• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕರ್ನಾಟಕದಲ್ಲಿ 40% ಅಪರಾಧ ಈ ವರ್ಷದಲ್ಲಿ ಜಾಸ್ತಿ – ಆರ್.ಅಶೋಕ್

Tulunadu News Posted On June 12, 2024
0


0
Shares
  • Share On Facebook
  • Tweet It

ಟಿಪ್ಪು ಮೈಮೇಲೆ ಬಂದಂತೆ ವರ್ತಿಸುವ ಸಿದ್ಧರಾಮಯ್ಯ
ರಾಜ್ಯದಲ್ಲಿ ತಾಲಿಬಾನ್ ಸರಕಾರ ನಡೆಸುತ್ತಿದ್ದಾರೆ : ಆರ್.ಅಶೋಕ್ ಆರೋಪ

ಉಳ್ಳಾಲ: ಬೋಳಿಯಾರು ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿದಿರುವುದು ಪೂರ್ವಯೋಜಿತ ಕೃತ್ಯ, ಟಿಪ್ಪು ಮೈಮೇಲೆ ಬಂದಂತೆ ನಡೆದುಕೊಳ್ಳುತ್ತಿರುವ ಸಿದ್ದರಾಮಯ್ಯ ರಾಜ್ಯದಲ್ಲಿ ತಾಲಿಬಾನ್ ಸರಕಾರ ನಡೆಸುತ್ತಿದ್ದಾರೆ ಎಂದು ರಾಜ್ಯ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಬೋಳಿಯಾರು ಚೂರಿ ಇರಿತ ಪ್ರಕರಣದಲ್ಲಿ ಹಲ್ಲೆಗೊಳಗಾದ ನಂದನ್ ಮತ್ತು ಹರೀಶ್ ಅವರ ಆರೋಗ್ಯ ಕ್ಷೇಮ ವಿಚಾರಿಸಿದ ಬಳಿಕ ಮಾಧ್ಯಮದ ಜತೆಗೆ ಮಾತನಾಡಿದರು.


ಮಾರಣಾಂತಿಕ ಹಲ್ಲೆ ಡ್ರಾಗನ್ ಚೂರಿ ಹಿಡಿದುಕೊಂಡು ನಡೆಸಿರುವುದು ಗಮನಿಸಿದರೆ ಇದೊಂದು ಪೂರ್ವಯೋಜಿತ ಕೃತ್ಯ. ತಕ್ಷಣಕ್ಕೆ ಡ್ರಾಗನ್ ಚೂರಿ ಎಲ್ಲಿಂದ ಬರುತ್ತೇ. ಭಾರತ್ ಮಾತಾ ಕಿ ಜೈ ಅನ್ನುವ ಘೋಷಣೆ ವೀಡಿಯೋ ಗಮನಿಸಿದ್ದೇನೆ. ಮಸೀದಿ ಮುಂದೆ ಭಾರತ್ ಮಾತಾ ಕಿ ಜೈ ಅಂದಿದ್ದಾರೆ‌. ದೇಶದಲ್ಲಿ ಎಲ್ಲಿಯೂ ದೇಶಕ್ಕೆ ಜೈ ಅಂದಲ್ಲಿ ಸನ್ಮಾನ ಮಾಡ್ತಾರೆ, ಕರ್ನಾಟಕದಲ್ಲಿ ಹಾಗೂ ಮಂಗಳೂರು- ಉಡುಪಿ ಭಾಗದಲ್ಲಿ ಭಾರತ್ ಮಾತಾ ಕಿ ಜೈ ಅಂದಲ್ಲಿ ಡ್ರಾಗನ್ ಹಾಕುವ ಕೃತ್ಯಗಳಾಗುತ್ತಿದ್ದು, ರಾಜ್ಯದಲ್ಲಿ ತಾಲಿಬಾನ್ ಸರಕಾರ ಇದೆ . ಸರಕಾರವನ್ನು ಪ್ರಶ್ನಿಸಲು ಹೇಳೋರೂ ಕೇಳೋರು ಯಾರು ಇಲ್ಲದಾಗಿದೆ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ನಂತರ ಟಿಪ್ಪು ಮೈಮೇಲೆ ಬಂದಂತೆ ಆಟ ಆಡ್ತಾ ಇದಾರೆ. ನಡವಳಿಕೆಗಳೆಲ್ಲವೂ ಟಿಪ್ಪು ರೀತಯಲ್ಲೇ ಇದೆ. ಹಿಂದಿನ ಸಿದ್ದರಾಮಯ್ಯ ಆಡಳಿತ ಅವಧಿಯಲ್ಲಿ
ಬೆಂಗಳೂರು ಶಿವಾಜಿನಗರ ಕೊಲೆಗಳಾಯಿತು. ಅಲ್ಲದೆ ಇಡೀ ರಾಜ್ಯದಲ್ಲೇ 30-40 ಕೊಲೆಗಳೇ ನಡೆದಿದೆ. ಇದೀಗ ಮತ್ತೆ ಕರ್ನಾಟಕ ಕೊಲೆಗಳ ರಾಜ್ಯ ಆಗುತ್ತಿದೆ. ನ್ಯಾಷನಲ್ ಕ್ರೈಂ ಅಂಕಿ ಅಂಶದ ಪ್ರಕಾರ ಕರ್ನಾಟಕದಲ್ಲಿ 40% ಅಪರಾಧ ಈ ವರ್ಷದಲ್ಲಿ ಜಾಸ್ತಿಯಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಗೂಂಡಾಗಳಿಗೆ, ತಾಲಿಬಾನುಗಳಿಗೆ ಪಾಕಿಸ್ತಾನದ ಏಜೆಂಟರುಗಳಿಗೆ ಹಬ್ಬ ಆಗುತ್ತದೆ. ಪೊಲೀಸರು ಖುದ್ದಾಗಿ ಕೌಂಟರ್ ಕೇಸ್ ಕೊಡಿಸುವ ಮೂಲಕ ಕಾಂಪ್ರಮೈಸ್ ಮಾಡುವ ಕಾರ್ಯಗಳಾಗುತ್ತಿದೆ. ಬೋಳಿಯಾರು ಪ್ರಕರಣದಲ್ಲಿ ಕಾಂಗ್ರೆಸ್ ಬೆಲೆ ತೆರಲೇಬೇಕಾಗುತ್ತದೆ. ಹಲ್ಲೆಗೊಳಗಾದವರು ಪಾಕಿಸ್ತಾನದ ಕುನ್ನಿಗಳೇ ಅಂದಿರುವ ದಾಖಲೆಗಳನ್ನು ಪೊಲೀಸ್ ಕಮೀಷನರ್ ಬಳಿಯೇ ಕೇಳುತ್ತೇನೆ. ಜೈ ಶ್ರೀ ರಾಮ್, ಭಾರತ್ ಮಾತಾ ಕಿ ಜೈ ಅನ್ನೋರಿಗೆ ಡ್ರಾಗನ್ ನಿಂದ ಕೊಲೆಯತ್ನ ಮಾಡಲಾಗ್ತ ಇದೆ. ವಿಧಾನಸೌಧಲ್ಲಿ ಪಾಕಿಸ್ತಾನ ಜೈ ಅಂದವರಿಗೆ ಬಿರಿಯಾನಿ ನೀಡಿ ಬೇಲ್ ಕೊಟ್ಟು ವಾಪಸ್ಸು ಕಳುಹಿಸ್ತಾ ಇದಾರೆ‌. ಗೃಹಸಚಿವರೇ ಜವಾಬ್ದಾರಿ ಅರ್ಥಾಗ್ತಿಲ್ಲ. ಇಡೀ ಪ್ರಕರಣದ ಕುರಿತು ವಿಧಾನಸಭೆಯಲ್ಲಿ ಧ್ವನಿ ಎತ್ತುತ್ತೇನೆ. ಪರಿಹಾರ ಕ್ರಮದ ಕುರಿತು ಜಿಲ್ಲಾಧಿಕಾರಿಗಳ ಜೊತೆಗೆ ಚರ್ಚಿಸುತ್ತೇನೆ ಎಂದರು.

ಈ ಸಂದರ್ಭ ಸಂಸದ ಬೃಜೇಶ್ ಚೌಟ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಶಾಸಕರುಗಳಾದ ವೈ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ವಿದಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮುಖಂಡರುಗಳಾದ ಹೇಮಂತ್ ಶೆಟ್ಟಿ ದೇರಳಕಟ್ಟೆ, ಅನಿಲ್ ಬಗಂಬಿಲ ಮೊದಲಾದವರು ಉಪಸ್ಥಿತರಿದ್ದರು.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search