• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪ್ರಜ್ವಲ್ ಬ್ಯಾಂಕ್ ಖಾತೆ ಸೀಝ್ ಮಾಡಲು ಎಸ್ ಐಟಿ ನಿರ್ಧಾರ!

Tulunadu News Posted On May 18, 2024


  • Share On Facebook
  • Tweet It

ಪೆನ್ ಡ್ರೈವ್ ಪ್ರಕರಣದ ಪ್ರಧಾನ ಆರೋಪಿ ಪ್ರಜ್ವಲ್ ರೇವಣ್ಣ ಸ್ವದೇಶಕ್ಕೆ ಬರುವುದನ್ನು ಮುಂದೂಡುತ್ತಿರುವ ಈ ಸಂದರ್ಭದಲ್ಲಿ ಅವರನ್ನು ಎಲ್ಲಾ ಕಡೆಗಳಿಂದಲೂ ಆರ್ಥಿಕವಾಗಿ ಕಟ್ಟಿ ಹಾಕಲು ವಿಶೇಷ ತನಿಖಾ ದಳ ಮುಂದಾಗಿದೆ. ಒಬ್ಬ ಆರೋಪಿ ತನಿಖೆಯನ್ನು ಎದುರಿಸಲು ಮುಂದಾಗದ ಪರಿಸ್ಥಿತಿಯಲ್ಲಿ ಅವರಿಗೆ ಇರುವ ಹಣಕಾಸಿನ ಮೂಲಗಳನ್ನು ಬಂದ್ ಮಾಡಿದರೆ ಆಗ ಆ ವ್ಯಕ್ತಿ ಬೇರೆ ದಾರಿ ಕಾಣದೇ ತಾನಾಗಿಯೇ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ಇದು ಬಹಳ ಹಳೆಯ ವಿಧಾನವಾದರೂ ಎಂದೆಂದಿಗೂ ಪರಿಣಾಮಕಾರಿಯಾಗಬಲ್ಲ ಸಾಧನವಾಗಿದೆ. ಈಗಾಗಲೇ ಪ್ರಜ್ವಲ್ ರೇವಣ್ಣನವರಿಗೆ ಸೇರಿದ ಎಲ್ಲಾ ಬ್ಯಾಂಕ್ ಖಾತೆಗಳ ಮಾಹಿತಿ ಪಡೆಯಲಾಗಿದ್ದು, ಅವರಿಗೆ ಸೇರಿದ ಬ್ಯಾಂಕ್ ಅಕೌಂಟ್ ಗಳನ್ನು ಫ್ರೀಝ್ ಮಾಡುವ ಪ್ರಕ್ರಿಯೆಗೆ ಅಧಿಕಾರಿಗಳು ತಯಾರಾಗಿದ್ದಾರೆ ಎನ್ನಲಾಗಿದೆ.

ಇನ್ನು ಪ್ರಜ್ವಲ್ ವಿದೇಶದಲ್ಲಿರುವುದರಿಂದ ಅವರ ಅಲ್ಲಿನ ಖರ್ಚಿಗೆ ಇಲ್ಲಿಂದ ಅವರ ಬ್ಯಾಂಕ್ ಖಾತೆಗೆ ಹಣ ಪಾವತಿಯಾಗಿರುವ ಸಾಧ್ಯತೆಗಳಿರುತ್ತವೆ. ಹಾಗೆ ಯಾರಾದರೂ ಹಣ ಹಾಕಿದ್ದಾರಾ ಎನ್ನುವುದನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಎಸ್ ಐಟಿಗೆ ಅಧಿಕೃತವಾಗಿ ಲಭ್ಯವಿರುವ ಮಾಹಿತಿಯ ಪ್ರಕಾರ ಪ್ರಜ್ವಲ್ ಏಳು ಖಾತೆಗಳನ್ನು ಹೊಂದಿದ್ದು, ಅದರ ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ. ಪ್ರಜ್ವಲ್ ತಲೆಮರೆಸಿಕೊಂಡು ತಿಂಗಳಾಗುತ್ತಾ ಬಂದಿರುವುದರಿಂದ ಈ ಕ್ರಮಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ.

ಪೆನ್ ಡ್ರೈವ್ ಪ್ರಕರಣ ದಿನಕ್ಕೊಂದು ತಿರುವನ್ನು ಪಡೆದುಕೊಳ್ಳುತ್ತಿದ್ದು, ಸದ್ಯ ಪೆನ್ ಡ್ರೈವ್ ಹಂಚಿರುವ ಹಿಂದಿನ ಕಾಣದ ಕೈಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಪ್ರಕರಣ ಗರಿಗೆದರುತ್ತಿದ್ದಂತೆ ಎಪ್ರಿಲ್ 26 ರಂದು ರಾಜ್ಯದಲ್ಲಿ ಮೊದಲ ಹಂತದ ಮತದಾನದಂದು ವಿದೇಶಕ್ಕೆ ಹಾರಿರುವ ಪ್ರಜ್ವಲ್ ಯಾವಾಗ ಭಾರತಕ್ಕೆ ಮರಳುತ್ತಾರೆ ಎನ್ನುವ ಮಾಹಿತಿ ಯಾರ ಬಳಿಯೂ ಇಲ್ಲ. ಈಗಾಗಲೇ ಜರ್ಮನಿಯಿಂದ ರಿಟನ್ ಟಿಕೆಟ್ ಅವರು ಬುಕ್ ಮಾಡಿದ್ದರೂ ಅವರು ಅದನ್ನು ಬಳಸದೇ ಇರುವುದು ಮತ್ತಷ್ಟು ಊಹಾಪೋಹಾಕ್ಕೆ ಕಾರಣವಾಗಿದೆ. ಅವರಿಗೆ ಈಗಾಗಲೇ ಬ್ಲೂ ಕಾರ್ನರ್ ನೋಟಿಸ್ ಜಾರಿಗೊಳಿಸಲಾಗಿದೆ. ಇನ್ನೂ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿ ರೆಡ್ ಕಾರ್ನರ್ ನೋಟಿಸ್ ನೀಡಲು ಅಧಿಕಾರಿಗಳು ತಯಾರಿ ನಡೆಸಿದ್ದಾರೆ ಎನ್ನುವ ಮಾಹಿತಿ ದೊರಕಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search