• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನೇಹಾ ಹತ್ಯೆಯ ಚಾರ್ಜ್ ಶೀಟ್ ನಲ್ಲಿ ಲವ್ ಜಿಹಾದ್ ಉಲ್ಲೇಖವಿಲ್ಲ!

Tulunadu News Posted On July 10, 2024
0


0
Shares
  • Share On Facebook
  • Tweet It

ರಾಜ್ಯದಲ್ಲಿಯೇ ಸಂಚಲನ ಉಂಟು ಮಾಡಿದ್ದ ನೇಹಾ ಹಿರೇಮಠ ಹತ್ಯಾ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಕೊಲೆಯಾದ 81 ದಿನಗಳ ಬಳಿಕ ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು, ಅದರಲ್ಲಿರುವ 483 ಪುಟಗಳ ವರದಿ ಸದ್ಯ ನ್ಯಾಯಾಲಯದ ಮುಂದಿದೆ. ಚಾರ್ಜ್ ಶೀಟ್ ನಲ್ಲಿ ನೇಹಾಳ ತಂದೆ, ತಾಯಿ, ಸಹೋದರ, ಸಹಪಾಠಿಗಳು, ಗೆಳತಿಯರು, ಬಿವಿಬಿ ಕಾಲೇಜಿನ ಉಪನ್ಯಾಸಕರು ಸೇರಿದಂತೆ 99 ಸಾಕ್ಷ್ಯಗಳನ್ನು ಉಲ್ಲೇಖಿಸಲಾಗಿದೆ.

ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳು ನೇಹಾ ಹಿರೇಮಠ ಹತ್ಯೆಯ ಹಿಂದೆ ಲವ್ ಜಿಹಾದ್ ಕಾರಣವಿದೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿದ್ದವು. ನೇಹಾ ತಂದೆ ಕೂಡ ಇದನ್ನು ಬಲವಾಗಿ ಸಮರ್ಥಿಸಿದ್ದರು. ಆದರೆ ಸಿಐಡಿ ಸಲ್ಲಿಸಿದ ವರದಿಯಲ್ಲಿ ಲವ್ ಜಿಹಾದ್ ಉಲ್ಲೇಖವಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಕೊಲೆಗೆ ಮದುವೆ ನಿರಾಕರಣೆಯೇ ಕಾರಣ ಎಂದು ಸಿಐಡಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ನೇಹಾ ಹಿರೇಮಠ ಮತ್ತು ಆರೋಪಿ ಫಯಾಜ್ ಹುಬ್ಬಳ್ಳಿಯ ಪಿಸಿ ಜಾಬಿನ್ ಕಾಲೇಜಿನಲ್ಲಿ ಬಿಸಿಎ ಅಧ್ಯಯನ ಮಾಡುತ್ತಿದ್ದಾಗ ಸಹಪಾಠಿಗಳಾಗಿದ್ದರು. ಇಬ್ಬರೂ ಆರಂಭದಲ್ಲಿ ಸ್ನೇಹಿತರಾಗಿ ನಂತರ ಪ್ರೀತಿಸಲು ಶುರು ಮಾಡಿದ್ದರು. 2024 ರ ಮಾರ್ಚ್ ತಿಂಗಳಲ್ಲಿ ಇಬ್ಬರ ಮಧ್ಯೆ ಜಗಳವಾಗಿ, ಅದು ಮನಸ್ತಾಪಕ್ಕೆ ಬೆಳೆದು ನೇಹಾ ಕೊನೆಗೆ ಫಯಾಜ್ ಜೊತೆ ಮಾತನಾಡುವುದನ್ನು ಬಿಟ್ಟುಬಿಟ್ಟಿದ್ದಳು.
ಇದರಿಂದ ಫಯಾಜ್ ತೀವ್ರ ಹತಾಶೆಗೊಂಡು ನೇಹಾಳನ್ನು ಜೀವಂತ ಬಿಡಬಾರದು ಎಂದು ನಿರ್ಧರಿಸಿ ಏಪ್ರಿಲ್ 18 ರಂದು ಕೊಲೆ ಮಾಡುವ ಮೂರು ದಿನಗಳ ಮೊದಲು ಧಾರವಾಡದ ಆರ್ಯ ಸೂಪರ್ ಬಜಾರ್ ನಲ್ಲಿ ಚಾಕು ಖರೀದಿಸಿದ್ದಾನೆ. ಫಯಾಜ್ ಚಾಕು ಖರೀದಿಸಿದ ಸಿಸಿಟಿವಿ ದೃಶ್ಯ ಸಿಐಡಿ ಅಧಿಕಾರಿಗಳಿಗೆ ಲಭ್ಯವಾಗಿದೆ.
ಆರೋಪಿ ಫಯಾಜ್ ವಿರುದ್ಧ ಕಲಂ 302 (ಮರಣದಂಡನೆ ಇಲ್ಲವೇ ಜೀವಾವಧಿ ಶಿಕ್ಷೆ), 341 ( ಒಂದು ತಿಂಗಳು ಜೈಲು ಶಿಕ್ಷೆ) ಹಾಗೂ 506 ( ಜೀವ ಬೆದರಿಕೆಗಾಗಿ 7 ವರ್ಷಗಳ ಜೈಲು ಶಿಕ್ಷೆ ) ಅಡಿಯಲ್ಲಿ ದೋಷಾರೋಪ ಹೊರಿಸಲಾಗಿದೆ.

ಇಷ್ಟು ದಿನ ಪ್ರೀತಿ ಮಾಡಿ ಈಗ ಮೋಸ ಮಾಡುತ್ತಿದ್ದೀಯಾ? ನನ್ನನ್ನು ಮದುವೆ ಆಗುವುದಿಲ್ಲವೇ? ಈಗ ನಿನ್ನನ್ನು ಬಿಡುವುದಿಲ್ಲ ಎಂದು ಸಂಜೆ 4.40 ರ ಸುಮಾರಿಗೆ ಚಾಕುವಿನಿಂದ ಮನಬಂದಂತೆ ಚುಚ್ಚಿ ಕೊಲೆ ಮಾಡಿ, ಅಲ್ಲಿಯೇ ಚಾಕು ಬಿಟ್ಟು ಓಡಿ ಹೋಗಿದ್ದಾನೆ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

0
Shares
  • Share On Facebook
  • Tweet It




Trending Now
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
  • Popular Posts

    • 1
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 2
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search