• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಗೆದ್ದರೆ ನಟನೆ ಬಿಡುತ್ತೇನೆ ಎಂದಿದ್ದೇಕೆ ಬಾಲಿವುಡ್ ಚೆಲುವೆ!

Tulunadu News Posted On May 20, 2024


  • Share On Facebook
  • Tweet It

ಖ್ಯಾತ ಬಾಲಿವುಡ್ ನಟಿ ಕಂಗನಾ ರಾಣಾವತ್ ನೀಡಿರುವ ಹೇಳಿಕೆಯಿಂದ ಬಾಲಿವುಡ್ ನಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ತಾನು ಸ್ಪರ್ಧಿಸುತ್ತಿರುವ ಲೋಕಸಭಾ ಕ್ಷೇತ್ರದಲ್ಲಿ ಗೆದ್ದರೆ ನಟನಾ ಕ್ಷೇತ್ರದಿಂದ ಹಿಂದಕ್ಕೆ ಸರಿಯುತ್ತೇನೆ ಎಂದು ಬಾಲಿವುಡ್ ತಾರೆ ಕಂಗನಾ ರಾಣಾವತ್ ನಿರ್ಧರಿಸಿರುವುದು ಸರಿಯಲ್ಲ ಎನ್ನುವುದು ನಿರ್ಮಾಪಕರ ಅನಿಸಿಕೆ.

ಉತ್ತಮ ಕಲಾವಿದೆಯೊಬ್ಬರು ರಾಜಕೀಯ ಕಾರಣಗಳಿಂದ ನೇಪಥ್ಯಕ್ಕೆ ಸರಿದರೆ ಅದರಿಂದ ಬಾಲಿವುಡ್ ನಷ್ಟ ಅನುಭವಿಸುತ್ತದೆ ಎನ್ನುವುದು ನಿರ್ಮಾಪಕರ ಅಭಿಪ್ರಾಯ.
ಕಂಗನಾ ಉತ್ತಮ ನಟಿಯಾಗಿರುವುದರಿಂದ ಮತ್ತು ಯಶಸ್ವಿ ಚಿತ್ರಗಳನ್ನು ನೀಡುತ್ತಿರುವುದರಿಂದ ಅಂತವರು ಚಿತ್ರರಂಗದಿಂದ ದೂರ ಸರಿದರೆ ಅದರಿಂದ ಚಿತ್ರರಂಗಕ್ಕೆ ಹೊಡೆತ ಬೀಳುತ್ತೆ ಎನ್ನುವ ಕಾರಣಕ್ಕೆ ಹಲವು ನಿರ್ಮಾಪಕರು ಕಂಗನಾ ಅವರಿಗೆ ತಮ್ಮ ನಿರ್ಧಾರವನ್ನು ಮರು ಪರಿಶೀಲಿಸಿ ಎಂದು ಹೇಳುತ್ತಿದ್ದಾರೆ.

ಆದರೆ ತಾವು ಗೆದ್ದಾಗ ತಮ್ಮ ಕ್ಷೇತ್ರದ ಜನಸಾಮಾನ್ಯರ ಕಷ್ಟಗಳನ್ನು ಪರಿಹರಿಸಲು ಮತ್ತು ಕ್ಷೇತ್ರದ ಅಭಿವೃದ್ಧಿಗಾಗಿ ಸಮಯ ಮೀಸಲಿಡಬೇಕಾಗಿರುವುದರಿಂದ ಈ ನಿರ್ಧಾರ ಅನಿವಾರ್ಯ ಎಂದು ಕಂಗನಾ ಹೇಳಿದ್ದಾರೆ.

ದೇಶಕ್ಕಾಗಿ ಇಂತಹ ಹೆಜ್ಜೆಗಳನ್ನು ಇಡಲು ತಮಗೆ ಸಿನೆಮಾರಂಗದಲ್ಲಿ ಉಳಿಯಲು ಸಾಧ್ಯವಿಲ್ಲ ಎಂದು ಮಿಸ್ ರಾಣಾವತ್ ತಿಳಿಸಿದ್ದಾರೆ.
ಮಂಡಿ ಲೋಕಸಭಾ ಕ್ಷೇತ್ರವನ್ನು ಗೆಲ್ಲಲು ಸತತವಾಗಿ ಶ್ರಮ ಹಾಕುತ್ತಿರುವ ಕಂಗನಾ ಅಲ್ಲಿ ಈಗಾಗಲೇ ಎರಡು ತಿಂಗಳ ಪ್ರಚಾರ ಕಾರ್ಯ ಮುಗಿಸಿದ್ದಾರೆ. ಜೂನ್ 1 ರಂದು ಹಿಮಾಚಲ ಪ್ರದೇಶದ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search