• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಂಬಾನಿ ಮಗನ ಮದುವೆಯಲ್ಲಿ ಸುಧಾ ಮೂರ್ತಿ ಧರಿಸಿದ್ದ ಆಭರಣ ಯಾವುದು?

Tulunadu News Posted On July 17, 2024
0


0
Shares
  • Share On Facebook
  • Tweet It

ಮುಖೇಶ್ ಅಂಬಾನಿ ಮಗ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ವಿವಾಹ ಮಹೋತ್ಸವದಲ್ಲಿ ದೇಶ, ವಿದೇಶದ ಗಣ್ಯರು ಭಾಗವಹಿಸಿದ್ದರು. ಬಾಲಿವುಡ್ ತಾರೆಯರು, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು, ರಾಜ್ಯ, ದೇಶ, ವಿದೇಶದ ರಾಜಕೀಯ ಮುಖಂಡರು, ಜಾಗತಿಕ ಉದ್ಯಮಿಗಳು ಹೀಗೆ ಗಣ್ಯಾತಿಗಣ್ಯರು ಅದರಲ್ಲಿ ಉಪಸ್ಥಿತಿಯನ್ನು ತೋರಿಸಿದ್ದರು. ಅಂತಹ ಕಾರ್ಯಕ್ರಮದಲ್ಲಿ ಭಾಗವಹಿಸುವುದೆಂದರೆ ಅನೇಕರಿಗೆ ದೊಡ್ಡ ಹೆಮ್ಮೆಯ ವಿಷಯ. ಒಮ್ಮೆ ಆಹ್ವಾನ ಸಿಕ್ಕಿದರೆ ಯಾರೂ ಅದನ್ನು ಮರೆಯದೇ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಇಂತಹ ಅದ್ದೂರಿ ಮದುವೆಗೆ ಇನ್ಫೊಸಿಸ್ ಫೌಂಡೆಶನ್ ಮುಖ್ಯಸ್ಥೆ, ರಾಜ್ಯಸಭಾ ಸಂಸದೆ ಸುಧಾಮೂರ್ತಿಯವರಿಗೂ ಆಹ್ವಾನ ಇತ್ತು.

ಸಾಮಾನ್ಯವಾಗಿ ಸಿಂಪಲ್ ಉಡುಗೆ, ತೊಡುಗೆಯಲ್ಲಿ ಕಾಣಿಸಿಕೊಳ್ಳುವ ಸುಧಾ ಮೂರ್ತಿಯವರು ಅಂತಹ ವೈಭವೋಪೇತ ಕಾರ್ಯಕ್ರಮದಲ್ಲಿ ಹೇಗೆ ಕಾಣಿಸಿಕೊಳ್ಳುತ್ತಾರೆ ಎಂಬ ಕುತೂಹಲ ಹಲವರಲ್ಲಿ ಇತ್ತು. ಯಾಕೆಂದರೆ ಅಂಬಾನಿ ಮಗನ ಮದುವೆಗೆ ಬಂದ ಗಣ್ಯರು ಯಾವ ರೀತಿಯಲ್ಲಿ ಆಡಂಬರವನ್ನು ಮೈಮೇಲೆ ಹೇರಿಕೊಳ್ಳಬೇಕು ಎಂದು ವಾರಗಟ್ಟಲೆ ಪ್ಲಾನ್ ಮಾಡಿ ಅದನ್ನು ಧರಿಸಿ ಕ್ಯಾಮೆರಾಗಳ ಮುಂದೆ ಮಿಂಚುತ್ತಿದ್ದರೆ, ಸುಧಾಮೂರ್ತಿಯವರು ಮತ್ತೊಮ್ಮೆ ಸರಳತೆಯನ್ನೇ ಮೆರೆದಿದ್ದಾರೆ.

ಆವತ್ತು ಅವರ ಕೊರಳಲ್ಲಿ ಇದ್ದದ್ದು ಕೇವಲ ಮಂಗಳಸೂತ್ರ ಮಾತ್ರ. ಈ ಮೂಲಕ ತುಂಬಿದ ಕೊಡ ತುಳುಕುವುದಿಲ್ಲ ಎನ್ನುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಸಾವಿರಾರು ಕೋಟಿ ರೂಪಾಯಿ ಒಡತಿಯಾದರೂ ಸಿಂಪಲ್ ಆಗಿ ಅಂಬಾನಿ ಮನೆಯ ಮದುವೆಯಲ್ಲಿ ಭಾಗಿಯಾಗಿರುವುದು ಆಕರ್ಷಣೆಗೆ ಕಾರಣವಾಗಿದೆ. ತೆಲುಗು ನಟ ಮಹೇಶ್ ಬಾಬು ಪತ್ನಿ, ನಟಿ ನಮ್ರತಾ ಶಿರೋಡ್ಕರ್ ಅವರು ಸುಧಾ ಮೂರ್ತಿ ಅವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ಸರಳತೆಯೇ ಭೂಷಣ ಎನ್ನುವಂತೆ ಕಾಣಿಸಿಕೊಂಡಿರುವ ಸುಧಾ ಮೂರ್ತಿಯವರ ನಗೆ ಖುಷಿ ನೀಡುತ್ತದೆ.

ಅದ್ದೂರಿ, ಆಡಂಬರ, ಶ್ರೀಮಂತಿಕೆಯ ನಡುವೆ ಸುಧಾ ಮೂರ್ತಿಯವರ ಸರಳತೆ ಮೈಗೂಡಿಸಿಕೊಳ್ಳುವುದು ಅಷ್ಟು ಸುಲಭವಲ್ಲ. ಬಿಲೇನಿಯರ್ ಆಗಿದ್ದರೂ ಮಂಗಳ ಸೂತ್ರದ ಜೊತೆಗೆ ಯಾವುದೇ ಬೆಲೆ ಬಾಳುವ ಒಡವೆಗಳನ್ನು ಧರಿಸಿಲ್ಲ ಎನ್ನುವುದೇ ವಿಶೇಷ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search