• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ವಿಚ್ಚೇದಿತ ಮುಸ್ಲಿಂ ಮಹಿಳೆಯರಿಗೂ ಜೀವನಾಂಶದ ಹಕ್ಕಿದೆ – ಸುಪ್ರೀಂ ಕೋರ್ಟ್

Tulunadu News Posted On July 10, 2024


  • Share On Facebook
  • Tweet It

ಗಂಡನಿಂದ ವಿಚ್ಚೇದನಕ್ಕೆ ಒಳಗಾಗಿರುವ ಮುಸ್ಲಿಂ ಮಹಿಳೆ ಜೀವನಾಂಶವನ್ನು ಪಡೆಯಲು ಹಕ್ಕು ಹೊಂದಿದ್ದಾಳೆ ಎಂದು ಸುಪ್ರೀಂ ಕೋರ್ಟಿನ ದ್ವಿಸದಸ್ಯ ಪೀಠ ಮಹತ್ತರ ತೀರ್ಪನ್ನು ನೀಡಿದೆ. ಅಪರಾಧಿಕ ದಂಡ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 125 ರ ಅಡಿಯಲ್ಲಿ ಜೀವನ ನಿರ್ವಹಣೆಗೆ ವಿಚ್ಚೇದಿತ ಮಹಿಳೆ ಪರಿತ್ಯಕ್ತ ಪತಿಯಿಂದ ಹಣವನ್ನು ಪಡೆದುಕೊಳ್ಳಲು ಹಕ್ಕು ಹೊಂದಿದ್ದಾಳೆ. ಇದರಲ್ಲಿ ಯಾವುದೇ ಧರ್ಮ ಹೊರತಾಗಿಲ್ಲ. ಎಲ್ಲಾ ಧರ್ಮದ ಮದುವೆಯಾದ ಮತ್ತು ಮದುವೆಯಾಗದೇ ಒಟ್ಟಿಗಿದ್ದ ಮಹಿಳೆಯರು ಏಕಪ್ರಕಾರವಾಗಿ ಹಕ್ಕನ್ನು ಹೊಂದಿದ್ದಾರೆ ಎಂದು ನ್ಯಾಯಮೂರ್ತಿಗಳಾದ ಜಸ್ಟೀಸ್ ಬಿ ವಿ ನಾಗರತ್ನ ಹಾಗೂ ಜಸ್ಟೀಸ್ ಅಗಸ್ಟೈನ್ ಜಾರ್ಜ್ ಮಾಸಿಹ ಹೇಳಿದ್ದಾರೆ.

ಜೀವನಾಂಶವನ್ನು ವಿಚ್ಚೇದಿತ ಪತ್ನಿಗೆ ನೀಡುವುದು ಅಂದರೆ ದಾನ ನೀಡುವುದಲ್ಲ, ಅದು ಅವರ ಮೂಲಭೂತ ಹಕ್ಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಮಹಿಳೆಯನ್ನು ಆರ್ಥಿಕವಾಗಿ ಬಲಪಡಿಸುವ ನಿಟ್ಟಿನಲ್ಲಿ ಲಿಂಗ ಸಮಾನತೆಯ ಸೂತ್ರವನ್ನು ಅಳವಡಿಸಿ ಇದನ್ನು ಯಾವುದೇ ಧರ್ಮದ ಸೂತ್ರಕ್ಕೆ ಕಟ್ಟು ಹಾಕದೇ ಪರಿಶೀಲಿಸಬೇಕಾಗಿದೆ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ.
“ಕೆಲವು ಗಂಡಂದಿರಿಗೆ ಪತ್ನಿಯಾದವಳು ಓರ್ವ ಗೃಹಿಣಿಯಾಗಿ ತಮ್ಮ ಮೇಲೆ ಎಲ್ಲಾ ರೀತಿಯಲ್ಲಿ ಅವಲಂಬಿತಳಾಗಿದ್ದಾಳೆ ಎನ್ನುವ ಅರಿವೇ ಇರುವುದಿಲ್ಲ. ಆದ್ದರಿಂದ ಇನ್ನಾದರೂ ಭಾರತೀಯ ಪುರುಷರು ಗೃಹಿಣಿಯ ತ್ಯಾಗ ಮತ್ತು ಅರ್ಪಣಾ ಮನೋಭಾವವನ್ನು ಪುರಸ್ಕರಿಸಿ ಆಕೆಗೂ ಉತ್ತಮ ಬಾಳು ಸಿಗಲು ಯೋಚಿಸಬೇಕು” ಎಂದು ನ್ಯಾಯಪೀಠ ಹೇಳಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search