• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೆದ್ದರೆ ನಟನೆ ಬಿಡುತ್ತೇನೆ ಎಂದಿದ್ದೇಕೆ ಬಾಲಿವುಡ್ ಚೆಲುವೆ!

Tulunadu News Posted On May 20, 2024
0


0
Shares
  • Share On Facebook
  • Tweet It

ಖ್ಯಾತ ಬಾಲಿವುಡ್ ನಟಿ ಕಂಗನಾ ರಾಣಾವತ್ ನೀಡಿರುವ ಹೇಳಿಕೆಯಿಂದ ಬಾಲಿವುಡ್ ನಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ತಾನು ಸ್ಪರ್ಧಿಸುತ್ತಿರುವ ಲೋಕಸಭಾ ಕ್ಷೇತ್ರದಲ್ಲಿ ಗೆದ್ದರೆ ನಟನಾ ಕ್ಷೇತ್ರದಿಂದ ಹಿಂದಕ್ಕೆ ಸರಿಯುತ್ತೇನೆ ಎಂದು ಬಾಲಿವುಡ್ ತಾರೆ ಕಂಗನಾ ರಾಣಾವತ್ ನಿರ್ಧರಿಸಿರುವುದು ಸರಿಯಲ್ಲ ಎನ್ನುವುದು ನಿರ್ಮಾಪಕರ ಅನಿಸಿಕೆ.

ಉತ್ತಮ ಕಲಾವಿದೆಯೊಬ್ಬರು ರಾಜಕೀಯ ಕಾರಣಗಳಿಂದ ನೇಪಥ್ಯಕ್ಕೆ ಸರಿದರೆ ಅದರಿಂದ ಬಾಲಿವುಡ್ ನಷ್ಟ ಅನುಭವಿಸುತ್ತದೆ ಎನ್ನುವುದು ನಿರ್ಮಾಪಕರ ಅಭಿಪ್ರಾಯ.
ಕಂಗನಾ ಉತ್ತಮ ನಟಿಯಾಗಿರುವುದರಿಂದ ಮತ್ತು ಯಶಸ್ವಿ ಚಿತ್ರಗಳನ್ನು ನೀಡುತ್ತಿರುವುದರಿಂದ ಅಂತವರು ಚಿತ್ರರಂಗದಿಂದ ದೂರ ಸರಿದರೆ ಅದರಿಂದ ಚಿತ್ರರಂಗಕ್ಕೆ ಹೊಡೆತ ಬೀಳುತ್ತೆ ಎನ್ನುವ ಕಾರಣಕ್ಕೆ ಹಲವು ನಿರ್ಮಾಪಕರು ಕಂಗನಾ ಅವರಿಗೆ ತಮ್ಮ ನಿರ್ಧಾರವನ್ನು ಮರು ಪರಿಶೀಲಿಸಿ ಎಂದು ಹೇಳುತ್ತಿದ್ದಾರೆ.

ಆದರೆ ತಾವು ಗೆದ್ದಾಗ ತಮ್ಮ ಕ್ಷೇತ್ರದ ಜನಸಾಮಾನ್ಯರ ಕಷ್ಟಗಳನ್ನು ಪರಿಹರಿಸಲು ಮತ್ತು ಕ್ಷೇತ್ರದ ಅಭಿವೃದ್ಧಿಗಾಗಿ ಸಮಯ ಮೀಸಲಿಡಬೇಕಾಗಿರುವುದರಿಂದ ಈ ನಿರ್ಧಾರ ಅನಿವಾರ್ಯ ಎಂದು ಕಂಗನಾ ಹೇಳಿದ್ದಾರೆ.

ದೇಶಕ್ಕಾಗಿ ಇಂತಹ ಹೆಜ್ಜೆಗಳನ್ನು ಇಡಲು ತಮಗೆ ಸಿನೆಮಾರಂಗದಲ್ಲಿ ಉಳಿಯಲು ಸಾಧ್ಯವಿಲ್ಲ ಎಂದು ಮಿಸ್ ರಾಣಾವತ್ ತಿಳಿಸಿದ್ದಾರೆ.
ಮಂಡಿ ಲೋಕಸಭಾ ಕ್ಷೇತ್ರವನ್ನು ಗೆಲ್ಲಲು ಸತತವಾಗಿ ಶ್ರಮ ಹಾಕುತ್ತಿರುವ ಕಂಗನಾ ಅಲ್ಲಿ ಈಗಾಗಲೇ ಎರಡು ತಿಂಗಳ ಪ್ರಚಾರ ಕಾರ್ಯ ಮುಗಿಸಿದ್ದಾರೆ. ಜೂನ್ 1 ರಂದು ಹಿಮಾಚಲ ಪ್ರದೇಶದ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

0
Shares
  • Share On Facebook
  • Tweet It




Trending Now
ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
Tulunadu News August 22, 2025
ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
Tulunadu News August 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!
    • ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
  • Popular Posts

    • 1
      ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • 2
      ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • 3
      ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • 4
      ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • 5
      ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!

  • Privacy Policy
  • Contact
© Tulunadu Infomedia.

Press enter/return to begin your search