• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮತದಾರರಿಗೆ ಕೊರಿಯರ್ ಮೂಲಕ ಗಿಫ್ಟ್!?

Tulunadu News Posted On May 17, 2024
0


0
Shares
  • Share On Facebook
  • Tweet It

ಬೆಂಗಳೂರು ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿ ಗೌಡ ಅವರು ಕೋರಿಯರ್‌ ಮೂಲಕ ಪದವೀಧರ ಮತದಾರರಿಗೆ ಕಳುಹಿಸಿದ್ದಾರೆ ಎನ್ನಲಾದ ಉಡುಗೊರೆಗಳನ್ನು ಚುನಾವಣಾ ನಿಗಾ ಘಟಕದ (ಎಫ್‌ಎಸ್‌ಟಿ) ಸಿಬ್ಬಂದಿ ಗುರುವಾರ ಜಪ್ತಿ ಮಾಡಿಕೊಂಡಿದ್ದಾರೆ.

ಖಚಿತ ಸುಳಿವಿನ ಮೇರೆಗೆ ಪಟ್ಟಣದ ಹೊಸ ಬಸ್‌ ನಿಲ್ದಾಣದ ಹಿಂಭಾಗದಲ್ಲಿರುವ ಡಿಟಿಡಿಸಿ ಕೊರಿಯರ್‌ ಕಚೇರಿ ಮೇಲೆ ದಾಳಿ ನಡೆಸಿದ ಚುನಾವಣಾ ನಿಗಾ ಘಟಕದ ಅಧಿಕಾರಿಗಳ ತಂಡವು ಮತದಾರರ ವಿಳಾಸಕ್ಕೆ ರವಾನೆಯಾಗಬೇಕಿದ್ದ ಉಡುಗೊರೆಗಳ ಬಾಕ್ಸ್‌ಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.

ಡಿನ್ನರ್‌ ಸೆಟ್‌ ಸೇರಿದಂತೆ ಅಡುಗೆ ಮನೆ ಸಾಮಗ್ರಿಗಳಿರುವ 109ಕ್ಕೂ ಹೆಚ್ಚು ಬಾಕ್ಸ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರತಿ ಬಾಕ್ಸ್‌ ಮೇಲೆ ರಾಮೋಜಿ ಗೌಡ ಭಾವಚಿತ್ರ ಅಚ್ಚು ಹಾಕಿಸಲಾಗಿದೆ. ಮತ ನೀಡುವಂತೆ ಮನವಿ ಮಾಡಿದ ಕರಪತ್ರ ಅಂಟಿಸಲಾಗಿದೆ.

‘ಕೋರಿಯರ್‌ ಮೂಲಕ ಮತದಾರರ ಮನೆಗೆ ನೇರವಾಗಿ ಉಡುಗೊರೆ ತಲುಪಿಸುವ ‌ತಂತ್ರ ರೂಪಿಸಲಾಗಿತ್ತು. ಅದನ್ನು ವಿಫಲಗೊಳಿಸಲಾಗಿದೆ. ಈ ಉಡುಗೊರೆ ಬಾಕ್ಸ್‌ಗಳು ಕಾಂಗ್ರೆಸ್‌ ಅಭ್ಯರ್ಥಿ ರಾಮೋಜಿ ಗೌಡರಿಗೆ ಸೇರಿವೆ ಎಂಬುವುದು ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಮೋಜಿ ಗೌಡ ವಿರುದ್ಧ ದೇವನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಗೊರೆ ಬಾಕ್ಸ್ ಮೇಲೆ ಕಂಡು ಬಂದ ಪದವೀಧರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಾಮೋಜಿ ಗೌಡ ಭಾವಚಿತ್ರ ಉಡುಗೊರೆ ಬಾಕ್ಸ್‌ನಲ್ಲಿ ಕಂಡಬಂದ ಕರಪತ್ರ ಆನೇಕಲ್‌ ತಾಲ್ಲೂಕಿನ ನೆರಳೂರು ಸಮೀಪದ ತಿರುಮಗೊಂಡನಹಳ್ಳಿಯ ಕಾಂಗ್ರೆಸ್‌ ಅಭ್ಯರ್ಥಿ ಮತದಾರರಿಗೆ ಹಂಚಲು ಸಂಗ್ರಹಿಸಲಾಗಿದೆ ಎನ್ನಲಾದ ಗಿಫ್ಟ್‌ ಬಾಕ್ಸ್‌ಗಳನ್ನು ಬಿಜೆಪಿ ಕಾರ್ಯಕರ್ತರು ಪ್ರದರ್ಶಿಸಿದರು ಆನೇಕಲ್‌ ತಾಲ್ಲೂಕಿನ ನೆರಳೂರು ಸಮೀಪದ ತಿರುಮಗೊಂಡನಹಳ್ಳಿಯಲ್ಲಿ ಮತದಾರರಿಗೆ ಹಂಚಲು ತರಲಾಗಿದ್ದ ಉಡುಗೊರೆ
ಖಚಿತ ಮಾಹಿತಿ ಮೇರೆಗೆ ಎಫ್‌ಎಸ್‌ಟಿ ತಂಡ ದಾಳಿ ಮಾಡಿ ಮತದಾರರಿಗೆ ಹಂಚಲು ಇಟ್ಟಿದ್ದ ಉಡುಗೊರೆಗಳನ್ನು ಜಪ್ತಿ ಮಾಡಿದೆ. ಪೊಲೀಸ್‌ ಇಲಾಖೆಗೆ ಪ್ರಕರಣ ದಾಖಲು ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಆನೇಕಲ್‌ನಲ್ಲೂ ಸಾವಿರಾರು ಉಡುಗೊರೆ ಬಾಕ್ಸ್‌ ಜಪ್ತಿ ಆನೇಕಲ್:

ಪದವೀಧರ ಕ್ಷೇತ್ರದ ಮತದಾರರಿಗೆ ಹಂಚಲು ತಾಲ್ಲೂಕಿನ ನೆರಳೂರು ಸಮೀಪದ ತಿರುಮಗೊಂಡನಹಳ್ಳಿಯ ಡಿಟಿಡಿಸಿ ಕೋರಿಯರ್‌ ಗೋದಾಮಿನಲ್ಲಿದ್ದ ನೂರಾರು ಗಿಫ್ಟ್‌ ಬಾಕ್ಸ್‌ಗಳನ್ನು ಬಿಜೆಪಿ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಗಿಫ್ಟ್‌ ಬಾಕ್ಸ್‌ ಕೂಡ ಕಾಂಗ್ರೆಸ್‌ ಅಭ್ಯರ್ಥಿ ರಾಮೋಜಿ ಗೌಡ ಅವರಿಗೆ ಸೇರಿವೆ ಎನ್ನಲಾಗಿದ್ದು ಅತ್ತಿಬೆಲೆ ಪೊಲೀಸರು ಮತ್ತು ಚುನಾವಣೆ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಬುಧವಾರ ರಾತ್ರಿ ಬಿಜೆಪಿ ಕಾರ್ಯಕರ್ತರು ತಿರುಮಗೊಂಡನಹಳ್ಳಿ ಬಳಿಯ ಡಿಟಿಡಿಸಿ ಗೋದಾಮ ಬಳಿ ಜಮಾಯಿಸಿದ್ದರು. ಕೋರಿಯರ್ ಮೂಲಕ ಮತದಾರರಿಗೆ ಹಂಚಲು ಕಳುಹಿಸುತ್ತಿದ್ದಾರೆ ಎನ್ನಲಾದ ನೂರಾರು ಬಾಕ್ಸ್‌ ಡಿಟಿಡಿಸಿ ಗೋದಾಮನಲ್ಲಿರುವುದು ಕಂಡು ಬಂದ ಕೂಡಲೇ ಅತ್ತಿಬೆಲೆ ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಗುರುವಾರ ಬೆಳಗ್ಗೆ ಸ್ಥಳಕ್ಕೆ ಬಂದ ಅಧಿಕಾರಿಗಳು ಡಿಟಿಡಿಸಿ ಕೋರಿಯರ್ ಗೋದಾಮಿಗೆ ಬಾಗಿಲು ಹಾಕಿ ತಪಾಸಣೆ ನಡೆಸಿದ್ದಾರೆ. ಕೋರಿಯರ್ ಕಚೇರಿ ಒಳಗಡೆ ಇದ್ದ ರಾಮೋಜಿ ಗೌಡ ಚುನಾವಣೆ ಪ್ರಚಾರದ ಭಿತ್ತಿ ಪತ್ರಗಳು ಹಾಗೂ ಬಂಟಿಂಗ್ಸ್‌ ವಶಕ್ಕೆ ಪಡೆದಿದ್ದಾರೆ.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search