• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರೀಲ್ಸ್ ಹುಚ್ಚಾಟಕ್ಕೆ ಯೂಟ್ಯೂಬ್ ಪ್ರಭಾವಿ ಅನ್ವಿ ಬಲಿ!

Tulunadu News Posted On July 18, 2024
0


0
Shares
  • Share On Facebook
  • Tweet It

ಮಳೆಗಾಲದ ಸಂದರ್ಭದಲ್ಲಿ ಜಲಪಾತ, ಚಾರಣಕ್ಕೆ ತೊಡಗುವವರು ಆದಷ್ಟು ಎಚ್ಚರಿಕೆಯನ್ನು ವಹಿಸಬೇಕು, ಇಂತಹ ದಿನಗಳಲ್ಲಿ ಆದಷ್ಟು ಇಂತಹ ಪ್ರದೇಶಗಳಿಗೆ ಭೇಟಿ ಕೊಡುವುದನ್ನು ಕಡಿಮೆ ಮಾಡಬೇಕು ಎಂದು ಎಷ್ಟೇ ಜಾಗೃತಿಯನ್ನು ಮೂಡಿಸಿದರೂ ಅದನ್ನು ಯುವಜನಾಂಗ ಎಷ್ಟು ಗಂಭೀರವಾಗಿ ತೆಗೆದುಕೊಳ್ಳುತ್ತದೆ ಎನ್ನುವುದು ಪ್ರಶ್ನೆ. ಕೆಲವರು ಒಂದು ರೀಲ್ ಗಾಗಿ ತಮ್ಮ ಪ್ರಾಣವನ್ನೇ ಪಣಕ್ಕೆ ಇಡುವುದನ್ನು ನಾವು ನೋಡಬಹುದು. ಕೆಲವರು ಇಂತಹ ರೀಲ್ ಮಾಡಲು ಹೋಗಿ ಪ್ರಾಣ ಕಳೆದುಕೊಳ್ಳುವುದು ಇದೆ. ಅನ್ವಿ ಕಾಮ್ದಾರ್ ಎನ್ನುವ 26 ವರ್ಷದ ಯುವತಿ ಅದಕ್ಕೆ ತಾಜಾ ಉದಾಹರಣೆ. ತನ್ನ ಪ್ರವಾಸದ ಹುಚ್ಚನ್ನು ರೀಲ್ಸ್ ಮೂಲಕ ಹೊರಗೆ ತೋರಿಸುತ್ತಿದ್ದ ಅನ್ವಿ ಕಾಮ್ದಾರ್ ರೀಲ್ ಮಾಡುವ ಸಂದರ್ಭದಲ್ಲಿಯೇ ಕಾಲು ಜಾರಿ ಪ್ರಪಾತಕ್ಕೆ ಬಿದ್ದು ವಿಧಿಯಾಟಕ್ಕೆ ಬಲಿಯಾಗಿದ್ದಾಳೆ.

ಇನ್ಸ್ಟಾಗ್ರಾಮ್ ಇವತ್ತಿನ ದಿನಗಳಲ್ಲಿ ಟ್ರೆಂಡ್ ಆಗಿದೆ. ಅನ್ವಿ ಕಾಮ್ದಾರ್ ಅವರು ಮೂಲತ ಚಾರ್ಟೆಡ್ ಅಕೌಂಟೆಂಟ್ ಆಗಿದ್ದರೂ ತಮ್ಮನ್ನು ಟ್ರಾವೆಲ್ ಡಿಟೆಕ್ಟಿವ್ ಎಂದು ಇನ್ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದರು. ಕುಂಭೆ ಜಲಪಾತಕ್ಕೆ ಜುಲೈ 16 ರಂದು ತಮ್ಮ ಸ್ನೇಹಿತ ಬಳಗದೊಂದಿಗೆ ಹೋಗಿದ್ದ ಆಕೆ ರೀಲ್ ಚಿತ್ರೀಕರಣದ ಮೇಲೆ 300 ಅಡಿ ಆಳದ ಕಮರಿಗೆ ಬಿದ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳೀಯ ಅಧಿಕಾರಿಗಳು, ರಕ್ಷಣಾ ತಂಡ, ಕೋಸ್ಟ್ ಗಾರ್ಡ್ ಪಡೆಗಳೊಂದಿಗೆ ಮಹಾರಾಷ್ಟ್ರ ರಾಜ್ಯ ವಿದ್ಯುತ್ ಮಂಡಳಿಯ ಸಿಬ್ಬಂದಿಯಿಂದ ಹೆಚ್ಚುವರಿ ಸಹಾಯವನ್ನು ಕೋರಲಾಯಿತು. ಆದರೆ ಮಳೆಯ ರಭಸಕ್ಕೆ ಕಲ್ಲುಗಳು ನಿರಂತರವಾಗಿ ಕಂದಕಕ್ಕೆ ಬೀಳುತ್ತಿದ್ದ ಕಾರಣ , ರಕ್ಷಣಾ ಕಾರ್ಯಾಚರಣೆಗೆ ಇನ್ನಷ್ಟು ಅಡಚಣೆಯಾಗಿತ್ತು. ಐದಾರು ಗಂಟೆಗಳ ಕಾರ್ಯಾಚರಣೆಯ ಬಳಿಕ ಅನ್ವಿಯನ್ನು ಹೊರಗೆ ತೆಗೆಯಲಾಯಿತು. ಗಂಭೀರ ಗಾಯಗೊಂಡಿದ್ದ ಅನ್ವಿಯನ್ನು ಉಳಿಸಲಾಗಲಿಲ್ಲ.

ಮುಂಬೈನಲ್ಲಿ ನೆಲೆಸಿರುವ ಅನ್ವಿ ಕಾಮ್ದಾರ್ ಗೆ ಇನ್ಸ್ಟಾಗ್ರಾಮ್ ನಲ್ಲಿ ಎರಡು ಲಕ್ಷ 54 ಸಾವಿರಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿದ್ದಾರೆ. ಅನ್ವಿ ಇನ್ಸ್ಟಾಗ್ರಾಮ್ ನಲ್ಲಿ ಸಕ್ರಿಯವಾಗಿದ್ದು, ಎರಡು ದಿನಗಳ ಹಿಂದಷ್ಟೇ ಒಂದು ಪೋಸ್ಟ್ ಹಂಚಿಕೊಂಡಿದ್ದರು. ಅದರಲ್ಲಿ ಮಳೆಗಾಲದಲ್ಲಿ ಜನರು ಭೇಟಿಕೊಡಬಹುದಾದ ಐದು ಸ್ಥಳಗಳ ಪಟ್ಟಿಯನ್ನು ನೀಡಿದ್ದರು.

ಕೆಜಿ ಪ್ಲಾಸ್ಟಿಕ್ ಕೊಡಿ ಕೆಜಿ ಸಕ್ಕರೆ ಉಚಿತವಾಗಿ ಪಡೆಯಿರಿ!

ಪ್ಲಾಸ್ಟಿಕ್ ನಷ್ಟು ಪ್ರಕೃತಿ ಮಾರಕ ಮತ್ತೊಂದಿಲ್ಲ. ಏಕಬಳಕೆಯ ಪ್ಲಾಸ್ಟಿಕ್ ಎಷ್ಟು ಕಡಿಮೆ ಬಳಸುತ್ತಿರೋ ಅಷ್ಟು ನಾವು ಪ್ರಕೃತಿಯನ್ನು ಉಳಿಸುತ್ತೇವೆ ಎಂದೇ ಲೆಕ್ಕ. ಆ ನಿಟ್ಟಿನಲ್ಲಿ ಕರ್ನಾಟಕದ ವಡಗೇರಾ ತಾಲೂಕು ಪಂಚಾಯತ್ ಅಧಿಕಾರಿಯು ಈ ಘೋಷಣೆಯನ್ನು ಮಾಡಿದ್ದಾರೆ. ಇದರಿಂದ ಹಳ್ಳಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನರು ತಮ್ಮ ಮನೆಗಳ ಮತ್ತು ಆಸುಪಾಸಿನ ಪ್ಲಾಸ್ಟಿಕ್ ತ್ಯಾಜ್ಯವನ್ನು ಒಟ್ಟು ಮಾಡಿ ಪಂಚಾಯತ್ ಕಚೇರಿಗೆ ತಂದು ಕೊಡುತ್ತಿದ್ದಾರೆ. ಇದರಿಂದ ಒಂದೇ ದಿನ 25 ಕೆಜಿ ಪ್ಲಾಸ್ಟಿಕ್ ತ್ಯಾಜ್ಯ ಒಟ್ಟಾಗಿದೆ.
ಈಗಾಗಲೇ ತಾಲೂಕು ಪಂಚಾಯತ್ ಅಭಿವೃದ್ಧಿ ಅಧಿಕಾರಿಯು ಈಗಾಗಲೇ ಸಕ್ಕರೆಯನ್ನು ಗೋಣಿಯಲ್ಲಿ ತಂದು ಸಾಕಷ್ಟು ಸಂಗ್ರಹಿಸಿಕೊಂಡಿದ್ದಾರೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 5
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ

  • Privacy Policy
  • Contact
© Tulunadu Infomedia.

Press enter/return to begin your search