• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅನಂತ್ ಅಂಬಾನಿ ಮದುವೆಗೆ ಎಲ್ಲರೂ ಬಂದ್ರೂ ಅಕ್ಷಯ್ ಕುಮಾರ್ ಬಂದಿಲ್ಲ, ಯಾಕೆ?

Tulunadu News Posted On July 12, 2024
0


0
Shares
  • Share On Facebook
  • Tweet It

ಬಹಳ ಅದ್ದೂರಿ ಮದುವೆಗಳಲ್ಲಿ ಒಂದಾಗಿರುವ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆಗೆ ದೇಶ, ವಿದೇಶದಿಂದ ವಿವಿಐಪಿಗಳು ಸಾಲಾಗಿ ಬರುತ್ತಿದ್ದಾರೆ. ಆಹ್ವಾನ ಸಿಕ್ಕಿದ ಯಾರೂ ಕೂಡ ಈ ಮದುವೆಯನ್ನು ತಪ್ಪಿಸಿಕೊಳ್ಳಲು ಬಯಸುವುದಿಲ್ಲ. ಯಾಕೆಂದರೆ ಭಾರತದ ಇತಿಹಾಸದಲ್ಲಿಯೇ ಅತ್ಯಂತ ಶ್ರೀಮಂತರು, ಪ್ರಭಾವಿಗಳು ಎಲ್ಲರೂ ಒಂದೆಡೆ ಸೇರುವ ಈ ವಿಶೇಷ ಮದುವೆಯಲ್ಲಿ ಭಾಗವಹಿಸುವುದು ಎಂದರೆ ಅದು ಗಣ್ಯರಿಗೆ ಒಂದು ರೀತಿಯ ಸ್ಟೇಟಸ್ ಸಿಂಬಲ್ ಇದ್ದ ಹಾಗೆ. ಭಾರತದಲ್ಲಿ ವಿಐಪಿಗಳಾಗಿರುವ ಬಹುತೇಕರಿಗೆ ಈ ಮದುವೆಗೆ ಆಮಂತ್ರಣ ಸಿಕ್ಕಿದೆ. ಅದು ಮನೋರಂಜನಾ ಕ್ಷೇತ್ರ, ಕ್ರೀಡೆ, ಸಂಗೀತ, ರಾಜಕೀಯ, ವ್ಯಾಪಾರ, ವ್ಯವಹಾರ, ಆಡಳಿತ ಹೀಗೆ ಮುಕ್ಕಾಲು ಬಾಲಿವುಡ್ ಅಂಬಾನಿ ಮನೆಯ ಅಂಗಳದಲ್ಲಿದೆ. ಇಷ್ಟಿರುವಾಗ ಹಿಂದಿ ಸಿನೆಮಾ ರಂಗದ ಕಿಲಾಡಿ ಅಕ್ಷಯ್ ಕುಮಾರ್ ಈ ಮದುವೆಯಲ್ಲಿ ಪಾಲ್ಗೊಳ್ಳುತ್ತಿಲ್ಲ.

ಹಾಗಾದರೆ ಅಕ್ಷಯ್ ಕುಮಾರ್ ಅವರಿಗೆ ಆಹ್ವಾನ ನೀಡಿಲ್ಲವೇ? ನೀಡಿದ್ದರೂ ಅವರಿಗೂ ಅಂಬಾನಿ ಪರಿವಾರಕ್ಕೂ ಏನಾದರೂ ಮುನಿಸಿದೆಯಾ? ಈ ಪ್ರಶ್ನೆ ನಿಮ್ಮನ್ನು ಕಾಡಬಹುದು. ಹಾಗೇನಿಲ್ಲ. ನಟ ಅಕ್ಷಯ್ ಕುಮಾರ್ ಅವರಿಗೆ ಜ್ವರ ಕಾಣಿಸಿಕೊಂಡಿದೆ. ಬಾಲಿವುಡ್ ಫಿಟ್ ನಟನಿಗೆ ಕೋವಿಡ್ ಪಾಸಿಟಿವ್ ಕಂಡುಬಂದಿದೆ. ಅವರು ಸದ್ಯ ಕ್ವಾರಂಟೈನ್ ನಲ್ಲಿದ್ದು, ವೈದ್ಯರು ಶಿಫಾರಸ್ಸು ಮಾಡಿದ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ವರದಿಯ ಪ್ರಕಾರ ಅನಂತ್ ಅಂಬಾನಿ – ರಾಧಿಕಾ ಮದುವೆಯ ದಿನವೇ ಕೋವಿಡ್ ಗೆ ತುತ್ತಾಗಿರುವ ಅಕ್ಷಯ್ ಕುಮಾರ್ ಸದ್ಯ ಮದುವೆಗೆ ಗೈರಾಗಿದ್ದಾರೆ. ಎಲ್ಲಾ ಕಡೆ ಡೆಂಘೆ ರೋಗ ಹರಡುತ್ತಿರುವ ಈ ಸಂದರ್ಭದಲ್ಲಿ ಅಕ್ಷಯ್ ಕುಮಾರ್ ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಅವರ ಕಚೇರಿ ಮೂಲಗಳು ತಿಳಿಸಿವೆ.

0
Shares
  • Share On Facebook
  • Tweet It




Trending Now
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
Tulunadu News October 22, 2025
ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
Tulunadu News October 21, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
  • Popular Posts

    • 1
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • 2
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search