• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಇಲ್ಲಿಲ್ಲ ಸ್ಥಾನ: ಇಂಗ್ಲೆಂಡಿನಲ್ಲಿ 5 ವಿಕೆಟ್ ಕಬಳಿಸಿ ರೈಸಿಂಗ್ ಚಹಲ್!

Tulunadu News Posted On August 15, 2024


  • Share On Facebook
  • Tweet It

ಟೀಮ್ ಭಾರತದ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಅವರಿಗೆ ಇತ್ತೀಚೆಗೆ ನಡೆದ ಶ್ರೀಲಂಕಾ ವಿರುದ್ಧದ ಸರಣಿಯಿಂದ ಕೈ ಬಿಡಲಾಗಿತ್ತು. ಮತ್ತೊಂದೆಡೆ ದುಲೀಪ್ ಟ್ರೋಪಿಗೆ ಆಯ್ಕೆ ಮಾಡಲಾದ ನಾಲ್ಕು ತಂಡಗಳಲ್ಲಿಯೂ ಅವರಿಗೆ ಸ್ಥಾನ ನೀಡಲಾಗಿಲ್ಲ. ಇದರಿಂದ ಯುಜ್ವೇಂದ್ರ ಚಹಲ್ ಇಂಗ್ಲೆಂಡಿಗೆ ಸವಾರಿ ಬೆಳೆಸಿದ್ದಾರೆ.

ಅಲ್ಲಿ ನಡೆಯುತ್ತಿರುವ ಕೌಂಟಿ ಕ್ರಿಕೆಟಿನಲ್ಲಿ ನಾರ್ಥಾಂಪ್ಟನ್ ಶೈರ್ ಪರ ಅವರು ಆಡುತ್ತಿದ್ದಾರೆ. ಇದು ಅವರ ಕ್ರಿಕೆಟ್ ಜೀವನದ ಮೊದಲ ಕೌಂಟಿ ಪಂದ್ಯವೂ ಆಗಿದೆ. ಅಲ್ಲಿ ಚೊಚ್ಚಲ ಪಂದ್ಯದಲ್ಲಿ 14 ರನ್ನಿಗೆ 5 ವಿಕೆಟ್ ಕಿತ್ತು ಮಿಂಚಿದ್ದಾರೆ. ಈ ಮೂಲಕ ಭಾರತೀಯ ಕ್ರಿಕೆಟ್ ಮಂಡಳಿಯ ಆಯ್ಕೆದಾರರಿಗೆ ತಮ್ಮಲ್ಲಿನ ಸಾಮರ್ತ್ಯದ ಸಂದೇಶ ರವಾನಿಸಿದ್ದಾರೆ.

ಕ್ಯಾಂಟರ್ಬರಿಯ ಸೇಂಟ್ ಲಾರೆನ್ಸ್ ಗ್ರೌಂಡ್ ನಲ್ಲಿ ನಡೆದ ಪಂದ್ಯದಲ್ಲಿ ಕೆಂಟ್ ಹಾಗೂ ನಾರ್ಥಾಂಪ್ಟನ್ ಶೈರ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಂಟ್ ತಂಡ ಬ್ಯಾಟಿಂಗ್ ಆಯ್ದುಕೊಂಡಿತ್ತು. ಇಲ್ಲಿ ಬೌಲಿಂಗ್ ಮಾಡಲು ಚಹಲ್ ಮುಂದಾಗುತ್ತಿದ್ದಂತೆ ಕೆಂಟ್ ತಂಡ ತತ್ತರಿಸಿ ಹೋಗಿದೆ. ಚಹಲ್ ಎಸೆದ ಹತ್ತು ಓವರ್ ಗಳಲ್ಲಿ 5 ಮೇಡನ್ ಓವರಗಳಾಗಿದ್ದು ಮಾತ್ರವಲ್ಲ, ಉಳಿದ ಐದು ಓವರ್ ಗಳಲ್ಲಿ ಐದು ವಿಕೆಟು ಕಬಳಿಸಲು ಅವರು ಬಿಟ್ಟುಕೊಟ್ಟಿದ್ದು 14 ರನ್ ಮಾತ್ರ. ಒಟ್ಟಾರೆ ಚಹಲ್ ಕೈಚಳಕದಿಂದ ಕೆಂಟ್ ತಂಡವನ್ನು 35.1 ಓವರ್ ಗಳಲ್ಲಿ 82 ರನ್ ಗಳಿಗೆ ಕಟ್ಟಿ ಹಾಕುವಲ್ಲಿ ಚಹಲ್ ತಂಡ ಯಶಸ್ವಿಯಾಗಿದೆ.

ಈ ಪ್ರದರ್ಶನದಿಂದ ಚಹಲ್ ಉತ್ತೇಜಿತರಾಗಿದ್ದು, ಕೌಂಟಿಯಲ್ಲಿ ಇನ್ನಷ್ಟು ಸಾಧನೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ಇದರಿಂದ ಅವರಿಗೆ ಮತ್ತೆ ಟೀಮ್ ಭಾರತ್ ಕ್ರಿಕೆಟ್ ತಂಡದ ಬಾಗಿಲು ತೆರೆಯುವ ಸಾಧ್ಯತೆ ನಿಚ್ಚಳವಾದಂತೆ ಆಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search