• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಚೀನಾದ ಬಾಲಕಿಯಿಂದ ಬೀಜಿಂಗ್ ನಲ್ಲಿ ಭರತನಾಟ್ಯ ಆರಂಗೇಟ್ರಂ!

Tulunadu News Posted On August 13, 2024


  • Share On Facebook
  • Tweet It

ಕೇಳಿದ್ರೆ ಆಶ್ಚರ್ಯವಾಗಬಹುದು. ಹೇಳಿ, ಕೇಳಿ ಭರತನಾಟ್ಯ ಭಾರತದ ಪ್ರಾಚೀನ ರಂಗಕಲೆ. ಅನೇಕ ನೃತ್ಯಪ್ರಿಯರು ಭರತನಾಟ್ಯವನ್ನು ಶಾಸ್ತ್ರೋಕ್ತವಾಗಿ ಕಲಿತು, ಕಲಿಸಿದ ಗುರುಗಳ ಸಮ್ಮುಖದಲ್ಲಿ ಅರಂಗೇಟ್ರಂ ಮಾಡುವುದು ನಡೆದುಕೊಂಡು ಬಂದ ಸಂಪ್ರದಾಯ. ಇದು ಭಾರತದಲ್ಲಿ ಎಷ್ಟೋ ದಶಕಗಳಿಂದ ನಡೆದುಕೊಂಡು ಬರುತ್ತಿರುವ ಸಂಸ್ಕೃತಿ. ಈಗ ನಮ್ಮ ಭರತನಾಟ್ಯಂ ನೆರೆಯ ಚೀನಾದಲ್ಲಿಯೂ ಜನಪ್ರಿಯತೆಯನ್ನು ಪಡೆದುಕೊಂಡು ಬರುತ್ತಿದೆ.

13 ವರ್ಷದ ಚೀನಾ ಬಾಲಕಿಯೊಬ್ಬರು ಚೀನಾದಲ್ಲಿ ಭರತನಾಟ್ಯ ಅರಂಗೇಟ್ರಂ ಪ್ರದರ್ಶನ ನೀಡುವ ಮೂಲಕ ಇತಿಹಾಸ ನಿರ್ಮಿಸಿದ್ದಾಳೆ. ಆಕೆಯ ಹೆಸರು ಲೀ ಮಝಿ. ಇದು ಚೀನಾದಲ್ಲಿ ಮೊದಲ ಬಾರಿಗೆ ನಡೆದ ಅರಂಗೇಟ್ರಂ ಭರತನಾಟ್ಯ ಪ್ರದರ್ಶನವಾಗಿತ್ತು. ಲೀ ಚೀನಾದಲ್ಲಿಯೇ ಸಂಪೂರ್ಣ ತರಬೇತಿ ಪಡೆದ ವಿದ್ಯಾರ್ಥಿನಿಯೊಬ್ಬರು ಚೀನಾದಲ್ಲಿ ನೀಡಿದ ಮೊದಲ ಪ್ರದರ್ಶನದ ಬಗ್ಗೆ ಭಾರತೀಯ ರಾಯಭಾರ ಕಚೇರಿಯ ಸಂಸ್ಕೃತಿ ವಿಭಾಗದ ಉಸ್ತುವಾರಿ ವಹಿಸಿರುವ ಕಾರ್ಯದರ್ಶಿ ಟಿ ಎಸ್ ವಿವೇಕಾನಂದ್ ಹೇಳಿದರು.

ಭರತನಾಟ್ಯ ಪರಂಪರೆಯ ಇತಿಹಾಸದಲ್ಲಿ ಇದೊಂದು ಹೆಗ್ಗುರುತಾಗಿದೆ ಎಂದು ಲೀ ಅವರಿಗೆ ಭರತನಾಟ್ಯ ತರಬೇತಿ ನೀಡಿದ ಖ್ಯಾತ ಭರತನಾಟ್ಯ ಕಲಾವಿದೆ ಜಿನ್ ಶಾನ್ ಹೇಳಿದ್ದಾರೆ. ಭಾರತದ ರಾಯಭಾರಿ ಪ್ರದೀಪ್ ರಾವತ್ ಅವರ ಪತ್ನಿ ಶ್ರುತಿ ರಾವತ್ ಅವರು ಲೀ ಅವರ ಅರಂಗೇಟ್ರಂನಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಲೀಲಾ ಸ್ಯಾಮ್ಸನ್ ಜೊತೆಗೆ ಚೆನೈನಿಂದ ಆಗಮಿಸಿದ್ದ ಸಂಗೀತಗಾರರ ತಂಡವು ಶಾಸ್ತ್ರೀಯ ಸಂಗೀತ ಪ್ರದರ್ಶನ ನೀಡಿತು. ಈ ತಿಂಗಳ ಅಂತ್ಯದಲ್ಲಿ ಚೆನೈನಲ್ಲೂ ಲೀ ಭರತನಾಟ್ಯ ಪ್ರದರ್ಶನ ನೀಡಲಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search