• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಫ್ರೀ ಟಿಕೆಟ್ ಬೇಡಾ ಎಂದು ಮಹಿಳೆಯರಿಂದ ಒತ್ತಡ ಎಂದ ಡಿಸಿಎಂ!

Tulunadu News Posted On October 31, 2024


  • Share On Facebook
  • Tweet It

ಮಹಿಳೆಯರು ಸರಕಾರದ ನಿರ್ದಿಷ್ಟ್ಯ ಕ್ಯಾಟಗರಿಯ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದ್ದ ಯೋಜನೆ ಶಕ್ತಿಗೆ ಈಗ ಕಂಟಕ ಬಂದಂತಿದೆ. ಈ ಯೋಜನೆ ನಿಲ್ಲುವ ಸಂಕೇತವನ್ನು ಸ್ವತ: ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೀಡಿದ್ದಾರೆ. ಶಕ್ತಿ ಯೋಜನೆಯನ್ನು ಮುಂದುವರೆಸಬೇಕಾ, ಬೇಡ್ವಾ ಎನ್ನುವುದನ್ನು ಪರಿಶೀಲಿಸುತ್ತೇವೆ ಎಂದು ಡಿಸಿಎಂ ಹೇಳುವ ಮೂಲಕ ಈ ಯೋಜನೆಯ ಅಂತ್ಯಕ್ಕೆ ನಾಂದಿ ಹಾಡಿದಂತಿದೆ.
ಇದಕ್ಕೆ ಅವರು ನೀಡಿರುವ ಕಾರಣ ಮಾತ್ರ ಆಶ್ಚರ್ಯ ತರುವಂತದ್ದು. ಶಕ್ತಿ ಯೋಜನೆ ಬಗ್ಗೆ ಮರುಚಿಂತನೆ ನಡೆಸುವಂತೆ ಸ್ತ್ರೀಯರಿಂದಲೇ ಒತ್ತಡವಿದೆ. ಅನೇಕ ಹೆಣ್ಣುಮಕ್ಕಳು ನಮಗೆ ಟಿಕೆಟ್ ತೆಗೆದುಕೊಳ್ಳುವ ಶಕ್ತಿ ಇದೆ. ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ನಮ್ಮಿಂದ ಉಚಿತ ಪ್ರಯಾಣ ಬೇಡವೆಂದಿದ್ದಾರೆ. ಟ್ವೀಟ್, ಇಮೇಲ್ ಮೂಲಕ ಅನೇಕ ಮಹಿಳೆಯರು ಈ ಬಗ್ಗೆ ತಿಳಿಸುತ್ತಿದ್ದಾರೆ ಎಂದು ಡಿಕೆಶಿ ತಿಳಿಸಿದ್ದಾರೆ. ಅನುಕೂಲ ಸ್ಥಿತಿಯಲ್ಲಿರುವ ಹೆಣ್ಣುಮಕ್ಕಳು ಹಣ ನೀಡಿ ಟಿಕೆಟ್ ಪಡೆಯಲು ಮುಂದಾದರೂ ನಿರ್ವಾಹಕರು ಪ್ರಯಾಣ ದರ ತೆಗೆದುಕೊಳ್ಳುತ್ತಿಲ್ಲ. ಕೆಲವು ನಿರ್ವಾಹಕರು ಹಣ ಪಡೆದರೂ ಟಿಕೆಟ್ ನೀಡುತ್ತಿಲ್ಲ ಎಂದು ಆಪಾದನೆಗಳಿವೆ ಎಂದು ಡಿಸಿಎಂ ತಿಳಿಸಿದರು.
ಈ ಹಿನ್ನಲೆಯಲ್ಲಿ ಶಕ್ತಿ ಯೋಜನೆ ಮರುಪರಿಶೀಲನೆ ಬಗ್ಗೆ ಚರ್ಚೆ ಮಾಡುತ್ತೇವೆ. ಇದರ ಬಗ್ಗೆ ಶೀಘ್ರದಲ್ಲಿಯೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಜೊತೆ ಸಭೆ ಮಾಡುತ್ತೇವೆ. ಪ್ರತ್ಯೇಕವಾಗಿ ಸಭೆ ನಡೆಸಿ ಶಕ್ತಿ ಯೋಜನೆ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ಹೇಳಿದ್ದಾರೆ.
ಶಕ್ತಿ ಯೋಜನೆ ಜೂನ್ 11 ರಂದು ಜಾರಿಗೆ ಬಂದಿದ್ದು, ಮಹಿಳಾ ಪ್ರಯಾಣಿಕರು ಉಚಿತ ಬಸ್ ಪ್ರಯಾಣಕ್ಕಾಗಿ ಶೂನ್ಯ ಟಿಕೆಟ್ ಪಡೆಯಲು ಆಧಾರ್ ಕಾರ್ಡ್ ಅಥವಾ ಕೇಂದ್ರ ಅಥವಾ ರಾಜ್ಯ ಸರಕಾರದ ಗುರುತಿನ ಚೀಟಿಯನ್ನು ತೋರಿಸಬೇಕಾಗುತ್ತದೆ. ನಿರ್ವಾಹಕರು ಮಹಿಳೆಯರ ಗುರುತಿನ ಚೀಟಿಯನ್ನು ಪರಿಶೀಲಿಸಿದ ನಂತರ “ಶೂನ್ಯ ಟಿಕೆಟ್” (ಉಚಿತ ಟಿಕೆಟ್) ನೀಡುತ್ತಿದ್ದಾರೆ. ಇನ್ನು ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಸರಕಾರದ ನಾಲ್ಕೂ ನಿಗಮಗಳಾದ ಕೆಎಸ್ ಆರ್ ಟಿಸಿ, ಎನ್ ಡಬ್ಲೂಕೆಆರ್ ಟಿಸಿ, ಕೆಕೆಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ಗಳಲ್ಲಿ ಹೆಣ್ಣುಮಕ್ಕಳು ಪ್ರಯಾಣ ಮಾಡುವುದು ಹೆಚ್ಚಾಗಿದೆ. ಇದರಿಂದ ಬಸ್ ಗಳು ತುಂಬಿ ತುಳುಕುತ್ತಿವೆ. ಈ ಕಾರಣದಿಂದ ಶಾಲಾ – ಕಾಲೇಜು, ಕಚೇರಿಗಳಿಗೆ ತೆರಳುವವರಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ ಎನ್ನುವ ಆರೋಪ ಕೇಳಿ ಬರುತ್ತಿದೆ.
ಆದರೆ ಹೀಗೆ ಡಿಸಿಎಂ ಹೇಳಿಕೆ ಕೊಟ್ಟ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಹೇಳಿಕೆ ಕೂಡ ಹೊರಗೆ ಬಂದಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮಹಿಳೆಯರ ಶಕ್ತಿ ಯೋಜನೆ ಪರಿಷ್ಕರಣೆ ಇಲ್ಲ. ಕೆಲವು ಮಹಿಳೆಯರು ಯೋಜನೆ ಬೇಡಾ ಎಂದು ಹೇಳಿರಬಹುದು. ಆದರೆ ರಾಜ್ಯದಲ್ಲಿ ಶಕ್ತಿ ಯೋಜನೆಯ ಪರಿಷ್ಕರಣೆಯ ಪ್ರಸ್ತಾಪ ಇಲ್ಲ ಎಂದು ಹೇಳಿದ್ದಾರೆ. ಒಂದು ಕಡೆ ಡಿಸಿಎಂ ಶಕ್ತಿ ಯೋಜನೆಯನ್ನು ನಿಲ್ಲಿಸುವ ಹಿಂಟ್ ನೀಡುವುದು, ಮತ್ತೊಂದೆಡೆ ಸಿಎಂ ಅಂತಹ ಸಾಧ್ಯತೆ ಇಲ್ಲ ಎಂದು ಹೇಳುವುದು ಮಹಿಳೆಯರಲ್ಲಿ ಗೊಂದಲಕ್ಕೆ ಕಾರಣವಾಗಿದೆ. ಒಟ್ಟಿನಲ್ಲಿ ಈ ಯೋಜನೆಯ ಭವಿಷ್ಯ ಮಾತ್ರ ಅಡಕತ್ತರಿಗೆ ಸಿಲುಕಿರುವುದು ಮಾತ್ರ ಸತ್ಯ.
ಇದೇ ಸಂದರ್ಭದಲ್ಲಿ ರಾಜ್ಯದ ಮಹಿಳೆಯರು ಡಿಕೆಶಿ ಕನಸಲ್ಲಿ ಬಂದು ಶಕ್ತಿ ಯೋಜನೆ ನಿಲ್ಲಿಸೋಕೆ ಹೇಳಿದ್ರಾ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search