• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಗನ ಸಿಎ ಪಾಸ್ ಫಲಿತಾಂಶಕ್ಕೆ ತಾಯಿಯ ಸ್ಪಂದನೆ

Tulunadu News Posted On July 16, 2024
0


0
Shares
  • Share On Facebook
  • Tweet It

ಹೆತ್ತವರು ತಾವು ಎಷ್ಟೇ ಕಷ್ಟಪಟ್ಟರೂ ತಮ್ಮ ಮಕ್ಕಳು ಮಾತ್ರ ಉತ್ತಮ ಜೀವನವನ್ನು ನಡೆಸಬೇಕೆಂದು ಬಯಸುತ್ತಾರೆ. ಅದಕ್ಕಾಗಿ ಎಲ್ಲಾ ಕಷ್ಟಗಳನ್ನು ತಾವು ಅನುಭವಿಸುತ್ತಾ ಮಕ್ಕಳಿಗೆ ಉತ್ತಮ ಬದುಕನ್ನು ನೀಡಲು ಹಗಲಿರುಳು ಶ್ರಮಿಸುತ್ತಾರೆ. ಕೆಲವೊಮ್ಮೆ ಮಕ್ಕಳಿಗೆ ತಮ್ಮ ಅಪ್ಪ, ಅಮ್ಮ ತಮಗಾಗಿ ಅನುಭವಿಸುತ್ತಿರುವ ಕಷ್ಟ ಗೊತ್ತಾಗುವುದಿಲ್ಲ. ಇನ್ನು ಕೆಲವು ಸಂದರ್ಭಗಳಲ್ಲಿ ಪೋಷಕರು ಎಷ್ಟೇ ಸಂಕಟಪಟ್ಟು ಮಕ್ಕಳನ್ನು ಓದಿಸುತ್ತಿದ್ದರೂ ಅದರ ಮಹತ್ವ ಅರಿಯದೇ ಮಗ, ಮಗಳು ದಾರಿ ತಪ್ಪುವುದೂ ಇದೆ. ಆದರೆ ಇನ್ನು ಕೆಲವು ಕುಟುಂಬಗಳಲ್ಲಿ ಮಕ್ಕಳು ತಮ್ಮ ತಂದೆ, ತಾಯಿಯ ತ್ಯಾಗವನ್ನು ಅರಿತು ತಾವು ಉತ್ತಮವಾಗಿ ಕಲಿತು ಹೆತ್ತವರಿಗೆ ಖುಷಿ ಕೊಟ್ಟಿದ್ದೂ ಇದೆ.

ತೊಂಬರೆ ಮಾವಶಿ ಎನ್ನುವ ತಾಯಿಯೊಬ್ಬರು ಮಹಾರಾಷ್ಟ್ರದ ಥಾಣೆ ಉಪನಗರದ ಡೊಂಬಿವಿಲಿ ಪೂರ್ವ ಪ್ರದೇಶದ ಗಾಂಧೀನಗರದಲ್ಲಿ ರಸ್ತೆಬದಿಯಲ್ಲಿ ತರಕಾರಿ ವ್ಯಾಪಾರವನ್ನು ನಡೆಸುತ್ತಿದ್ದರು. ಅವರ ಮಗ ಈ ವರ್ಷ ಸಿಎ ಪರೀಕ್ಷೆಯನ್ನು ಬರೆದಿದ್ದ. ಇತ್ತೀಚೆಗೆ ಅದರ ಫಲಿತಾಂಶ ಬಂದಿದೆ. ಎಲ್ಲರಿಗೂ ಗೊತ್ತಿರುವ ಹಾಗೆ ಚಾರ್ಟೆಡ್ ಅಕೌಂಟೆಂಟ್ ಪರೀಕ್ಷೆ ಅತ್ಯಂತ ಕಠಿಣವಾದ ಪರೀಕ್ಷೆ. ಅದನ್ನು ಒಂದೇ ಪ್ರಯತ್ನದಲ್ಲಿ ಪಾಸ್ ಮಾಡುವುದು ಕೂಡ ದೊಡ್ಡ ಸವಾಲಿನ ಕೆಲಸ. ಅದಕ್ಕಾಗಿ ಕೋಚಿಂಗ್ ಸಹಿತ ನಿರಂತರ ಅಧ್ಯಯನ ನಡೆಸಬೇಕಾಗುತ್ತದೆ.

ಹೀಗೆ ಕಠಿಣ ಅಭ್ಯಾಸ ನಡೆಸಿರುವ ಯೋಗೇಶ್ ಎನ್ನುವ ಯುವಕ ಸಿಎ ಫಲಿತಾಂಶ ನೋಡಿ ಬಂದು ತಾಯಿಯನ್ನು ಭೇಟಿಯಾದಾಗ ಆಕೆ ಪಟ್ಟಿರುವ ಸಂಭ್ರಮವನ್ನು ಈ ವಿಡಿಯೋದಲ್ಲಿ ನೋಡಬಹುದು. ಅದನ್ನು ಮಹಾರಾಷ್ಟ್ರದ ಲೋಕೋಪಯೋಗಿ ಸಚಿವ ರವೀಂದ್ರ ಚವಾಣ್ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾಯಿಯ ಆನಂದ ಭಾಷ್ಪ ಮತ್ತು ಮಗನ ಯಶಸ್ಸಿನ ಸಂತೋಷಕ್ಕೆ ಬೆಲೆಕಟ್ಟಲಾದೀತೆ!

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search