• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

24 ವರ್ಷದ ಯುವತಿಯಿಂದ ಯೋಗಿ ಆದಿತ್ಯನಾಥ್ ಹತ್ಯಾ ಬೆದರಿಕೆ!

Tulunadu News Posted On November 4, 2024


  • Share On Facebook
  • Tweet It

ಇತ್ತೀಚಿಗಷ್ಟೇ ಬಾಬಾ ಸಿದ್ಧಿಕಿ ಎನ್ನುವ ಮಹಾರಾಷ್ಟ್ರದ ಶಾಸಕನನ್ನು ಬಿಷ್ಣೋಯಿ ಗ್ಯಾಂಗ್ ಸದಸ್ಯರು ಎಂದು ಹೇಳಲಾಗುವ ಕೆಲವು ಶಾರ್ಪ್ ಶೂಟರ್ ಗಳು ಹತ್ಯೆ ಮಾಡಿದ ವಿಷಯ ಇನ್ನೂ ಹಸಿಯಾಗಿರುವಾಗಲೇ ಅದೇ ಮಾದರಿಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಕರೆ ಬಂದಿದೆ. ಹಾಗೆ ಮುಖ್ಯಮಂತ್ರಿಗಳನ್ನೇ ಮುಗಿಸುವುದಾಗಿ ಹೇಳಿರುವ ವ್ಯಕ್ತಿ ಯಾರೆಂದು ಪೊಲೀಸ್ ಅಧಿಕಾರಿಗಳು ತನಿಖೆಗೆ ಇಳಿದಾಗ ಗೊತ್ತಾಗಿರುವುದು ಏನೆಂದರೆ ಬೆದರಿಕೆ ನೀಡಿದ್ದು ಓರ್ವ ಯುವತಿ. ಆಕೆಯ ವಯಸ್ಸು 24. ಇನ್ನು ಆಕೆಯ ಹೆಸರು ಫಾತಿಮಾ ಖಾನ್. ಫಾತಿಮಾ ಖಾನ್ ಸಾಫ್ಟವೇರ್ ತಂತ್ರಜ್ಞಾನದಲ್ಲಿ ಪದವಿ ಹೊಂದಿದ್ದು ಥಾನೆ ಜಿಲ್ಲೆಯ ಉಲ್ಲಾಸ್ ನಗರದಲ್ಲಿ ವಾಸಿಸುತ್ತಿದ್ದಾಳೆ.

ಸದ್ಯ ಮುಂಬೈ ಪೊಲೀಸರು ಆಕೆ ಮಾನಸಿಕ ಸ್ಥಿಮಿತ ಸರಿಯಿಲ್ಲ ಎನ್ನುವ ವಿಷಯವನ್ನು ಬಹಿರಂಗಪಡಿಸಿದ್ದು, ಅವಳ ತಂದೆ ಟಿಂಬರ್ ಕಾರ್ಖಾನೆಯನ್ನು ಉದ್ಯೋಗಿಯಾಗಿದ್ದಾರೆ ಎನ್ನುವ ವಿಷಯವನ್ನು ಪತ್ತೆ ಹಚ್ಚಿದ್ದಾರೆ. ಮುಂಬೈ ಪೊಲೀಸರ ವಾಟ್ಸಪ್ ನಂಬರಿಗೆ ಬಂದ ಸಂದೇಶದಲ್ಲಿ ಮುಂದಿನ ಹತ್ತು ದಿನಗಳ ಒಳಗೆ ಯೋಗಿ ಆದಿತ್ಯನಾಥ್ ಅವರು ತಮ್ಮ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯದಿದ್ದರೆ ಅವರನ್ನು ಬಾಬಾ ಸಿದ್ದೀಕಿ ಹತ್ಯಾ ಶೈಲಿಯಲ್ಲಿಯೇ ಮುಗಿಸುವುದಾಗಿ ಸಂದೇಶದಲ್ಲಿ ತಿಳಿಸಲಾಗಿತ್ತು. ಆ ವಾಟ್ಸಪ್ ಸಂದೇಶ ಅಜ್ಞಾತ ಸಂಖ್ಯೆಯಿಂದ ಬಂದಿತ್ತು. ಆ ಸಂದೇಶದ ಬೆನ್ನು ಹಿಡಿದ ಮುಂಬೈ ಭಯೋತ್ಪಾದಕ ನಿಗ್ರಹ ದಳ ಮತ್ತು ಉಲ್ಲಾಸ್ ನಗರ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಆ ಯುವತಿಯ ಇರುವಿಕೆಯ ಜಾಡನ್ನು ಪತ್ತೆಹಚ್ಚಿದ್ದಾರೆ. ಸದ್ಯ ಪೊಲೀಸರು ಈ ವಿಷಯವನ್ನು ಗಂಭೀರವಾಗಿ ಸ್ವೀಕರಿಸಿದ್ದು, ಮಹಾರಾಷ್ಟ್ರದಲ್ಲಿ ಚುನಾವಣೆ ಸನ್ನಿಹಿತವಾಗಿದ್ದು, ಯೋಗಿ ಆದಿತ್ಯನಾಥ್ ಅವರು ಈ ತಿಂಗಳು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದಾರೆ. ಆದ್ದರಿಂದ ಈ ವಿಷಯದಲ್ಲಿ ಪೊಲೀಸರು ಸಾಕಷ್ಟು ಮುಂಜಾಗ್ರತಾ ಕ್ರಮವನ್ನು ತೆಗೆದುಕೊಂಡಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search