• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಶರದ್ ಪವಾರ್ ಅವರಿಗೆ ಇನ್ನು ಝಡ್ ಪ್ಲಸ್ ಭದ್ರತೆ! ಯಾಕೆ?

Tulunadu News Posted On August 23, 2024
0


0
Shares
  • Share On Facebook
  • Tweet It

ಕೇಂದ್ರ ಸರಕಾರ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ ಸಿಪಿ- ಎಸ್ ಪಿ)ಯ ಮುಖಂಡ ಶರದ್ ಪವಾರ್ ಅವರಿಗೆ ಇನ್ನು ವಿಶೇಷ ಗಣ್ಯರಿಗೆ ಮಾತ್ರ ನೀಡುವ ಝಡ್ ಪ್ಲಸ್ ಭದ್ರತಾ ವ್ಯವಸ್ಥೆಯನ್ನು ನೀಡಲು ತೀರ್ಮಾನಿಸಿದೆ. ಕೇಂದ್ರದ ಗೃಹ ಸಚಿವಾಲಯ ಮಹಾರಾಷ್ಟ್ರದ ಮಹಾನಾಯಕನಿಗೆ ಹೆಚ್ಚಿನ ಭದ್ರತೆ ನೀಡುವಂತೆ ಕೇಂದ್ರ ಮೀಸಲು ಪೊಲೀಸ್ ಪಡೆ ( ಸಿಆರ್ ಪಿಎಫ್) ಅಧಿಕಾರಿಗಳಿಗೆ ಸೂಚನೆ ನೀಡಿದೆ. ಇನ್ನು ಮುಂದೆ ಸಿಆರ್ ಪಿಎಫ್ ಇದರ 55 ಯೋಧರು 83 ವರ್ಷದ ಶರದ್ ಪವಾರ್ ಅವರ ಸುರಕ್ಷತಾ ವಲಯದಲ್ಲಿ ಯಾವತ್ತೂ ಕಾವಲು ಕಾಯುತ್ತಿರುತ್ತಾರೆ.
ಸಾಮಾನ್ಯವಾಗಿ ದೇಶದ ಉನ್ನತ ನಾಯಕರ ಭದ್ರತೆಯ ಬಗ್ಗೆ ಆಗಾಗ ಪರಿಶೀಲನಾ ಸಭೆ ಕೇಂದ್ರ ಮಟ್ಟದಲ್ಲಿ ನಡೆಯುತ್ತಲೇ ಇರುತ್ತದೆ. ಯಾರಿಗಾದರೂ ಬೆದರಿಕೆ ಇದ್ದಲ್ಲಿ ಅಥವಾ ಗುಪ್ತಚರ ಇಲಾಖೆಯಿಂದ ಇಂತಿಂತವರ ಮೇಲೆ ಏನಾದರೂ ದಾಳಿ ಸಂಭವಿಸಬಹುದು ಎನ್ನುವ ಮುನ್ಸೂಚನೆ ಇದ್ದಲ್ಲಿ ಕೇಂದ್ರ ಗೃಹ ಸಚಿವಾಲಯ ಭದ್ರತಾ ವ್ಯವಸ್ಥೆಯನ್ನು ಹೆಚ್ಚಿಸುತ್ತದೆ. ವಿವಿಐಪಿಗಳಿಗೆ ನೀಡುವ ಸುರಕ್ಷತಾ ವ್ಯವಸ್ಥೆಗಳಲ್ಲಿ ವಿವಿಧ ಹಂತಗಳು ಇದ್ದು, ಏಕ್ಸ್, ವೈ, ವೈ ಪ್ಲಸ್, ಝಡ್, ಝಡ್ ಪ್ಲಸ್ ಕ್ಯಾಟಗರಿ ಇರುತ್ತದೆ.
ಈಗಾಗಲೇ ಶರದ್ ಪವಾರ್ ಅವರಿಗೆ ಹೆಚ್ಚಿನ ಭದ್ರತೆ ಒದಗಿಸುವ ತಂಡ ಮಹಾರಾಷ್ಟ್ರಕ್ಕೆ ಬಂದಿಳಿದಿದ್ದು, ಪವಾರ್ ಅವರ ಸುರಕ್ಷತೆಯ ಹೊಣೆಯನ್ನು ಕೈಗೆತ್ತಿಕೊಂಡಿದೆ. ಈ ವರ್ಷದ ಅಂತ್ಯದಲ್ಲಿ ಮಹಾರಾಷ್ಟ್ರದ ವಿಧಾನಸಭೆಗೆ ಚುನಾವಣೆಗಳು ನಡೆಯಲಿದ್ದು, ಈ ಹಂತದಲ್ಲಿ ಏನಾದರೂ ಅಹಿತಕರ ಘಟನೆಗಳು ಸಂಭವಿಸದಂತೆ ಈ ಮುಂಜಾಗ್ರತಾ ಕ್ರಮ ಪ್ರಾಮುಖ್ಯವೆನಿಸಿದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search