• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹೆಣ್ಣಿನ ವಿಷಯದಲ್ಲಿ ಇರಾಕ್ ಈ ಲೆವೆಲ್ಲಿಗೆ ಇಳಿಯಬಾರದಿತ್ತು!

Tulunadu News Posted On August 10, 2024
0


0
Shares
  • Share On Facebook
  • Tweet It

ಇರಾಕ್ ಸಂಸತ್ತು ತೆಗೆದುಕೊಂಡಿರುವ ಈ ನಿರ್ಧಾರ ನಿಜಕ್ಕೂ ಸ್ವಸ್ಥ ಸಮಾಜಕ್ಕೆ ಹೇಳಿ ಮಾಡಿಸಿದ್ದಲ್ಲ. ಅಲ್ಲಿ ಹೆಣ್ಣು ಮಕ್ಕಳ ಮದುವೆಯ ವಯಸ್ಸನ್ನು ನೇರವಾಗಿ ಒಂಭತ್ತು ವರ್ಷಕ್ಕೆ ಇಳಿಸುವ ನಿರ್ಧಾರಕ್ಕೆ ಜನಪ್ರತಿನಿಧಿಗಳು ಬಂದಿದ್ದಾರೆ. ಇದಕ್ಕೆ ಸಂಬಂಧಿಸಿದ ಮಸೂದೆಯನ್ನು ಅಲ್ಲಿನ ಸಂಸತ್ತಿನಲ್ಲಿ ಮಂಡಿಸಲಾಗಿದೆ. ಒಂದು ವೇಳೆ ಆ ಮಸೂದೆಯನ್ನು ಸಂಸತ್ತು ಅಂಗೀಕರಿಸಿದರೆ 9 ವರ್ಷದ ಹೆಣ್ಣು ಮಕ್ಕಳ ವಿವಾಹವನ್ನು ಅಲ್ಲಿ ಮಾನ್ಯ ಎಂದು ಪರಿಗಣಿಸಲಾಗುತ್ತದೆ. ಇರಾಕ್ ನಲ್ಲಿ ಮಹಿಳೆಯರು ಮತ್ತು ಅನೇಕ ಮಾನವ ಹಕ್ಕುಗಳ ಸಂಘಟನೆಗಳು ಈ ಮಸೂದೆಯನ್ನು ವಿರೋಧಿಸುತ್ತಿವೆ.

ಈ ಮಸೂದೆಯಲ್ಲಿ ಹೆಣ್ಣು ಮಕ್ಕಳ ವಯಸ್ಸಿನ ಬಗ್ಗೆ ಮಾತ್ರ ಅಂಶಗಳಿಲ್ಲ. ಈ ಮಸೂದೆ ಅಂಗೀಕಾರವಾದರೆ 9 ವರ್ಷ ವಯಸ್ಸಿನ ಹುಡುಗಿಯರು ಮತ್ತು 15 ವರ್ಷ ವಯಸ್ಸಿನ ಹುಡುಗರನ್ನು ಮದುವೆಯಾಗಲು ಕಾನೂನಾತ್ಮಕವಾಗಿ ಅವಕಾಶ ನೀಡಿದಂತಾಗುತ್ತದೆ. ಇದು ಬಾಲ್ಯ ವಿವಾಹ ಮತ್ತು ಶೋಷಣೆಯನ್ನು ನಿಶ್ಚಿತವಾಗಿ ಹೆಚ್ಚಿಸುತ್ತದೆ. ಪ್ರಸ್ತುತ ಇರಾಕ್ ದೇಶದಲ್ಲಿ ವಧುವಿನ ಕನಿಷ್ಟ ವಯೋಮಿತಿ 18 ವರ್ಷಕ್ಕೆ ನಿಗದಿಯಾಗಿದೆ. ಭಾರತದಲ್ಲಿಯೂ ವಧುವಿನ ಕನಿಷ್ಟ ವಯೋಮಿತಿ 18. ವರನ ಕನಿಷ್ಟ ವಯೋಮಿತಿ 21 ವರ್ಷಕ್ಕೆ ನಿಗದಿಯಾಗಿದೆ. ಆದರೆ ಮುಸ್ಲಿಂ ಬಾಹುಳ್ಯದ ದೇಶವಾದ ಇರಾಕ್ ತನ್ನ ಕಾನೂನು ಬದಲಿಸಲು ಮುಂದಾಗಿರುವುದು ಅಲ್ಲಿನ ಪ್ರಜ್ಞಾವಂತರನ್ನು ಕೆರಳಿಸಿದೆ.
ಜೊತೆಯಲ್ಲಿಯೇ ಇರಾಕ್ ದೇಶದಲ್ಲಿ ವೈವಾಹಿಕ ಹಾಗೂ ಕೌಟುಂಬಿಕ ವಿಚಾರ ಸೇರಿದಂತೆ ವೈಯಕ್ತಿಕ ವ್ಯಾಜ್ಯಗಳನ್ನು ಪರಿಹರಿಸುವ ಅಧಿಕಾರವನ್ನು ಇಸ್ಲಾಮಿಕ್ ಧಾರ್ಮಿಕ
ಪ್ರಾಧಿಕಾರಗಳು ಅಥವಾ ಸಾಮಾನ್ಯ ನ್ಯಾಯಾಲಯ ಎರಡಕ್ಕೂ ನೀಡಲು ಅಲ್ಲಿನ ಸರಕಾರ ಮುಂದಾಗಿದೆ. ಒಂದು ವೇಳೆ ಈ ಕಾನೂನು ಜಾರಿಯಾದರೆ ಆಸ್ತಿ, ವಿಚ್ಚೇದನ, ಮಕ್ಕಳ ಹೊಣೆಗಾರಿಕೆ ವಿಚಾರದಲ್ಲಿ ಮಹಿಳೆಯರಿಗೆ ಅನ್ಯಾಯವಾಗುವ ಕೂಗು ಎದ್ದಿದೆ.

ಇದರಿಂದ ಮುಂದಿನ ದಿನಗಳಲ್ಲಿ ಮಕ್ಕಳನ್ನು ದುರ್ಬಳಕೆ ಮಾಡಿಕೊಳ್ಳುವ, ಬಾಲ್ಯ ವಿವಾಹ ಹೆಚ್ಚಾಗುವ ಸಾಧ್ಯತೆಗಳಿವೆ ಎಂಬ ಆತಂಕ ಜನರಿಂದ ವ್ಯಕ್ತವಾಗಿದೆ. ಮಹಿಳಾ ಹಕ್ಕುಗಳು ಹಾಗೂ ಲಿಂಗ ಸಮಾನತೆಗೆ ನಡೆಯುತ್ತಿರುವ ಹೋರಾಟಕ್ಕೆ ಭಾರೀ ಹಿನ್ನಡೆ ಆಗಲಿದೆ ಎಂಬ ಆಕ್ರೋಶದ ಕೂಗು ಕೇಳಿ ಬಂದಿದೆ.

ಇಸ್ಲಾಮಿಕ್ ಷರಿಯಾ ಕಾನೂನಿಗೆ ಪೂರಕ ಎಂಬಂತೆ ರಚಿತವಾಗುತ್ತಿರುವ ಈ ಹೊಸ ಕಾನೂನಿನ ವಿರುದ್ಧ ಇರಾಕ್ ನ ಮಾನವ ಸಂಘಟನೆಗಳು, ಮಹಿಳಾ ಸಂಘಟನೆಗಳು ಸಿಡಿದೆದ್ದಿವೆ. ಬಾಲ್ಯ ವಿವಾಹಕ್ಕೆ ಪ್ರೋತ್ಸಾಹ ನೀಡುವುದರಿಂದ ಗರ್ಭಪಾತ, ಬಾಲ ಗರ್ಭಧಾರಣೆ, ಗರ್ಭಿಣಿಯರ ಸಾವು ಹಾಗೂ ಕೌಟುಂಬಿಕ ದೌರ್ಜನ್ಯಗಳು ಹೆಚ್ಚಳ ಆಗುತ್ತವೆ ಎನ್ನುವುದು ನಿಶ್ಚಿತ. ಯುನಿಸೆಫ್ ನ ಪ್ರಕಾರ ಇರಾಕ್ ದೇಶದಲ್ಲಿ ಈಗಾಗಲೇ ಶೇ 28 ರಷ್ಟು ಬಾಲಕಿಯರು 18 ವರ್ಷ ತುಂಬುವ ಮುನ್ನವೇ ವಿವಾಹ ಬಂಧನಕ್ಕೆ ಒಳಗಾಗುತ್ತಿದ್ದಾರೆ. ಒಂದು ವೇಳೆ ಈ ಕಾನೂನು ಜಾರಿಗೆ ಬಂದರೆ ಇರಾಕ್ ದೇಶದ ಪರಸ್ಥಿತಿಯೇ ಬದಲಾಗಲಿದೆ.

0
Shares
  • Share On Facebook
  • Tweet It




Trending Now
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
  • Popular Posts

    • 1
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 2
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 3
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 4
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • 5
      ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!

  • Privacy Policy
  • Contact
© Tulunadu Infomedia.

Press enter/return to begin your search