• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

24 ವರ್ಷದ ಯುವತಿಯಿಂದ ಯೋಗಿ ಆದಿತ್ಯನಾಥ್ ಹತ್ಯಾ ಬೆದರಿಕೆ!

Tulunadu News Posted On November 4, 2024
0


0
Shares
  • Share On Facebook
  • Tweet It

ಇತ್ತೀಚಿಗಷ್ಟೇ ಬಾಬಾ ಸಿದ್ಧಿಕಿ ಎನ್ನುವ ಮಹಾರಾಷ್ಟ್ರದ ಶಾಸಕನನ್ನು ಬಿಷ್ಣೋಯಿ ಗ್ಯಾಂಗ್ ಸದಸ್ಯರು ಎಂದು ಹೇಳಲಾಗುವ ಕೆಲವು ಶಾರ್ಪ್ ಶೂಟರ್ ಗಳು ಹತ್ಯೆ ಮಾಡಿದ ವಿಷಯ ಇನ್ನೂ ಹಸಿಯಾಗಿರುವಾಗಲೇ ಅದೇ ಮಾದರಿಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಕರೆ ಬಂದಿದೆ. ಹಾಗೆ ಮುಖ್ಯಮಂತ್ರಿಗಳನ್ನೇ ಮುಗಿಸುವುದಾಗಿ ಹೇಳಿರುವ ವ್ಯಕ್ತಿ ಯಾರೆಂದು ಪೊಲೀಸ್ ಅಧಿಕಾರಿಗಳು ತನಿಖೆಗೆ ಇಳಿದಾಗ ಗೊತ್ತಾಗಿರುವುದು ಏನೆಂದರೆ ಬೆದರಿಕೆ ನೀಡಿದ್ದು ಓರ್ವ ಯುವತಿ. ಆಕೆಯ ವಯಸ್ಸು 24. ಇನ್ನು ಆಕೆಯ ಹೆಸರು ಫಾತಿಮಾ ಖಾನ್. ಫಾತಿಮಾ ಖಾನ್ ಸಾಫ್ಟವೇರ್ ತಂತ್ರಜ್ಞಾನದಲ್ಲಿ ಪದವಿ ಹೊಂದಿದ್ದು ಥಾನೆ ಜಿಲ್ಲೆಯ ಉಲ್ಲಾಸ್ ನಗರದಲ್ಲಿ ವಾಸಿಸುತ್ತಿದ್ದಾಳೆ.

ಸದ್ಯ ಮುಂಬೈ ಪೊಲೀಸರು ಆಕೆ ಮಾನಸಿಕ ಸ್ಥಿಮಿತ ಸರಿಯಿಲ್ಲ ಎನ್ನುವ ವಿಷಯವನ್ನು ಬಹಿರಂಗಪಡಿಸಿದ್ದು, ಅವಳ ತಂದೆ ಟಿಂಬರ್ ಕಾರ್ಖಾನೆಯನ್ನು ಉದ್ಯೋಗಿಯಾಗಿದ್ದಾರೆ ಎನ್ನುವ ವಿಷಯವನ್ನು ಪತ್ತೆ ಹಚ್ಚಿದ್ದಾರೆ. ಮುಂಬೈ ಪೊಲೀಸರ ವಾಟ್ಸಪ್ ನಂಬರಿಗೆ ಬಂದ ಸಂದೇಶದಲ್ಲಿ ಮುಂದಿನ ಹತ್ತು ದಿನಗಳ ಒಳಗೆ ಯೋಗಿ ಆದಿತ್ಯನಾಥ್ ಅವರು ತಮ್ಮ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯದಿದ್ದರೆ ಅವರನ್ನು ಬಾಬಾ ಸಿದ್ದೀಕಿ ಹತ್ಯಾ ಶೈಲಿಯಲ್ಲಿಯೇ ಮುಗಿಸುವುದಾಗಿ ಸಂದೇಶದಲ್ಲಿ ತಿಳಿಸಲಾಗಿತ್ತು. ಆ ವಾಟ್ಸಪ್ ಸಂದೇಶ ಅಜ್ಞಾತ ಸಂಖ್ಯೆಯಿಂದ ಬಂದಿತ್ತು. ಆ ಸಂದೇಶದ ಬೆನ್ನು ಹಿಡಿದ ಮುಂಬೈ ಭಯೋತ್ಪಾದಕ ನಿಗ್ರಹ ದಳ ಮತ್ತು ಉಲ್ಲಾಸ್ ನಗರ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಆ ಯುವತಿಯ ಇರುವಿಕೆಯ ಜಾಡನ್ನು ಪತ್ತೆಹಚ್ಚಿದ್ದಾರೆ. ಸದ್ಯ ಪೊಲೀಸರು ಈ ವಿಷಯವನ್ನು ಗಂಭೀರವಾಗಿ ಸ್ವೀಕರಿಸಿದ್ದು, ಮಹಾರಾಷ್ಟ್ರದಲ್ಲಿ ಚುನಾವಣೆ ಸನ್ನಿಹಿತವಾಗಿದ್ದು, ಯೋಗಿ ಆದಿತ್ಯನಾಥ್ ಅವರು ಈ ತಿಂಗಳು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದಾರೆ. ಆದ್ದರಿಂದ ಈ ವಿಷಯದಲ್ಲಿ ಪೊಲೀಸರು ಸಾಕಷ್ಟು ಮುಂಜಾಗ್ರತಾ ಕ್ರಮವನ್ನು ತೆಗೆದುಕೊಂಡಿದ್ದಾರೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search