• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನ್ಯಾಯ ಕೇಳಿ ನಡೆದ ಪ್ರತಿಭಟನೆಯ ನೇತೃತ್ವ ಸಿಎಂ ಮಮತಾ!!

Tulunadu News Posted On August 17, 2024


  • Share On Facebook
  • Tweet It

ಪಶ್ಚಿಮ ಬಂಗಾಲದ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಷಯದಲ್ಲಿ ಇಡೀ ದೇಶದಲ್ಲಿ ಪ್ರತಿಭಟನೆಗಳು ಆಗುತ್ತಿವೆ. ಮಂಗಳೂರು ಸಹಿತ ಕರ್ನಾಟಕದ ವಿವಿಧ ಭಾಗಗಳನ್ನು ಸೇರಿಸಿ ದೇಶವ್ಯಾಪಿ ನಡೆಯುತ್ತಿರುವ ಪ್ರತಿಭಟನೆಯಂತೆ ಕೊಲ್ಕೊತ್ತಾದಲ್ಲಿಯೂ ಪ್ರತಿಭಟನೆ ನಡೆಯಿತು. ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಜನರು ಸೇರಿದ್ದರು. ಅದರ ನೇತೃತ್ವ ವಹಿಸಿಕೊಂಡವರು ಮಮತಾ ಬ್ಯಾನರ್ಜಿ.

ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಲದ ಮುಖ್ಯಮಂತ್ರಿ. ಅವರದ್ದೇ ಸರಕಾರದ ಆಡಳಿತವಿರುವ ರಾಜ್ಯದಲ್ಲಿ ಯುವತಿಯೊಬ್ಬಳು ಅತ್ಯಾಚಾರ, ಕೊಲೆಗೀಡಾದರೆ ಅವರೇ ಪ್ರತಿಭಟನೆ ಮಾಡಲು ಇಳಿಯುವುದೇ ಒಂದು ರೀತಿಯಲ್ಲಿ ಆಶ್ಚರ್ಯವಾಗುತ್ತದೆ. ಒಂದು ರಾಜ್ಯದ ಕಾನೂನು ಸುವ್ಯವಸ್ಥೆ ಆ ರಾಜ್ಯದ ಪೊಲೀಸ್ ಇಲಾಖೆಯ ಅಧೀನದಲ್ಲಿರುತ್ತದೆ. ಮಂಗಳೂರಿನಲ್ಲಿ ಪ್ರತಿಭಟನೆಗೆ ಸ್ಥಳೀಯ ಶಾಸಕರಾದ ವೇದವ್ಯಾಸ ಕಾಮತ್ ಹಾಗೂ ಭರತ್ ಶೆಟ್ಟಿಯವರು ಪಾದಯಾತ್ರೆಯ ಮೂಲಕ ಹೋಗುತ್ತಿದ್ದಾಗ ಅವರನ್ನು ತಡೆಯುವಂತಹ ಪ್ರಯತ್ನ ಪೊಲೀಸರು ಮಾಡಿದ್ದಾರೆ. ಯಾಕೆ? ನ್ಯಾಯ ಕೇಳಲು ಪ್ರತಿಭಟನೆ ಮಾಡುವುದು ತಪ್ಪಾ? ಹಾಗಾದರೆ ಪಶ್ಚಿಮ ಬಂಗಾಲದಲ್ಲಿ ಪ್ರತಿಭಟನೆ ಮಾಡಲು ಇಳಿದವರ ನೇತೃತ್ವ ವಹಿಸಿದ್ದು ಅಲ್ಲಿನ ಸಿಎಂ. ಹಾಗಾದರೆ ಮುಖ್ಯಮಂತ್ರಿಯನ್ನೇ ಪ್ರತಿಭಟನೆ ಮಾಡದಂತೆ ಅಲ್ಲಿನ ಪೊಲೀಸರು ತಡೆಯಬಲ್ಲರಾ?

ಪ್ರತಿಭಟನೆಯಲ್ಲಿ ಮಾತನಾಡಿದ ಸಿಎಂ ಬ್ಯಾನರ್ಜಿ ” ವೈದ್ಯೆಯ ಕುಟುಂಬಕ್ಕೆ ನ್ಯಾಯ ಕೇಳಲು ನಾವೆಲ್ಲ ಒಂದಾಗಿದ್ದೇವೆ” ಎಂದು ಹೇಳಿದ್ದಾರೆ. ಆದರೆ ಈ ಪ್ರತಿಭಟನೆಯ ಹಿಂದಿನ ದಿನ ಸೂರ್ಯ ಹುಟ್ಟುವ ಮೊದಲೇ ಕತ್ತಲೆಯಲ್ಲಿ ನಸುಕಿನ ಜಾವ ಆದದ್ದಾದರೂ ಏನು? 40 ಪುಂಡರ ತಂಡ ಆ ದುರ್ಘಟನೆ ನಡೆದ ಆಸ್ಪತ್ರೆಗೆ ನುಗ್ಗಿ ಅಲ್ಲಿನ ತುರ್ತು ಚಿಕಿತ್ಸಾ ವಿಭಾಗ, ಚಿಕಿತ್ಸಾ ಕೊಠಡಿ, ಔಷಧಗಳ ಸಂಗ್ರಹ ಕೊಠಡಿಯನ್ನು ಧ್ವಂಸ ಮಾಡಿದ್ದಾರೆ. ಅದರೊಂದಿಗೆ ಅಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಕೂಡ ಪುಡಿ ಮಾಡಿದ್ದು, ಅದರೊಂದಿಗೆ ಕಿರಿಯ ವೈದ್ಯರು ಪ್ರತಿಭಟನೆ ಮಾಡಲು ಹಾಕಿಕೊಂಡಿದ್ದ ವೇದಿಕೆಯನ್ನು ಕೂಡ ನಾಶಪಡಿಸಿದ್ದಾರೆ. ಇಡೀ ದೇಶವೇ ಬೆಚ್ಚಿಬಿದ್ದಂತೆ ನಡೆದಿರುವ ವೈದ್ಯೆಯ ಅತ್ಯಾಚಾರ, ಕೊಲೆ ನಡೆದಿರುವ ಆಸ್ಪತ್ರೆಗೆ ಪೂರ್ಣ ಸುರಕ್ಷತೆಯನ್ನು ನೀಡಬೇಕಾದ ಪೊಲೀಸ್ ಇಲಾಖೆ ಅಲ್ಲಿ ಕೇಸಿನ ಸಾಕ್ಷ್ಯಗಳನ್ನು ನಾಶವಾಗಲು ಅನುವು ಮಾಡಿಕೊಟ್ಟಂತೆ ಆದ ಘಟನೆ ಎಲ್ಲರಲ್ಲಿಯೂ ಅನುಮಾನ ಮೂಡಿಸಿದೆ. ಸದ್ಯ ಈ ಪ್ರಕರಣವನ್ನು ಸಿಬಿಐ ತನಿಖೆ ಮಾಡುತ್ತಿದ್ದು, ವೈದ್ಯೆಯ ಕುಟುಂಬಕ್ಕೆ ನ್ಯಾಯ ಸಿಗಲಿ ಎನ್ನುವುದು ತುಳುನಾಡು ನ್ಯೂಸ್ ಆಶಯ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search