• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನ್ಯಾಯ ಕೇಳಿ ನಡೆದ ಪ್ರತಿಭಟನೆಯ ನೇತೃತ್ವ ಸಿಎಂ ಮಮತಾ!!

Tulunadu News Posted On August 17, 2024
0


0
Shares
  • Share On Facebook
  • Tweet It

ಪಶ್ಚಿಮ ಬಂಗಾಲದ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಷಯದಲ್ಲಿ ಇಡೀ ದೇಶದಲ್ಲಿ ಪ್ರತಿಭಟನೆಗಳು ಆಗುತ್ತಿವೆ. ಮಂಗಳೂರು ಸಹಿತ ಕರ್ನಾಟಕದ ವಿವಿಧ ಭಾಗಗಳನ್ನು ಸೇರಿಸಿ ದೇಶವ್ಯಾಪಿ ನಡೆಯುತ್ತಿರುವ ಪ್ರತಿಭಟನೆಯಂತೆ ಕೊಲ್ಕೊತ್ತಾದಲ್ಲಿಯೂ ಪ್ರತಿಭಟನೆ ನಡೆಯಿತು. ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಜನರು ಸೇರಿದ್ದರು. ಅದರ ನೇತೃತ್ವ ವಹಿಸಿಕೊಂಡವರು ಮಮತಾ ಬ್ಯಾನರ್ಜಿ.

ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಲದ ಮುಖ್ಯಮಂತ್ರಿ. ಅವರದ್ದೇ ಸರಕಾರದ ಆಡಳಿತವಿರುವ ರಾಜ್ಯದಲ್ಲಿ ಯುವತಿಯೊಬ್ಬಳು ಅತ್ಯಾಚಾರ, ಕೊಲೆಗೀಡಾದರೆ ಅವರೇ ಪ್ರತಿಭಟನೆ ಮಾಡಲು ಇಳಿಯುವುದೇ ಒಂದು ರೀತಿಯಲ್ಲಿ ಆಶ್ಚರ್ಯವಾಗುತ್ತದೆ. ಒಂದು ರಾಜ್ಯದ ಕಾನೂನು ಸುವ್ಯವಸ್ಥೆ ಆ ರಾಜ್ಯದ ಪೊಲೀಸ್ ಇಲಾಖೆಯ ಅಧೀನದಲ್ಲಿರುತ್ತದೆ. ಮಂಗಳೂರಿನಲ್ಲಿ ಪ್ರತಿಭಟನೆಗೆ ಸ್ಥಳೀಯ ಶಾಸಕರಾದ ವೇದವ್ಯಾಸ ಕಾಮತ್ ಹಾಗೂ ಭರತ್ ಶೆಟ್ಟಿಯವರು ಪಾದಯಾತ್ರೆಯ ಮೂಲಕ ಹೋಗುತ್ತಿದ್ದಾಗ ಅವರನ್ನು ತಡೆಯುವಂತಹ ಪ್ರಯತ್ನ ಪೊಲೀಸರು ಮಾಡಿದ್ದಾರೆ. ಯಾಕೆ? ನ್ಯಾಯ ಕೇಳಲು ಪ್ರತಿಭಟನೆ ಮಾಡುವುದು ತಪ್ಪಾ? ಹಾಗಾದರೆ ಪಶ್ಚಿಮ ಬಂಗಾಲದಲ್ಲಿ ಪ್ರತಿಭಟನೆ ಮಾಡಲು ಇಳಿದವರ ನೇತೃತ್ವ ವಹಿಸಿದ್ದು ಅಲ್ಲಿನ ಸಿಎಂ. ಹಾಗಾದರೆ ಮುಖ್ಯಮಂತ್ರಿಯನ್ನೇ ಪ್ರತಿಭಟನೆ ಮಾಡದಂತೆ ಅಲ್ಲಿನ ಪೊಲೀಸರು ತಡೆಯಬಲ್ಲರಾ?

ಪ್ರತಿಭಟನೆಯಲ್ಲಿ ಮಾತನಾಡಿದ ಸಿಎಂ ಬ್ಯಾನರ್ಜಿ ” ವೈದ್ಯೆಯ ಕುಟುಂಬಕ್ಕೆ ನ್ಯಾಯ ಕೇಳಲು ನಾವೆಲ್ಲ ಒಂದಾಗಿದ್ದೇವೆ” ಎಂದು ಹೇಳಿದ್ದಾರೆ. ಆದರೆ ಈ ಪ್ರತಿಭಟನೆಯ ಹಿಂದಿನ ದಿನ ಸೂರ್ಯ ಹುಟ್ಟುವ ಮೊದಲೇ ಕತ್ತಲೆಯಲ್ಲಿ ನಸುಕಿನ ಜಾವ ಆದದ್ದಾದರೂ ಏನು? 40 ಪುಂಡರ ತಂಡ ಆ ದುರ್ಘಟನೆ ನಡೆದ ಆಸ್ಪತ್ರೆಗೆ ನುಗ್ಗಿ ಅಲ್ಲಿನ ತುರ್ತು ಚಿಕಿತ್ಸಾ ವಿಭಾಗ, ಚಿಕಿತ್ಸಾ ಕೊಠಡಿ, ಔಷಧಗಳ ಸಂಗ್ರಹ ಕೊಠಡಿಯನ್ನು ಧ್ವಂಸ ಮಾಡಿದ್ದಾರೆ. ಅದರೊಂದಿಗೆ ಅಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಕೂಡ ಪುಡಿ ಮಾಡಿದ್ದು, ಅದರೊಂದಿಗೆ ಕಿರಿಯ ವೈದ್ಯರು ಪ್ರತಿಭಟನೆ ಮಾಡಲು ಹಾಕಿಕೊಂಡಿದ್ದ ವೇದಿಕೆಯನ್ನು ಕೂಡ ನಾಶಪಡಿಸಿದ್ದಾರೆ. ಇಡೀ ದೇಶವೇ ಬೆಚ್ಚಿಬಿದ್ದಂತೆ ನಡೆದಿರುವ ವೈದ್ಯೆಯ ಅತ್ಯಾಚಾರ, ಕೊಲೆ ನಡೆದಿರುವ ಆಸ್ಪತ್ರೆಗೆ ಪೂರ್ಣ ಸುರಕ್ಷತೆಯನ್ನು ನೀಡಬೇಕಾದ ಪೊಲೀಸ್ ಇಲಾಖೆ ಅಲ್ಲಿ ಕೇಸಿನ ಸಾಕ್ಷ್ಯಗಳನ್ನು ನಾಶವಾಗಲು ಅನುವು ಮಾಡಿಕೊಟ್ಟಂತೆ ಆದ ಘಟನೆ ಎಲ್ಲರಲ್ಲಿಯೂ ಅನುಮಾನ ಮೂಡಿಸಿದೆ. ಸದ್ಯ ಈ ಪ್ರಕರಣವನ್ನು ಸಿಬಿಐ ತನಿಖೆ ಮಾಡುತ್ತಿದ್ದು, ವೈದ್ಯೆಯ ಕುಟುಂಬಕ್ಕೆ ನ್ಯಾಯ ಸಿಗಲಿ ಎನ್ನುವುದು ತುಳುನಾಡು ನ್ಯೂಸ್ ಆಶಯ.

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search