• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಟ್ಟಾರಣ್ಯದಲ್ಲಿ ಪತ್ನಿಯನ್ನು ಮರಕ್ಕೆ ಕಟ್ಟಿ ಹಾಕಿ ಓಡಿಹೋದನಾ ಪತಿ!

Tulunadu News Posted On July 30, 2024
0


0
Shares
  • Share On Facebook
  • Tweet It

ಅದು ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಅರಣ್ಯ ಪ್ರದೇಶ. ಅಲ್ಲಿನ ಒಂದು ಮರಕ್ಕೆ ಕಬ್ಬಿಣದ ಸರಪಳಿಯಲ್ಲಿ ಕಟ್ಟಿದ ಮಹಿಳೆ ಪತ್ತೆಯಾಗಿದ್ದಾರೆ. ಆಕೆಯ ಬಳಿ ಅಮೇರಿಕಾದ ಪಾಸ್ ಪೋರ್ಟ್ ಪ್ರತಿ ಸಿಕ್ಕಿದೆ. ಅದರೊಂದಿಗೆ ತಮಿಳುನಾಡಿನ ಆಧಾರ್ ಕಾರ್ಡ್ ಕೂಡ ದೊರಕಿದೆ. ಅದರಲ್ಲಿ ಮಹಿಳೆಯ ಹೆಸರು ಲಲಿತಾ ಕಾಯಿ ಎಂದು ಬರೆಯಲಾಗಿದೆ. ಅವಳು ಅಲ್ಲಿಗೆ ಹೇಗೆ ಬಂದಳು, ಯಾರಾದರೂ ಬಲವಂತವಾಗಿ ತಂದಿದ್ರೆ ಅದು ಯಾರು? ಅವಳನ್ನು ಯಾಕೆ ಕಟ್ಟಿ ಹಾಕಲಾಗಿತ್ತು? ಕೊನೆಗೆ ಹೊರ ಪ್ರಪಂಚಕ್ಕೆ ಅವಳ ಇರುವಿಕೆ ಹೇಗೆ ಗೊತ್ತಾಯಿತು ಎನ್ನುವುದೇ ಈಗ ಇರುವ ವಿಷಯ.

ಮುಂಬೈ ನಗರದಿಂದ ಸುಮಾರು 450 ಕಿ.ಮೀ ದೂರದಲ್ಲಿರುವ ಸಿಂಧದುರ್ಗ ಜಿಲ್ಲೆಯ ಸೊನುರಲಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಳೆದ ಶನಿವಾರ ಹೆಂಗಸೊಬ್ಬಳ ಚೀರಾಟ ಕೇಳಿಸಿದೆ. ಗ್ರಾಮಸ್ಥರಲ್ಲಿ ಕೆಲವರು ಧೈರ್ಯ ಮಾಡಿ ಕಾಡೊಳಗೆ ಹೋಗಿದ್ದಾರೆ. ಅಲ್ಲಿ ಕಬ್ಬಿಣದ ಸರಪಳಿಯಲ್ಲಿ ಬಂಧಿಯಾಗಿ ಕುಳಿತಿದ್ದ ಮಹಿಳೆ ಕಂಡುಬಂದಿದ್ದಾಳೆ. ಕೂಡಲೇ ಊರಿನವರು ಸ್ಥಳೀಯ ಠಾಣೆ ಹಾಗೂ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಎಷ್ಟು ದಿನಗಳಿಂದ ಅವಳು ಅಲ್ಲಿ ಇದ್ದಳು ಎನ್ನುವುದು ಸದ್ಯಕ್ಕೆ ತಿಳಿಯುತ್ತಿಲ್ಲ. ಯಾಕೆಂದರೆ ಲಲಿತಾ ಕಾಯಿ ಮಾತನಾಡದ ಸ್ಥಿತಿಯಲ್ಲಿದ್ದಾರೆ. ಆಹಾರ ಇಲ್ಲದೆ ಬಳಲಿ ಬೆಂಡಾಗಿದ್ದಾಳೆ. ನಿತ್ರಾಣಗೊಂಡು ಅರೆಜೀವದ ಸ್ಥಿತಿಗೆ ತಲುಪಿದ್ದಾಳೆ. ಅರಣ್ಯದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಮಳೆಯ ನೀರಿನಿಂದ ತೊಯ್ದಿರುವ ಆಕೆಯನ್ನು ಮೊದಲು ಸಾವಂತವಾಡಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಸಿಂಧುದುರ್ಗದ ಓರೋಸ್ ಆಸ್ಪತ್ರೆಗೆ ದಾಖಲಾಗಿತ್ತು. ಮಹಿಳೆಯ ಮಾನಸಿಕ ಸ್ಥಿತಿ ಕೂಡ ಗಂಭೀರವಾಗಿರುವುದರಿಂದ ಪ್ರಸ್ತುತ ಗೋವಾ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಸೇರಿಸಲಾಗಿದೆ.

ಲಲಿತಾ ಕಾಯಿ ಮೂಲತ: ಅಮೇರಿಕಾ ನಿವಾಸಿಯಾಗಿದ್ದು, ಕಳೆದ 10 ವರ್ಷಗಳಿಂದ ತಮಿಳುನಾಡಿನಲ್ಲಿ ವಾಸವಿದ್ದರು. ಪತಿ ತಮಿಳುನಾಡಿನವರಾಗಿದ್ದು, ಸದ್ಯ ಈಕೆಯ ಪಾಸ್ ಪೋರ್ಟ್ ಅವಧಿ ಮುಕ್ತಾಯಗೊಂಡಿದೆ. ಈಕೆ ಸಂಪೂರ್ಣವಾಗಿ ಗುಣಮುಖರಾದ ನಂತರ ವಿಷಯ ತಿಳಿಯಬೇಕಿದೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search