• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅನಂತ್ ಅಂಬಾನಿ ಮದುವೆಗೆ ಎಲ್ಲರೂ ಬಂದ್ರೂ ಅಕ್ಷಯ್ ಕುಮಾರ್ ಬಂದಿಲ್ಲ, ಯಾಕೆ?

Tulunadu News Posted On July 12, 2024
0


0
Shares
  • Share On Facebook
  • Tweet It

ಬಹಳ ಅದ್ದೂರಿ ಮದುವೆಗಳಲ್ಲಿ ಒಂದಾಗಿರುವ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆಗೆ ದೇಶ, ವಿದೇಶದಿಂದ ವಿವಿಐಪಿಗಳು ಸಾಲಾಗಿ ಬರುತ್ತಿದ್ದಾರೆ. ಆಹ್ವಾನ ಸಿಕ್ಕಿದ ಯಾರೂ ಕೂಡ ಈ ಮದುವೆಯನ್ನು ತಪ್ಪಿಸಿಕೊಳ್ಳಲು ಬಯಸುವುದಿಲ್ಲ. ಯಾಕೆಂದರೆ ಭಾರತದ ಇತಿಹಾಸದಲ್ಲಿಯೇ ಅತ್ಯಂತ ಶ್ರೀಮಂತರು, ಪ್ರಭಾವಿಗಳು ಎಲ್ಲರೂ ಒಂದೆಡೆ ಸೇರುವ ಈ ವಿಶೇಷ ಮದುವೆಯಲ್ಲಿ ಭಾಗವಹಿಸುವುದು ಎಂದರೆ ಅದು ಗಣ್ಯರಿಗೆ ಒಂದು ರೀತಿಯ ಸ್ಟೇಟಸ್ ಸಿಂಬಲ್ ಇದ್ದ ಹಾಗೆ. ಭಾರತದಲ್ಲಿ ವಿಐಪಿಗಳಾಗಿರುವ ಬಹುತೇಕರಿಗೆ ಈ ಮದುವೆಗೆ ಆಮಂತ್ರಣ ಸಿಕ್ಕಿದೆ. ಅದು ಮನೋರಂಜನಾ ಕ್ಷೇತ್ರ, ಕ್ರೀಡೆ, ಸಂಗೀತ, ರಾಜಕೀಯ, ವ್ಯಾಪಾರ, ವ್ಯವಹಾರ, ಆಡಳಿತ ಹೀಗೆ ಮುಕ್ಕಾಲು ಬಾಲಿವುಡ್ ಅಂಬಾನಿ ಮನೆಯ ಅಂಗಳದಲ್ಲಿದೆ. ಇಷ್ಟಿರುವಾಗ ಹಿಂದಿ ಸಿನೆಮಾ ರಂಗದ ಕಿಲಾಡಿ ಅಕ್ಷಯ್ ಕುಮಾರ್ ಈ ಮದುವೆಯಲ್ಲಿ ಪಾಲ್ಗೊಳ್ಳುತ್ತಿಲ್ಲ.

ಹಾಗಾದರೆ ಅಕ್ಷಯ್ ಕುಮಾರ್ ಅವರಿಗೆ ಆಹ್ವಾನ ನೀಡಿಲ್ಲವೇ? ನೀಡಿದ್ದರೂ ಅವರಿಗೂ ಅಂಬಾನಿ ಪರಿವಾರಕ್ಕೂ ಏನಾದರೂ ಮುನಿಸಿದೆಯಾ? ಈ ಪ್ರಶ್ನೆ ನಿಮ್ಮನ್ನು ಕಾಡಬಹುದು. ಹಾಗೇನಿಲ್ಲ. ನಟ ಅಕ್ಷಯ್ ಕುಮಾರ್ ಅವರಿಗೆ ಜ್ವರ ಕಾಣಿಸಿಕೊಂಡಿದೆ. ಬಾಲಿವುಡ್ ಫಿಟ್ ನಟನಿಗೆ ಕೋವಿಡ್ ಪಾಸಿಟಿವ್ ಕಂಡುಬಂದಿದೆ. ಅವರು ಸದ್ಯ ಕ್ವಾರಂಟೈನ್ ನಲ್ಲಿದ್ದು, ವೈದ್ಯರು ಶಿಫಾರಸ್ಸು ಮಾಡಿದ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ವರದಿಯ ಪ್ರಕಾರ ಅನಂತ್ ಅಂಬಾನಿ – ರಾಧಿಕಾ ಮದುವೆಯ ದಿನವೇ ಕೋವಿಡ್ ಗೆ ತುತ್ತಾಗಿರುವ ಅಕ್ಷಯ್ ಕುಮಾರ್ ಸದ್ಯ ಮದುವೆಗೆ ಗೈರಾಗಿದ್ದಾರೆ. ಎಲ್ಲಾ ಕಡೆ ಡೆಂಘೆ ರೋಗ ಹರಡುತ್ತಿರುವ ಈ ಸಂದರ್ಭದಲ್ಲಿ ಅಕ್ಷಯ್ ಕುಮಾರ್ ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಅವರ ಕಚೇರಿ ಮೂಲಗಳು ತಿಳಿಸಿವೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search