• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರಕ್ತದಾನ ಮಾಡಿ ನಾಯಿಯ ಜೀವ ಉಳಿಸಿದ ಘಟನೆ!

Tulunadu News Posted On August 1, 2024


  • Share On Facebook
  • Tweet It

ಮನುಷ್ಯರು ರಕ್ತದಾನ ಮಾಡುವುದನ್ನು ಕೇಳಿದ್ದೇವೆ. ಆದರೆ ಪ್ರಾಣಿಗಳೂ ರಕ್ತದಾನ ಮಾಡುತ್ತವೆಯಾ? ದಾನಗಳಲ್ಲಿ ರಕ್ತದಾನ ಶ್ರೇಷ್ಟದಾನವಾಗಿದ್ದು, ಪ್ರತಿಯೊಬ್ಬರು 60 ವರ್ಷ ಪ್ರಾಯದ ಒಳಗೆ ರಕ್ತದಾನ ಮಾಡಬಹುದು. ತುರ್ತು ಪರಿಸ್ಥಿತಿಯಲ್ಲಿ ರಕ್ತ ಸಿಗದೇ ಒದ್ದಾಡಿ ಸತ್ತವರ ಕಥೆಯನ್ನು ನೆನೆಯುವಾಗ ರಕ್ತದ ಮಹತ್ವ ತಿಳಿಯುತ್ತದೆ. ಹಾಗಿರುವಾಗ ರಕ್ತದಾನದ ಬಗ್ಗೆ ಜಾಗೃತಿಯನ್ನು ಪ್ರತಿಯೊಬ್ಬರು ಹೊಂದಿರಬೇಕು. ಮನುಷ್ಯರು ರಕ್ತದಾನ ಶಿಬಿರವನ್ನು ಆಯೋಜಿಸುವುದನ್ನು ನಾವು ನೋಡಿದ್ದೇವೆ, ಕೇಳಿದ್ದೇವೆ. ಆದರೆ ಶ್ವಾನವೊಂದು ಇನ್ನೊಂದು ಶ್ವಾನಕ್ಕೆ ರಕ್ತದಾನ ಮಾಡಿರುವ ಕಥೆ ನಿಜಕ್ಕೂ ರೋಚಕವಾಗಿರುವಂತದ್ದು. ಇಂತಹ ಅಪರೂಪದಲ್ಲಿ ಅಪರೂಪ ಘಟನೆ ನಡೆದಿರುವುದು ಕೊಪ್ಪಳದಲ್ಲಿ. ಸಾಕಿದ ನಾಯಿಯೊಂದು ಸಾವು ಬದುಕಿನ ಹೋರಾಟದಲ್ಲಿದ್ದ ಮತ್ತೊಂದು ನಾಯಿಗೆ ರಕ್ತದಾನ ಮಾಡುವ ಮೂಲಕ ಗಮನ ಸೆಳೆದಿದೆ.
ಕೊಪ್ಪಳದ ಪಶು ಚಿಕಿತ್ಸಾಲಯದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ, ಹಿಮೋಗ್ಲೋಬಿನ್ ಶಕ್ತಿ ಕುಂದಿದ್ದ 9 ವರ್ಷದ ಲ್ಯಾಬರ್ ಡಾಗ್ ನಾಯಿಗೆ ರಕ್ತದ ಅವಶ್ಯಕತೆ ಉಂಟಾಗಿತ್ತು. ಆ ನಾಯಿಗೆ ಬೇರೆ ನಾಯಿಯ ರಕ್ತ ನೀಡಬೇಕಿತ್ತು. ವೈದ್ಯರು ನಗರದ ಮೂರು ನಾಯಿಗಳ ಮಾಲೀಕರನ್ನು ಸಂಪರ್ಕಿಸಿ ನಾಯಿಗಳ ರಕ್ತದ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಿದರು.
ಪ್ರೊ. ಬಸವರಾಜ್ ಪೂಜಾರ್ ಅವರ ಮೂರು ವರ್ಷದ ಡಾಬರ್ ಮ್ಯಾನ್ ತಳಿಯ ರಕ್ತವು ಹೊಂದಿಕೆಯಾಗಿದ್ದು, ವೈದ್ಯಕೀಯ ನಿಯಮಾನುಸಾರ ಇದರ 300 ಎಂಎಲ್ ರಕ್ತವನ್ನು ಪರೀಕ್ಷಿಸಿದ ಬಳಿಕ ಕುತ್ತಿಗೆಯ ಭಾಗದಿಂದ ರಕ್ತ ಪಡೆದು ದೈಹಿಕವಾಗಿ ನಿತ್ರಾಣವಾಗಿದ್ದ ಲ್ಯಾಬರ್ ಡಾಗ್ ಗೆ ನೀಡಲಾಗಿದೆ.
ರಕ್ತ ಪೂರೈಕೆಯಾಗುವ ಪೈಪನ್ನು ಹಾಕಿಕೊಂಡಿರುವ ನಾಯಿ ಆಸ್ಪತ್ರೆಯ ಬೆಡ್ ಮೇಲೆ ಮಲಗಿರುವ ಫೋಟೋ ನೋಡುವಾಗ ನಿಜಕ್ಕೂ ಪಾಪ ಎನಿಸುತ್ತದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search