• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅನಂತ್ ಅಂಬಾನಿ – ರಾಧಿಕಾ ಮರ್ಚಂಟ್ ಮದುವೆಯ ದಿನ ಬೆಳಗ್ಗಿನ ತಿಂಡಿಯ ಮೆನು ಏನಿತ್ತು?

Tulunadu News Posted On July 13, 2024
0


0
Shares
  • Share On Facebook
  • Tweet It

ದಕ್ಷಿಣ ಭಾರತದ ತಿಂಡಿ, ತಿನಿಸುಗಳಿಗೆ ಖ್ಯಾತವಾಗಿರುವ ಬೆಂಗಳೂರಿನ ದಿ ರಾಮೇಶ್ವರಂ ಕೆಫೆ ಅನಂತ್ ಅಂಬಾನಿ – ರಾಧಿಕಾ ಮರ್ಚೆಂಟ್ ವಿವಾಹ ಮಹೋತ್ಸವದಲ್ಲಿ ವಿವಿಧ ಬಗೆಯ ರುಚಿರುಚಿಯಾದ ಅಡುಗೆ ಮಾಡಿ ಬಡಿಸಿದೆ. ಮುಂಬೈ – ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಲ್ಲಿರುವ ಜಿಯೋ ವಲ್ಡ್ ಕನ್ವೆನ್ಶನ್ ಸೆಂಟರ್ ನಲ್ಲಿ ನಡೆದ ಅದ್ದೂರಿ ವಿವಾಹ ಸಮಾರಂಭದಲ್ಲಿ ದೇಶ ವಿದೇಶದ ವಿಶೇಷ ಗಣ್ಯರು ಭಾಗವಹಿಸಿದ್ದರು. ಆದ್ದರಿಂದ ಅವರಿಗೆಲ್ಲರಿಗೂ ರುಚಿಕಟ್ಟಾಗಿರುವ ಮತ್ತು ಭಾರತದ ಬ್ರಾಂಡ್ ನಾಷ್ಟಾ ತಯಾರಿಸುವ ದೊಡ್ಡ ಜವಾಬ್ದಾರಿ ಅಂಬಾನಿ ಪರಿವಾರದ ಮೇಲಿತ್ತು. ಅದಕ್ಕಾಗಿ ದೇಶದ ವಿವಿಧ ಪ್ರಖ್ಯಾತ ಹೋಟೇಲ್, ಕ್ಯಾಟರಿಂಗ್ ನವರಿಗೆ ಈ ಅವಕಾಶ ಸಿಕ್ಕಿದ್ದು, ಬೆಂಗಳೂರಿನ ದಿ ರಾಮೇಶ್ವರಂ ಕೆಫೆ ಹಾಗೂ ಬೆಂಗಳೂರು ಕೆಫೆಗಳಿಗೂ ಇದರಲ್ಲಿ ಭಾಗಿಯಾಗುವ ಅವಕಾಶ ಸಿಕ್ಕಿದೆ.


ಈ ಹಿಂದೆ ರಾಮೇಶ್ವರಂ ಕೆಫೆ ಇಟಲಿಯಲ್ಲಿ ನಡೆದ ಅಂಬಾನಿ ಕುಟುಂಬದ ಎರಡನೇ ಪೂರ್ವ ಸಮಯದಲ್ಲಿ ತನ್ನ ಪಾಕ ಕೌಶಲ್ಯವನ್ನು ಉಣಬಡಿಸಿತ್ತು. ಜುಲೈ 8 ರಂದು ಮುಂಬೈನಲ್ಲಿರುವ ಅಂಬಾನಿ ಮನೆ ಆಂಟಿಲಿಯಾದಲ್ಲಿ ವಿವಾಹಪೂರ್ವ ಸಾಂಪ್ರದಾಯಿಕ ಕಾರ್ಯಕ್ರಮ ಮೆಹಂದಿ ಸಮಾರಂಭಕ್ಕೂ ರಾಮೇಶ್ವರಂ ಕೆಫೆಯಿಂದ ದಕ್ಷಿಣದ ಅಡುಗೆ ಇತ್ತು ಎಂದು ಕೆಫೆ ತಿಳಿಸಿದೆ.
ಬೆಳಗ್ಗಿನ ಚಾ ಮೆನುವಿನಲ್ಲಿ ತೆಂಗಿನ ಪುರನ್ ಪೋಲಿ, ಪೆಸರಟ್ಟು ದೋಸೆ, ತಟ್ಟೆ ಇಡ್ಲಿ, ಬೋಂಡಾ ಸೂಪ್ ಮತ್ತು ಅತ್ಯುತ್ತಮ ಫಿಲ್ಟರ್ ಕಾಫಿ ಮತ್ತು ಚಹಾ ಇತ್ತು ಎಂದು ರಾಮೇಶ್ವರಂ ಕೆಫೆ ಕಡೆಯಿಂದ ಮಾಹಿತಿ ಸಿಕ್ಕಿದೆ.
ಆಹಾರಕ್ಕಿಂತ ಹೆಚ್ಚಾಗಿ ಅದರಲ್ಲಿ ಭಾಗವಹಿಸಿದ ಗಣ್ಯರ ಪೋಷಾಕು, ನೃತ್ಯ ಮತ್ತು ಸಂಭ್ರಮ ಕಣ್ಣುಕುಕ್ಕುವಂತಿತ್ತು ಎನ್ನುವುದಕ್ಕೆ ಯಾವುದೇ ಅಡ್ಡಿಯಿಲ್ಲ

0
Shares
  • Share On Facebook
  • Tweet It




Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search