• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಕೇರಳದ ಕೊಟ್ಟಿಗೆಯಲ್ಲಿದ್ದ ಹಸು ಕರ್ನಾಟಕದವರ ಜೀವ ಉಳಿಸಿತು!

Tulunadu News Posted On July 31, 2024
0


0
Shares
  • Share On Facebook
  • Tweet It

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಪ್ರಕೃತಿ ವಿಕೋಪಗಳ ಹಿಂದೆ ಅನೇಕ ಹೃದಯವಿದ್ರಾವಕ ಕಥೆಗಳಿವೆ. ಅದರಲ್ಲಿ ಒಂದು ಕಥೆಯನ್ನು ನೀವು ಓದಲೇಬೇಕು. ವಯನಾಡಿನ ಭೂಕುಸಿತದಿಂದ ಇಲ್ಲಿಯವರೆಗೂ ಸುಮಾರು 180 ರಷ್ಟು ಜನರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ನೂರಾರು ಮಂದಿ ಕಣ್ಮರೆಯಾಗಿದ್ದಾರೆ. ಎಷ್ಟೋ ಜನ ಈ ದಾರುಣ ಘಟನೆಯಲ್ಲಿ ತಮ್ಮವರನ್ನು ಕಳೆದುಕೊಂಡಿದ್ದಾರೆ.
ಈ ಭೂಕುಸಿತದ ದುರ್ಘಟನೆಯಲ್ಲಿಯೂ ಒಂದು ಸಮಾಧಾನಕರ ಸಂಗತಿ ನಡೆದಿದೆ.

ಕೇರಳದ ವಯನಾಡಿನಲ್ಲಿ ಚೂರಲ್ ಮಲಾ ಗುಡ್ಡ ಇದೆ. ಅಲ್ಲಿ ಕರ್ನಾಟಕದ ಚಾಮರಾಜನಗರ ಮೂಲದ ವಿನೋದ್ ಕುಟುಂಬ ವಾಸವಿತ್ತು. ಜುಲೈ 30 ರ ಮಧ್ಯರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸು ಪದೇ ಪದೇ ಚೀರಾಡುತ್ತಾ ಇತ್ತು. ಯಾಕೆ ಹಸು ಹೀಗೆ ವಿಚಿತ್ರವಾಗಿ ಆಡುತ್ತಿದೆ ಎಂದು ನೋಡಲು ವಿನೋದ್ ಹೊರಗೆ ಬಂದಿದ್ದಾರೆ. ಮಳೆಯ ನಡುವೆ ಏನೋ ಅಪಾಯದ ಮುನ್ಸೂಚನೆ ಅರಿತ ವಿನೋದ್ ಮನೆಯಲ್ಲಿ ಮಲಗಿದ್ದವರನ್ನು ತಕ್ಷಣ ಎಬ್ಬಿಸಿದ್ದಾರೆ. ಎಲ್ಲರನ್ನು ಗುಡ್ಡದ ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ.

ಅವರು ಇದೇ ಸಮಯದಲ್ಲಿ ಮೆಪಾಡಿ ಎನ್ನುವಂತಹ ಇನ್ನೊಂದು ಪ್ರದೇಶದಲ್ಲಿದ್ದ ಎರಡು ತಿಂಗಳ ಹಸಿ ಬಾಣಂತಿ ಪತ್ನಿ ಪ್ರವಿದಾಗೂ ಮಾಹಿತಿ ನೀಡಿ, ಪತ್ನಿ, ಹಸುಳೆ, ಅತ್ತೆಯನ್ನು ಕೂಡ ಸುರಕ್ಷಿತ ಸ್ಥಳ ತಲುಪುವಂತೆ ಮಾಡಿದ್ದಾರೆ. ಇದೆಲ್ಲಾ ಆದ ಕೆಲವೇ ಗಂಟೆಗಳಲ್ಲಿ ಅವರಿದ್ದ ಮನೆ, ವಾಹನ ನೀರಿಗೆ ಕೊಚ್ಚಿಕೊಂಡು ಹೋಗಿದೆ. ಮರುದಿನ ವಿನೋದ್ ಅವರ ಇಡೀ ಕುಟುಂಬ ಸುರಕ್ಷಿತವಾಗಿ ಚಾಮರಾಜನಗರವನ್ನು ತಲುಪಿದೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:

  • Privacy Policy
  • Contact
© Tulunadu Infomedia.

Press enter/return to begin your search