• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮತದಾರರಿಗೆ ಕೊರಿಯರ್ ಮೂಲಕ ಗಿಫ್ಟ್!?

Tulunadu News Posted On May 17, 2024
0


0
Shares
  • Share On Facebook
  • Tweet It

ಬೆಂಗಳೂರು ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿ ಗೌಡ ಅವರು ಕೋರಿಯರ್‌ ಮೂಲಕ ಪದವೀಧರ ಮತದಾರರಿಗೆ ಕಳುಹಿಸಿದ್ದಾರೆ ಎನ್ನಲಾದ ಉಡುಗೊರೆಗಳನ್ನು ಚುನಾವಣಾ ನಿಗಾ ಘಟಕದ (ಎಫ್‌ಎಸ್‌ಟಿ) ಸಿಬ್ಬಂದಿ ಗುರುವಾರ ಜಪ್ತಿ ಮಾಡಿಕೊಂಡಿದ್ದಾರೆ.

ಖಚಿತ ಸುಳಿವಿನ ಮೇರೆಗೆ ಪಟ್ಟಣದ ಹೊಸ ಬಸ್‌ ನಿಲ್ದಾಣದ ಹಿಂಭಾಗದಲ್ಲಿರುವ ಡಿಟಿಡಿಸಿ ಕೊರಿಯರ್‌ ಕಚೇರಿ ಮೇಲೆ ದಾಳಿ ನಡೆಸಿದ ಚುನಾವಣಾ ನಿಗಾ ಘಟಕದ ಅಧಿಕಾರಿಗಳ ತಂಡವು ಮತದಾರರ ವಿಳಾಸಕ್ಕೆ ರವಾನೆಯಾಗಬೇಕಿದ್ದ ಉಡುಗೊರೆಗಳ ಬಾಕ್ಸ್‌ಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.

ಡಿನ್ನರ್‌ ಸೆಟ್‌ ಸೇರಿದಂತೆ ಅಡುಗೆ ಮನೆ ಸಾಮಗ್ರಿಗಳಿರುವ 109ಕ್ಕೂ ಹೆಚ್ಚು ಬಾಕ್ಸ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರತಿ ಬಾಕ್ಸ್‌ ಮೇಲೆ ರಾಮೋಜಿ ಗೌಡ ಭಾವಚಿತ್ರ ಅಚ್ಚು ಹಾಕಿಸಲಾಗಿದೆ. ಮತ ನೀಡುವಂತೆ ಮನವಿ ಮಾಡಿದ ಕರಪತ್ರ ಅಂಟಿಸಲಾಗಿದೆ.

‘ಕೋರಿಯರ್‌ ಮೂಲಕ ಮತದಾರರ ಮನೆಗೆ ನೇರವಾಗಿ ಉಡುಗೊರೆ ತಲುಪಿಸುವ ‌ತಂತ್ರ ರೂಪಿಸಲಾಗಿತ್ತು. ಅದನ್ನು ವಿಫಲಗೊಳಿಸಲಾಗಿದೆ. ಈ ಉಡುಗೊರೆ ಬಾಕ್ಸ್‌ಗಳು ಕಾಂಗ್ರೆಸ್‌ ಅಭ್ಯರ್ಥಿ ರಾಮೋಜಿ ಗೌಡರಿಗೆ ಸೇರಿವೆ ಎಂಬುವುದು ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಮೋಜಿ ಗೌಡ ವಿರುದ್ಧ ದೇವನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಗೊರೆ ಬಾಕ್ಸ್ ಮೇಲೆ ಕಂಡು ಬಂದ ಪದವೀಧರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಾಮೋಜಿ ಗೌಡ ಭಾವಚಿತ್ರ ಉಡುಗೊರೆ ಬಾಕ್ಸ್‌ನಲ್ಲಿ ಕಂಡಬಂದ ಕರಪತ್ರ ಆನೇಕಲ್‌ ತಾಲ್ಲೂಕಿನ ನೆರಳೂರು ಸಮೀಪದ ತಿರುಮಗೊಂಡನಹಳ್ಳಿಯ ಕಾಂಗ್ರೆಸ್‌ ಅಭ್ಯರ್ಥಿ ಮತದಾರರಿಗೆ ಹಂಚಲು ಸಂಗ್ರಹಿಸಲಾಗಿದೆ ಎನ್ನಲಾದ ಗಿಫ್ಟ್‌ ಬಾಕ್ಸ್‌ಗಳನ್ನು ಬಿಜೆಪಿ ಕಾರ್ಯಕರ್ತರು ಪ್ರದರ್ಶಿಸಿದರು ಆನೇಕಲ್‌ ತಾಲ್ಲೂಕಿನ ನೆರಳೂರು ಸಮೀಪದ ತಿರುಮಗೊಂಡನಹಳ್ಳಿಯಲ್ಲಿ ಮತದಾರರಿಗೆ ಹಂಚಲು ತರಲಾಗಿದ್ದ ಉಡುಗೊರೆ
ಖಚಿತ ಮಾಹಿತಿ ಮೇರೆಗೆ ಎಫ್‌ಎಸ್‌ಟಿ ತಂಡ ದಾಳಿ ಮಾಡಿ ಮತದಾರರಿಗೆ ಹಂಚಲು ಇಟ್ಟಿದ್ದ ಉಡುಗೊರೆಗಳನ್ನು ಜಪ್ತಿ ಮಾಡಿದೆ. ಪೊಲೀಸ್‌ ಇಲಾಖೆಗೆ ಪ್ರಕರಣ ದಾಖಲು ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಆನೇಕಲ್‌ನಲ್ಲೂ ಸಾವಿರಾರು ಉಡುಗೊರೆ ಬಾಕ್ಸ್‌ ಜಪ್ತಿ ಆನೇಕಲ್:

ಪದವೀಧರ ಕ್ಷೇತ್ರದ ಮತದಾರರಿಗೆ ಹಂಚಲು ತಾಲ್ಲೂಕಿನ ನೆರಳೂರು ಸಮೀಪದ ತಿರುಮಗೊಂಡನಹಳ್ಳಿಯ ಡಿಟಿಡಿಸಿ ಕೋರಿಯರ್‌ ಗೋದಾಮಿನಲ್ಲಿದ್ದ ನೂರಾರು ಗಿಫ್ಟ್‌ ಬಾಕ್ಸ್‌ಗಳನ್ನು ಬಿಜೆಪಿ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಗಿಫ್ಟ್‌ ಬಾಕ್ಸ್‌ ಕೂಡ ಕಾಂಗ್ರೆಸ್‌ ಅಭ್ಯರ್ಥಿ ರಾಮೋಜಿ ಗೌಡ ಅವರಿಗೆ ಸೇರಿವೆ ಎನ್ನಲಾಗಿದ್ದು ಅತ್ತಿಬೆಲೆ ಪೊಲೀಸರು ಮತ್ತು ಚುನಾವಣೆ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಬುಧವಾರ ರಾತ್ರಿ ಬಿಜೆಪಿ ಕಾರ್ಯಕರ್ತರು ತಿರುಮಗೊಂಡನಹಳ್ಳಿ ಬಳಿಯ ಡಿಟಿಡಿಸಿ ಗೋದಾಮ ಬಳಿ ಜಮಾಯಿಸಿದ್ದರು. ಕೋರಿಯರ್ ಮೂಲಕ ಮತದಾರರಿಗೆ ಹಂಚಲು ಕಳುಹಿಸುತ್ತಿದ್ದಾರೆ ಎನ್ನಲಾದ ನೂರಾರು ಬಾಕ್ಸ್‌ ಡಿಟಿಡಿಸಿ ಗೋದಾಮನಲ್ಲಿರುವುದು ಕಂಡು ಬಂದ ಕೂಡಲೇ ಅತ್ತಿಬೆಲೆ ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಗುರುವಾರ ಬೆಳಗ್ಗೆ ಸ್ಥಳಕ್ಕೆ ಬಂದ ಅಧಿಕಾರಿಗಳು ಡಿಟಿಡಿಸಿ ಕೋರಿಯರ್ ಗೋದಾಮಿಗೆ ಬಾಗಿಲು ಹಾಕಿ ತಪಾಸಣೆ ನಡೆಸಿದ್ದಾರೆ. ಕೋರಿಯರ್ ಕಚೇರಿ ಒಳಗಡೆ ಇದ್ದ ರಾಮೋಜಿ ಗೌಡ ಚುನಾವಣೆ ಪ್ರಚಾರದ ಭಿತ್ತಿ ಪತ್ರಗಳು ಹಾಗೂ ಬಂಟಿಂಗ್ಸ್‌ ವಶಕ್ಕೆ ಪಡೆದಿದ್ದಾರೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search