಂಘಟನೆಗೆ ಪ್ರತಿಯೊಬ್ಬರೂ ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search