• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉತ್ತರಾಖಂಡದ ರೈಲ್ವೆ ಬೋರ್ಡ್ ಗಳಲ್ಲಿ ಸಂಸ್ಕೃತ ಭಾಷೆಯಲ್ಲಿಯೂ ಹೆಸರು ಇರಲಿ!

Tulunadu News Posted On July 16, 2024
0


0
Shares
  • Share On Facebook
  • Tweet It

ಸಂಸ್ಕೃತ ಭಾಷೆ ಉತ್ತರಖಂಡ ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿದೆ. ಹಾಗಿದ್ದ ಮೇಲೆ ಅದಕ್ಕೊಂದು ಗೌರವ, ಸ್ಥಾನಮಾನ ಕೊಡಬೇಕು ತಾನೆ. ಭಾರತೀಯ ಜನತಾ ಪಾರ್ಟಿ 2022 ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಹೊಸ ಮನ್ವಂತರ ಆರಂಭವಾಗಬಹುದು ಎಂಬ ಅಪೇಕ್ಷೆ ಎಲ್ಲರಲ್ಲಿತ್ತು. ಹಾಗೆ ಈ ರೈಲ್ವೆ ನಿಲ್ದಾಣಗಳಲ್ಲಿ ಊರಿನ ಹೆಸರನ್ನು ತೋರಿಸುವ ಸೈನ್ ಬೋರ್ಡ್ ಗಳಿರುತ್ತವಲ್ಲ, ಅಂತಹ ಬೋರ್ಡ್ ಗಳಲ್ಲಿ ಮೂರು ಭಾಷೆಗಳಲ್ಲಿ ಊರಿನ ಹೆಸರನ್ನು ನಮೂದಿಸಲಾಗಿತ್ತು. ಅದರಲ್ಲಿ ಒಂದು ಹಿಂದಿ, ಇನ್ನೊಂದು ಇಂಗ್ಲೀಷ್, ಮತ್ತೊಂದು ಉರ್ದು.

2020 ಫೆಬ್ರವರಿಯಲ್ಲಿ ಡೆಹ್ರಾದೂನ್ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ನಿಲ್ದಾಣವನ್ನು ಅಭಿವೃದ್ಧಿಗೊಳಿಸುವಾಗ ಅದರ ಗುತ್ತಿಗೆ ವಹಿಸಿಕೊಂಡ ಸಂಸ್ಥೆಯಿಂದ ಉರ್ದು ಭಾಷೆಯ ಮೇಲೆ ಸಂಸ್ಕೃತದಲ್ಲಿ ಊರಿನ ಹೆಸರನ್ನು ಬರೆದ ಸ್ಟೀಕರ್ ಅನ್ನು ಪೇಸ್ಟ್ ಮಾಡಲಾಗಿತ್ತು. ಇದರಿಂದ ಸಂಸ್ಕೃತ ಭಾಷೆಗೆ ರಾಜ್ಯದಲ್ಲಿ ವಿಶೇಷ ಸ್ಥಾನಮಾನ ಸಿಕ್ಕಿದಂತೆ ಆಗಿತ್ತು. ಸನಾತನಿಗಳೇ ಹೆಚ್ಚಿನ ನೆಲೆಸಿರುವ, ಸಾಧು ಸಂತರ ನಾಡೆಂದು ಖ್ಯಾತವಾಗಿರುವ ಉತ್ತರಾಖಂಡದಲ್ಲಿ ಸಂಸ್ಕೃತ ಭಾಷೆಯಲ್ಲಿ ಬೋರ್ಡ್ ಇರುವುದು ನಿಜಕ್ಕೂ ಮಾದರಿಯಾಗಿತ್ತು. ಆದರೆ ಈ ಖುಷಿ ತುಂಬಾ ದಿನ ಇರಲಿಲ್ಲ. ಅದಕ್ಕೆ ವಿವಾದ ಅಂಟಿಕೊಂಡಿತ್ತು.

ಬಳಿಕ ತಕ್ಷಣ ಮತ್ತೆ ಸಂಸ್ಕೃತದ ಮೇಲೆ ಉರ್ದು ಭಾಷೆಯಲ್ಲಿ ಬರೆದ ಊರಿನ ಹೆಸರಿನ ಸ್ಟೀಕರ್ ಕಾಣಿಸಿಕೊಂಡಿತ್ತು. ಇದರಿಂದ ಅಲ್ಲಿನ ಸ್ಥಳೀಯ ಮಠಗಳ ಸಾಧು, ಸಂತರಿಗೆ ಬೇಸರವಾಗಿತ್ತು. ಯಾರನ್ನು ಓಲೈಸಲು ಇಂತಹ ಕೆಲಸ ಎಂದು ಪ್ರಶ್ನಿಸಿದ್ದಾರೆ. ಈ ಘಟನೆಗಳು ನಡೆದು ಈಗಾಗಲೇ ನಾಲ್ಕು ವರ್ಷಗಳು ಕಳೆದಿವೆ. ಈಗಲೂ ಆ ಬೋರ್ಡ್ ಗಳಲ್ಲಿ ಹಿಂದಿ, ಇಂಗ್ಲೀಷ್ ಮತ್ತು ಉರ್ದು ಭಾಷೆಯನ್ನು ಮಾತ್ರ ಕಾಣಬಹುದಾಗಿದೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search